<p><strong>ಹಾಸನ</strong>: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶುಕ್ರವಾರ ಸಂಜೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದೆ.</p>.<p>ನಗರದಲ್ಲಿ ಸುಮಾರು ಒಂದು ತಾಸಿಗೂ ಅಧಿಕ ರಭಸದ ಮಳೆ ಸುರಿದ ಪರಿಣಾಮ ಜನಜೀವನಅಸ್ತವ್ಯಸ್ತವಾಯಿತು. ಹಲವು ರಸ್ತೆಗಳಲ್ಲಿ ಜಲಾವೃತವಾಗಿ ವಾಹನ ಸಂಚಾರಕ್ಕೆ ವಾಹನ ಸಂಚಾರಕ್ಕೆಅಡ್ಡಿಯಾಗಿದೆ. ಚರಂಡಿ ತುಂಬಿ ರಸ್ತೆ ಮೇಲೆ ನೀರು ಹರಿಯುತ್ತಿದೆ.</p>.<p>ಬಿ.ಎಂ ರಸ್ತೆ, ಎಂ.ಜಿ. ರಸ್ತೆ, ಮಹಾವೀರ ವೃತ್ತದಲ್ಲಿ ನೀರು ನಿಂತು ವಾಹನ ಸಂಚಾರ ಹಾಗೂ ಪಾದಚಾರಿಗಳ ಓಡಾಟಕ್ಕೆ ಅಡ್ಡಿಯಾಯಿತು. ನಗರದಲ್ಲಿ ಯುಜಿಡಿ, ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗಳಿಗಾಗಿ ಅಗೆದಿರುವ ರಸ್ತೆಗಳಲ್ಲಿ ನೀರು ನಿಂತು ಕೆಸರು ಗದ್ದೆಯಂತಾಗಿದ್ದು, ಜನರು ಕಾಲ್ನಡಿಗೆಯಲ್ಲಿ ಸಂಚರಿಸುವುದೂ ದುಸ್ತರವಾಗಿದೆ.</p>.<p>ನಗರದ ಕೆಲವು ತಗ್ಗು ಪ್ರದೇಶದ ಬಡಾವಣೆಗಳಿಗೆ ನೀರು ನುಗ್ಗಿ, ಸಾಕಷ್ಟು ತೊಂದರೆ ಉಂಟಾಯಿತು. ಮಧ್ಯಾಹ್ನದಿಂದಲೇ ಮೋಡ ಮುಸುಕಿದ ವಾತಾವರಣ ಇತ್ತು. ಸಂಜೆ 5 ಗಂಟೆಗೆ ಗುಡುಗು ಸಹಿತ ಮಳೆ<br />ಸುರಿಯಲು ಆರಂಭಿಸಿತು. ಹವಾಮಾನ ಇಲಾಖೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ<br />‘ಆರೆಂಜ್ ಅಲರ್ಟ್’ ಘೋಷಿಸಿತ್ತು.</p>.<p>ಸಕಲೇಶಪುರ ತಾಲ್ಲೂಕಿನಲ್ಲೂ ಮಧ್ಯಾಹ್ನ ಒಂದು ತಾಸು ಧಾರಾಕಾರ ಮಳೆ ಸುರಿಯಿತು. ಒಂದು ವಾರದಿಂದಲೂ ತುಂತುರು ಮಳೆಯಾಗುತ್ತಿದೆ. ಆದರೆ ಇಂದು ರಭಸದ ಮಳೆ ಸುರಿದಿದೆ.ವಿಜಯದಶಮಿ ವಿಶೇಷ ಪೂಜೆಗಾಗಿ ದೇವಸ್ಥಾನಗಳಿಗೆ ತೆರಳಿದ್ದ ಭಕ್ತರು ಮನೆ ತಲುಪಲು ಪರದಾಡುವಂತಾಯಿತು. ಚರಂಡಿಗಳುತುಂಬಿ ರಸ್ತೆಗಳಲ್ಲಿ ಹೊಳೆಯಂತೆ ನೀರು ಹರಿಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶುಕ್ರವಾರ ಸಂಜೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದೆ.