<p><strong>ಹಾಸನ</strong>: ಮೊಸಳೆಹೊಸಳ್ಳಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ‘ಮಕರೋತ್ಸವ 2026’ ಕಾರ್ಯಕ್ರಮ ನಡೆಯಿತು. ಕಾಲೇಜಿನಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ಮುಖ್ಯ ಅತಿಥಿಯಾಗಿದ್ದ ನಿವೃತ್ತ ಪ್ರಾಂಶುಪಾಲ ಡಾ. ಇರ್ಷಾದ್ ಎಂ.ಬಿ. ಮಾತನಾಡಿ, ‘ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಗುರಿ ತಲುಪುವ ನಿಟ್ಟಿನಲ್ಲಿ ಸತತ ಪರಿಶ್ರಮದಿಂದ ಮುನ್ನಡೆಯಬೇಕು. ಬರುವ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಬೇಕು’ ಎಂದು ಹೇಳಿದರು.</p>.<p>ನಿವೃತ್ತ ಪ್ರಾಂಶುಪಾಲ ಡಾ.ವೆಂಕಟೇಶ್ ಬಿ. ಮಾತನಾಡಿ, ‘ವಿದ್ಯಾರ್ಥಿಗಳು ಶಿಸ್ತಿನ ಸಿಪಾಯಿಗಳಾಗಬೇಕು. ಒಳ್ಳೆಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಅದು ಅವರನ್ನು ತಲುಪಬೇಕಾದ ಹಾದಿಗೆ ತಲುಪಿಸುತ್ತದೆ’ ಎಂದರು.</p>.<p>ನಿವೃತ್ತ ಪ್ರಾಂಶುಪಾಲ ಡಾ.ಪ್ರಶಾಂತ್ ಮಾತನಾಡಿ, ‘ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮತ್ತು ಸಂಯಮ ಅಗತ್ಯ. ಈ ಕ್ಷಣ ಬಹಳ ಅಮೂಲ್ಯವಾದದ್ದು. ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ.ಟಿ.ರಂಗಸ್ವಾಮಿ ಮಾತನಾಡಿ, ‘ವಿದ್ಯಾರ್ಥಿಗಳು ಕೌಶಲ ಹಾಗೂ ಪ್ರತಿಭೆಗಳನ್ನು ಅನಾವರಣ ಮಾಡಿಕೊಂಡು ಜೀವನದಲ್ಲಿ ಉತ್ತಮ ಸ್ಥಾನಕ್ಕೆ ಏರಬೇಕು. ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕವಾಗಿ ಅಲ್ಲದೆ ಎಲ್ಲ ಕ್ಷೇತ್ರಗಳಲ್ಲೂ ತೊಡಗಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಸಿವಿಲ್ ವಿಭಾಗದ ಡಾ.ಪ್ರವೀಣ್ ವಾರ್ಷಿಕ ವರದಿ ಪ್ರಸ್ತುತಪಡಿಸಿದರು. ಸಂಸ್ಥೆಯ ಎಲ್ಲ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-36-813595102</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಮೊಸಳೆಹೊಸಳ್ಳಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ‘ಮಕರೋತ್ಸವ 2026’ ಕಾರ್ಯಕ್ರಮ ನಡೆಯಿತು. ಕಾಲೇಜಿನಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ಮುಖ್ಯ ಅತಿಥಿಯಾಗಿದ್ದ ನಿವೃತ್ತ ಪ್ರಾಂಶುಪಾಲ ಡಾ. ಇರ್ಷಾದ್ ಎಂ.ಬಿ. ಮಾತನಾಡಿ, ‘ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಗುರಿ ತಲುಪುವ ನಿಟ್ಟಿನಲ್ಲಿ ಸತತ ಪರಿಶ್ರಮದಿಂದ ಮುನ್ನಡೆಯಬೇಕು. ಬರುವ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಬೇಕು’ ಎಂದು ಹೇಳಿದರು.</p>.<p>ನಿವೃತ್ತ ಪ್ರಾಂಶುಪಾಲ ಡಾ.ವೆಂಕಟೇಶ್ ಬಿ. ಮಾತನಾಡಿ, ‘ವಿದ್ಯಾರ್ಥಿಗಳು ಶಿಸ್ತಿನ ಸಿಪಾಯಿಗಳಾಗಬೇಕು. ಒಳ್ಳೆಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಅದು ಅವರನ್ನು ತಲುಪಬೇಕಾದ ಹಾದಿಗೆ ತಲುಪಿಸುತ್ತದೆ’ ಎಂದರು.</p>.<p>ನಿವೃತ್ತ ಪ್ರಾಂಶುಪಾಲ ಡಾ.ಪ್ರಶಾಂತ್ ಮಾತನಾಡಿ, ‘ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮತ್ತು ಸಂಯಮ ಅಗತ್ಯ. ಈ ಕ್ಷಣ ಬಹಳ ಅಮೂಲ್ಯವಾದದ್ದು. ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ.ಟಿ.ರಂಗಸ್ವಾಮಿ ಮಾತನಾಡಿ, ‘ವಿದ್ಯಾರ್ಥಿಗಳು ಕೌಶಲ ಹಾಗೂ ಪ್ರತಿಭೆಗಳನ್ನು ಅನಾವರಣ ಮಾಡಿಕೊಂಡು ಜೀವನದಲ್ಲಿ ಉತ್ತಮ ಸ್ಥಾನಕ್ಕೆ ಏರಬೇಕು. ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕವಾಗಿ ಅಲ್ಲದೆ ಎಲ್ಲ ಕ್ಷೇತ್ರಗಳಲ್ಲೂ ತೊಡಗಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಸಿವಿಲ್ ವಿಭಾಗದ ಡಾ.ಪ್ರವೀಣ್ ವಾರ್ಷಿಕ ವರದಿ ಪ್ರಸ್ತುತಪಡಿಸಿದರು. ಸಂಸ್ಥೆಯ ಎಲ್ಲ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-36-813595102</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>