ಬಿ.ಎಂ ರಸ್ತೆ, ಎಂ.ಜಿ. ರಸ್ತೆ, ಮಹಾವೀರ ವೃತ್ತದಲ್ಲಿ ನೀರು ನಿಂತು ವಾಹನ ಸಂಚಾರ ಹಾಗೂ ಪಾದಚಾರಿಗಳ ಓಡಾಟಕ್ಕೆ ಅಡ್ಡಿಯಾಯಿತು. ನಗರದಲ್ಲಿ ಯುಜಿಡಿ, ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗಳಿಗಾಗಿ ಅಗೆದಿರುವ ರಸ್ತೆಗಳಲ್ಲಿ ನೀರು ನಿಂತು ಕೆಸರು ಗದ್ದೆಯಂತಾಗಿದ್ದು, ಜನರು ಕಾಲ್ನಡಿಗೆಯಲ್ಲಿ ಸಂಚರಿಸುವುದೂ ದುಸ್ತರವಾಗಿದೆ.