<p>ಹಾಸನ: ‘ಹಾಸ್ಟೆಲ್ಗಳಲ್ಲಿ ಮೂಲಸೌಕರ್ಯ ಕೊರತೆ ಬಗ್ಗೆ ವಿದ್ಯಾರ್ಥಿಗಳಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ನಗರದಲ್ಲಿನ ವಿವಿಧ ವಸತಿ ನಿಲಯಗಳಿಗೆ ಈಚೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.</p>.<p>ಆಕಾಶವಾಣಿ ಹಿಂಭಾಗದಲ್ಲಿರುವ ಕಲ್ಲುಕಟ್ಟಡ ಬಿಸಿಎಂ ಹಾಸ್ಟೆಲ್, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ, ಸಮಸ್ಯೆಗಳನ್ನು ಆಲಿಸಿದರು. ನೀರು, ಆಹಾರ, ವಾಸ್ತವ್ಯ ಮತ್ತು ಸ್ವಚ್ಛತೆ ಸೇರಿದಂತೆ ಹಲವು ಮೂಲಸೌಲಭ್ಯಗಳ ಬಗ್ಗೆ ವಿದ್ಯಾರ್ಥಿಗಳ ಅಭಿಪ್ರಾಯ ಸಂಗ್ರಹಿಸಿದರು.</p>.<p>ಪರಿಶೀಲನೆ ವೇಳೆ ಹಾಸ್ಟೆಲ್ ವಾರ್ಡನ್ಗಳು ಹಾಗೂ ಸಿಬ್ಬಂದಿ ಜೊತೆಗೂ ಮಾತನಾಡಿದ ಸ್ವರೂಪ್, ‘ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಕೊರತೆ ಉಂಟಾಗದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು. ದೂರದ ಜಿಲ್ಲೆಗಳಿಂದ ವಿದ್ಯಾಭ್ಯಾಸಕ್ಕಾಗಿ ಬಂದಿರುವ ವಿದ್ಯಾರ್ಥಿಗಳನ್ನು ಸಮರ್ಪಕವಾಗಿ ನೋಡಿಕೊಳ್ಳಬೇಕು. ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ಸೂಚಿಸಿದರು.</p>.<p>‘ಹಾಸ್ಟೆಲ್ಗಳಲ್ಲಿ ಉತ್ತಮ ಪರಿಸರ ಹಾಗೂ ಸೌಲಭ್ಯಗಳು ಇದ್ದಾಗ ಮಾತ್ರ ವಿದ್ಯಾರ್ಥಿಗಳು ಸುಗಮವಾಗಿ ವಿದ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು.</p>.<p>ಮುನ್ನೆಚ್ಚರಿಕೆ ಕ್ರಮವಾಗಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳನ್ನು ಕೈಗೊಂಡು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದರು.</p>.<p>ಕಾಮಗಾರಿಗೆ ಚಾಲನೆ: ನಗರದ ಉದಯಗಿರಿ ಬಡಾವಣೆಯಲ್ಲಿ ₹85 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಗುರುವಾರ ಶಾಸಕ ಸ್ವರೂಪ್ ಪ್ರಕಾಶ್ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ಅವರು, ಬಡಾವಣೆಯ ನಿವಾಸಿಗಳಿಗೆ ದೀರ್ಘಕಾಲದಿಂದ ಎದುರಾಗುತ್ತಿದ್ದ ರಸ್ತೆ ಹಾಗೂ ಒಳಚರಂಡಿ ಸಮಸ್ಯೆಗಳನ್ನು ಗಮನದಲ್ಲಿ ಇಟ್ಟುಕೊಂಡು ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.</p>.<p>ಗುಣಮಟ್ಟದಲ್ಲಿ ಹಾಗೂ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಸ್ಥಳೀಯರಿಗೆ ಸುಗಮ ಸಂಚಾರ ಮತ್ತು ಸಮರ್ಪಕ ನೀರು ಹರಿವಿನ ವ್ಯವಸ್ಥೆ ಲಭ್ಯವಾಗಲಿದೆ ಎಂದು ಹೇಳಿದರು.</p>.<p>ನಗರಸಭೆಯ ಮಾಜಿ ಸದಸ್ಯ ವಾಸುದೇವ್, ಕೆಆರ್ಡಿಇಎಲ್ ಸಹಾಯಕ ಎಂಜಿನಿಯರ್ ನವ್ಯಶ್ರೀ, ಸ್ಥಳೀಯ ನಿವಾಸಿಗಳು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-36-1051575074</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ‘ಹಾಸ್ಟೆಲ್ಗಳಲ್ಲಿ ಮೂಲಸೌಕರ್ಯ ಕೊರತೆ ಬಗ್ಗೆ ವಿದ್ಯಾರ್ಥಿಗಳಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ನಗರದಲ್ಲಿನ ವಿವಿಧ ವಸತಿ ನಿಲಯಗಳಿಗೆ ಈಚೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.