</p>.<p>ನಗರದಲ್ಲಿ ಸುಮಾರು ಒಂದು ತಾಸಿಗೂ ಅಧಿಕ ರಭಸದ ಮಳೆ ಸುರಿದ ಪರಿಣಾಮ ಜನಜೀವನಅಸ್ತವ್ಯಸ್ತವಾಯಿತು. ಹಲವು ರಸ್ತೆಗಳಲ್ಲಿ ಜಲಾವೃತವಾಗಿ ವಾಹನ ಸಂಚಾರಕ್ಕೆ ವಾಹನ ಸಂಚಾರಕ್ಕೆಅಡ್ಡಿಯಾಗಿದೆ. ಚರಂಡಿ ತುಂಬಿ ರಸ್ತೆ ಮೇಲೆ ನೀರು ಹರಿಯುತ್ತಿದೆ.</p>.<p>ಬಿ.ಎಂ ರಸ್ತೆ, ಎಂ.ಜಿ. ರಸ್ತೆ, ಮಹಾವೀರ ವೃತ್ತದಲ್ಲಿ ನೀರು ನಿಂತು ವಾಹನ ಸಂಚಾರ ಹಾಗೂ ಪಾದಚಾರಿಗಳ ಓಡಾಟಕ್ಕೆ ಅಡ್ಡಿಯಾಯಿತು. ನಗರದಲ್ಲಿ ಯುಜಿಡಿ, ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗಳಿಗಾಗಿ ಅಗೆದಿರುವ ರಸ್ತೆಗಳಲ್ಲಿ ನೀರು ನಿಂತು ಕೆಸರು ಗದ್ದೆಯಂತಾಗಿದ್ದು, ಜನರು ಕಾಲ್ನಡಿಗೆಯಲ್ಲಿ ಸಂಚರಿಸುವುದೂ ದುಸ್ತರವಾಗಿದೆ.</p>.<p>ನಗರದ ಕೆಲವು ತಗ್ಗು ಪ್ರದೇಶದ ಬಡಾವಣೆಗಳಿಗೆ ನೀರು ನುಗ್ಗಿ, ಸಾಕಷ್ಟು ತೊಂದರೆ ಉಂಟಾಯಿತು. ಮಧ್ಯಾಹ್ನದಿಂದಲೇ ಮೋಡ ಮುಸುಕಿದ ವಾತಾವರಣ ಇತ್ತು. ಸಂಜೆ 5 ಗಂಟೆಗೆ ಗುಡುಗು ಸಹಿತ ಮಳೆ<br />ಸುರಿಯಲು ಆರಂಭಿಸಿತು. ಹವಾಮಾನ ಇಲಾಖೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ<br />‘ಆರೆಂಜ್ ಅಲರ್ಟ್’ ಘೋಷಿಸಿತ್ತು.</p>.<p>ಸಕಲೇಶಪುರ ತಾಲ್ಲೂಕಿನಲ್ಲೂ ಮಧ್ಯಾಹ್ನ ಒಂದು ತಾಸು ಧಾರಾಕಾರ ಮಳೆ ಸುರಿಯಿತು. ಒಂದು ವಾರದಿಂದಲೂ ತುಂತುರು ಮಳೆಯಾಗುತ್ತಿದೆ. ಆದರೆ ಇಂದು ರಭಸದ ಮಳೆ ಸುರಿದಿದೆ.ವಿಜಯದಶಮಿ ವಿಶೇಷ ಪೂಜೆಗಾಗಿ ದೇವಸ್ಥಾನಗಳಿಗೆ ತೆರಳಿದ್ದ ಭಕ್ತರು ಮನೆ ತಲುಪಲು ಪರದಾಡುವಂತಾಯಿತು. ಚರಂಡಿಗಳುತುಂಬಿ ರಸ್ತೆಗಳಲ್ಲಿ ಹೊಳೆಯಂತೆ ನೀರು ಹರಿಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>