ಈಗಾಗಲೇ ಪ್ರವಾಹದಿಂದ ಹೊಳೆನರಸೀಪುರ ತಾಲ್ಲೂಕಿನಲ್ಲಿ 25 ಸಾವಿರ ಎಕರೆ, ಬೇಲೂರು ತಾಲ್ಲೂಕಿನಲ್ಲಿ 50 ಸಾವಿರ ಎಕರೆ ಭೂಮಿ ಹಾಳಾಗಿದೆ. ಜಿಲ್ಲೆಯಲ್ಲಿ 18 ಕಾಲುವೆಗಳು ಒಡೆದಿವೆ. ಹಳೆಕೋಟೆ ಹೋಬಳಿಯಲ್ಲಿ 98 ಮನೆಗಳು, ಚನ್ನರಾಯಪಟ್ಟಣದಲ್ಲಿ 28 ಮನೆಗಳು, ಹೊಳೆನರಸೀಪುರದಲ್ಲಿ 5 ಮತ್ತು ಗನ್ನಿಕಡದಲ್ಲಿ ಹಲವು ಮನೆಗಳು ಕುಸಿದಿವೆ. ಚನ್ನರಾಯಪಟ್ಟಣದ 78 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ ಎಂದು ವಿವರಿಸಿದರು.