</p>.<p>ಆಕಾಶವಾಣಿ ಹಿಂಭಾಗದಲ್ಲಿರುವ ಕಲ್ಲುಕಟ್ಟಡ ಬಿಸಿಎಂ ಹಾಸ್ಟೆಲ್, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ, ಸಮಸ್ಯೆಗಳನ್ನು ಆಲಿಸಿದರು. ನೀರು, ಆಹಾರ, ವಾಸ್ತವ್ಯ ಮತ್ತು ಸ್ವಚ್ಛತೆ ಸೇರಿದಂತೆ ಹಲವು ಮೂಲಸೌಲಭ್ಯಗಳ ಬಗ್ಗೆ ವಿದ್ಯಾರ್ಥಿಗಳ ಅಭಿಪ್ರಾಯ ಸಂಗ್ರಹಿಸಿದರು.</p>.<p>ಪರಿಶೀಲನೆ ವೇಳೆ ಹಾಸ್ಟೆಲ್ ವಾರ್ಡನ್ಗಳು ಹಾಗೂ ಸಿಬ್ಬಂದಿ ಜೊತೆಗೂ ಮಾತನಾಡಿದ ಸ್ವರೂಪ್, ‘ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಕೊರತೆ ಉಂಟಾಗದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು. ದೂರದ ಜಿಲ್ಲೆಗಳಿಂದ ವಿದ್ಯಾಭ್ಯಾಸಕ್ಕಾಗಿ ಬಂದಿರುವ ವಿದ್ಯಾರ್ಥಿಗಳನ್ನು ಸಮರ್ಪಕವಾಗಿ ನೋಡಿಕೊಳ್ಳಬೇಕು. ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ಸೂಚಿಸಿದರು.</p>.<p>‘ಹಾಸ್ಟೆಲ್ಗಳಲ್ಲಿ ಉತ್ತಮ ಪರಿಸರ ಹಾಗೂ ಸೌಲಭ್ಯಗಳು ಇದ್ದಾಗ ಮಾತ್ರ ವಿದ್ಯಾರ್ಥಿಗಳು ಸುಗಮವಾಗಿ ವಿದ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು.</p>.<p>ಮುನ್ನೆಚ್ಚರಿಕೆ ಕ್ರಮವಾಗಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳನ್ನು ಕೈಗೊಂಡು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದರು.</p>.<p>ಕಾಮಗಾರಿಗೆ ಚಾಲನೆ: ನಗರದ ಉದಯಗಿರಿ ಬಡಾವಣೆಯಲ್ಲಿ ₹85 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಗುರುವಾರ ಶಾಸಕ ಸ್ವರೂಪ್ ಪ್ರಕಾಶ್ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ಅವರು, ಬಡಾವಣೆಯ ನಿವಾಸಿಗಳಿಗೆ ದೀರ್ಘಕಾಲದಿಂದ ಎದುರಾಗುತ್ತಿದ್ದ ರಸ್ತೆ ಹಾಗೂ ಒಳಚರಂಡಿ ಸಮಸ್ಯೆಗಳನ್ನು ಗಮನದಲ್ಲಿ ಇಟ್ಟುಕೊಂಡು ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.</p>.<p>ಗುಣಮಟ್ಟದಲ್ಲಿ ಹಾಗೂ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಸ್ಥಳೀಯರಿಗೆ ಸುಗಮ ಸಂಚಾರ ಮತ್ತು ಸಮರ್ಪಕ ನೀರು ಹರಿವಿನ ವ್ಯವಸ್ಥೆ ಲಭ್ಯವಾಗಲಿದೆ ಎಂದು ಹೇಳಿದರು.</p>.<p>ನಗರಸಭೆಯ ಮಾಜಿ ಸದಸ್ಯ ವಾಸುದೇವ್, ಕೆಆರ್ಡಿಇಎಲ್ ಸಹಾಯಕ ಎಂಜಿನಿಯರ್ ನವ್ಯಶ್ರೀ, ಸ್ಥಳೀಯ ನಿವಾಸಿಗಳು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-36-1051575074</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>