<p><strong>ಹಾಸನ: </strong>ವರ್ಷಕ್ಕೆ ಒಂದು ಬಾರಿಯಷ್ಟೇ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುವ ಅಧಿದೇವತೆ ಹಾಸನಾಂಬೆಯ ಗರ್ಭಗುಡಿ ಬಾಗಿಲನ್ನು ಗುರುವಾರ ಶಾಸ್ತ್ರೋಕ್ತವಾಗಿ ತೆರೆಯಲಾಯಿತು.</p>.<p>ಸಂಪ್ರದಾಯದಂತೆ ಅಶ್ವಯುಜ ಮಾಸದ ಪೂರ್ಣಿಮೆಯ ನಂತರದ ಮೊದಲ ಗುರುವಾರ ಮಧ್ಯಾಹ್ನ 12.35ಕ್ಕೆ ತಳವಾರ ವಂಶದ ನರಸಿಂಹ ರಾಜ ಅರಸ್ ಬಾಳೆ ಕಂದು ಕಡಿದ ಕೂಡಲೇ ಭಕ್ತರ ಜಯಘೋಷ ಮೊಳಗಿತು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ, ಜಿಲ್ಲಾಧಿಕಾರಿ ಆರ್.ಗಿರೀಶ್, ತಹಶೀಲ್ದಾರ್ ಮೇಘನಾ, ದೇವಸ್ಥಾನದ ಆಡಳಿತಾಧಿಕಾರಿ ಎಚ್.ಎಲ್.ನಾಗರಾಜ್ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಬಾಗಿಲು ತೆರೆಯಲಾಯಿತು. ಹಾಸನಾಂಬ, ಸಿದ್ದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ದೇವಾಲಯವನ್ನು ಹೂವುಗಳಿಂದ ಅಲಂಕರಿಸಲಾಗಿತ್ತು.</p>.<p>ಮೊದಲ ದಿನ ದೇವಿಯ ಗರ್ಭಗುಡಿ ಸ್ವಚ್ಛತೆ, ಸುಣ್ಣ ಬಳಿಯುವುದು ಹಾಗೂ ಪೂಜಾ ಕಾರ್ಯ ನಡೆಯಿತು. ಬಂದಿದ್ದ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿ ಬಾಗಿಲು ಮುಚ್ಚಿದರು.</p>.<p>ಅ.28ರ ವರೆಗೆ ಅಹೋರಾತ್ರಿ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 29ರ ಬೆಳಿಗ್ಗೆ ಧಾರ್ಮಿಕ ವಿಧಿವಿಧಾನಗಳ ಅನ್ವಯ ಪೂಜೆ ನೆರವೇರಿಸಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ.</p>.<p>ಸಚಿವ ಮಾಧುಸ್ವಾಮಿ ಮಾತನಾಡಿ, ’ದೇವಿಯ ಆಶೀರ್ವಾದದಿಂದ ನಾಡಿನಲ್ಲಿ ಉತ್ತಮ ಮಳೆ-ಬೆಳೆಯಾಗಿದ್ದು, ಇದೇ ವಾತಾವರಣ ಮುಂದುವರಿಯಲಿ ಎಂದು ಬೇಡಿಕೊಂಡಿದ್ದೇನೆ’ ಎಂದರು.</p>.<p><strong>ಇದನ್ನೂ ಓದಿ...<a href="https://www.prajavani.net/stories/stateregional/hannodhu-dina-ahorathiri-674270.html" target="_top">ಹಾಸನಾಂಬೆ ದರ್ಶನೋತ್ಸವ: ಹನ್ನೊಂದು ದಿನ ಅಹೋರಾತ್ರಿ ದರ್ಶನ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ವರ್ಷಕ್ಕೆ ಒಂದು ಬಾರಿಯಷ್ಟೇ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುವ ಅಧಿದೇವತೆ ಹಾಸನಾಂಬೆಯ ಗರ್ಭಗುಡಿ ಬಾಗಿಲನ್ನು ಗುರುವಾರ ಶಾಸ್ತ್ರೋಕ್ತವಾಗಿ ತೆರೆಯಲಾಯಿತು.</p>.<p>ಸಂಪ್ರದಾಯದಂತೆ ಅಶ್ವಯುಜ ಮಾಸದ ಪೂರ್ಣಿಮೆಯ ನಂತರದ ಮೊದಲ ಗುರುವಾರ ಮಧ್ಯಾಹ್ನ 12.35ಕ್ಕೆ ತಳವಾರ ವಂಶದ ನರಸಿಂಹ ರಾಜ ಅರಸ್ ಬಾಳೆ ಕಂದು ಕಡಿದ ಕೂಡಲೇ ಭಕ್ತರ ಜಯಘೋಷ ಮೊಳಗಿತು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ, ಜಿಲ್ಲಾಧಿಕಾರಿ ಆರ್.ಗಿರೀಶ್, ತಹಶೀಲ್ದಾರ್ ಮೇಘನಾ, ದೇವಸ್ಥಾನದ ಆಡಳಿತಾಧಿಕಾರಿ ಎಚ್.ಎಲ್.ನಾಗರಾಜ್ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಬಾಗಿಲು ತೆರೆಯಲಾಯಿತು. ಹಾಸನಾಂಬ, ಸಿದ್ದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ದೇವಾಲಯವನ್ನು ಹೂವುಗಳಿಂದ ಅಲಂಕರಿಸಲಾಗಿತ್ತು.</p>.<p>ಮೊದಲ ದಿನ ದೇವಿಯ ಗರ್ಭಗುಡಿ ಸ್ವಚ್ಛತೆ, ಸುಣ್ಣ ಬಳಿಯುವುದು ಹಾಗೂ ಪೂಜಾ ಕಾರ್ಯ ನಡೆಯಿತು. ಬಂದಿದ್ದ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿ ಬಾಗಿಲು ಮುಚ್ಚಿದರು.</p>.<p>ಅ.28ರ ವರೆಗೆ ಅಹೋರಾತ್ರಿ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 29ರ ಬೆಳಿಗ್ಗೆ ಧಾರ್ಮಿಕ ವಿಧಿವಿಧಾನಗಳ ಅನ್ವಯ ಪೂಜೆ ನೆರವೇರಿಸಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ.</p>.<p>ಸಚಿವ ಮಾಧುಸ್ವಾಮಿ ಮಾತನಾಡಿ, ’ದೇವಿಯ ಆಶೀರ್ವಾದದಿಂದ ನಾಡಿನಲ್ಲಿ ಉತ್ತಮ ಮಳೆ-ಬೆಳೆಯಾಗಿದ್ದು, ಇದೇ ವಾತಾವರಣ ಮುಂದುವರಿಯಲಿ ಎಂದು ಬೇಡಿಕೊಂಡಿದ್ದೇನೆ’ ಎಂದರು.</p>.<p><strong>ಇದನ್ನೂ ಓದಿ...<a href="https://www.prajavani.net/stories/stateregional/hannodhu-dina-ahorathiri-674270.html" target="_top">ಹಾಸನಾಂಬೆ ದರ್ಶನೋತ್ಸವ: ಹನ್ನೊಂದು ದಿನ ಅಹೋರಾತ್ರಿ ದರ್ಶನ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>