<p>ಹಾಸನ: ಸಕಲೇಶಪುರ ತಾಲ್ಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರಿ-ವೆಡ್ಡಿಂಗ್ ಶೂಟ್ ನಡೆಸುವ ವೇಳೆ ವೃತ್ತಿಪರ ಛಾಯಾಗ್ರಾಹಕರ ಮೇಲೆ ಸ್ಥಳೀಯರಿಂದ ನಡೆದ ಹಲ್ಲೆ ಖಂಡಿಸಿ, ಛಾಯಾಗ್ರಾಹಕರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಸದಸ್ಯರು ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು. ಪ್ರಭಾರ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣವರ್ ಅವರಿಗೆ ಮನವಿ ಸಲ್ಲಿಸಿದರು.</p>.<p>ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಸಭೆ ನಡೆಸಿದ ಸದಸ್ಯರು, ಬಳಿಕ ಮೌನ ಮೆರವಣಿಗೆ ನಡೆಸಿದರು. ಹೇಮಾವತಿ ಪ್ರತಿಮೆ, ಎನ್.ಆರ್. ವೃತ್ತ ಹಾಗೂ ಬಿ.ಎಂ. ರಸ್ತೆ ಮೂಲಕ ಸಾಗಿದ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಕೆಲಕಾಲ ಧರಣಿ ನಡೆಸಿದರು.</p>.<p>ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಚ್.ಎಸ್. ನಾಗೇಶ್ ಮಾತನಾಡಿ, ‘ಘಟನೆಯಲ್ಲಿ ಸುಮಾರು ₹5 ಲಕ್ಷಕ್ಕೂ ಹೆಚ್ಚು ಮೌಲ್ಯದ ಕ್ಯಾಮೆರಾ ಹಾಗೂ ಇತರೆ ಉಪಕರಣಗಳು ಹಾನಿಗೊಳಗಾಗಿದ್ದು, ಛಾಯಾಗ್ರಾಹಕರು ದೈಹಿಕ ಹಾಗೂ ಮಾನಸಿಕವಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಘಟನೆ ರಾಜ್ಯದಾದ್ಯಂತ ಛಾಯಾಗ್ರಾಹಕರಲ್ಲಿ ಭೀತಿ ಮೂಡಿಸಿದ್ದು, ವೃತ್ತಿಪರರಿಗೆ ಸುರಕ್ಷಿತ ವಾತಾವರಣದ ಅಗತ್ಯ ಎತ್ತಿ ಹಿಡಿದಿದೆ’ ಎಂದು ಹೇಳಿದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ನಿಂಗರಾಜು ಮಾತನಾಡಿ, ಪ್ರಕರಣ ಸಂಬಂಧ ಅಧಿಕಾರಿಗಳು ತ್ವರಿತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಟಿ.ಸಿ. ನಾಗರಾಜು, ಪ್ರಧಾನ ಕಾರ್ಯದರ್ಶಿ ಬಿ.ಕೆ. ಧರ್ಮಶೆಟ್ಟಿ, ಎಸ್.ಜಿ. ನಾಗರಾಜು, ತುಮಕೂರು ಘಟಕದ ಅಧ್ಯಕ್ಷ ಕೆ.ಎಚ್. ಅನಿಲ್ ಕುಮಾರ್, ಸುನಿಲ್, ಶಿವಕುಮಾರ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-36-829881177</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ಸಕಲೇಶಪುರ ತಾಲ್ಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರಿ-ವೆಡ್ಡಿಂಗ್ ಶೂಟ್ ನಡೆಸುವ ವೇಳೆ ವೃತ್ತಿಪರ ಛಾಯಾಗ್ರಾಹಕರ ಮೇಲೆ ಸ್ಥಳೀಯರಿಂದ ನಡೆದ ಹಲ್ಲೆ ಖಂಡಿಸಿ, ಛಾಯಾಗ್ರಾಹಕರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಸದಸ್ಯರು ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು. ಪ್ರಭಾರ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣವರ್ ಅವರಿಗೆ ಮನವಿ ಸಲ್ಲಿಸಿದರು.</p>.<p>ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಸಭೆ ನಡೆಸಿದ ಸದಸ್ಯರು, ಬಳಿಕ ಮೌನ ಮೆರವಣಿಗೆ ನಡೆಸಿದರು. ಹೇಮಾವತಿ ಪ್ರತಿಮೆ, ಎನ್.ಆರ್. ವೃತ್ತ ಹಾಗೂ ಬಿ.ಎಂ. ರಸ್ತೆ ಮೂಲಕ ಸಾಗಿದ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಕೆಲಕಾಲ ಧರಣಿ ನಡೆಸಿದರು.</p>.<p>ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಚ್.ಎಸ್. ನಾಗೇಶ್ ಮಾತನಾಡಿ, ‘ಘಟನೆಯಲ್ಲಿ ಸುಮಾರು ₹5 ಲಕ್ಷಕ್ಕೂ ಹೆಚ್ಚು ಮೌಲ್ಯದ ಕ್ಯಾಮೆರಾ ಹಾಗೂ ಇತರೆ ಉಪಕರಣಗಳು ಹಾನಿಗೊಳಗಾಗಿದ್ದು, ಛಾಯಾಗ್ರಾಹಕರು ದೈಹಿಕ ಹಾಗೂ ಮಾನಸಿಕವಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಘಟನೆ ರಾಜ್ಯದಾದ್ಯಂತ ಛಾಯಾಗ್ರಾಹಕರಲ್ಲಿ ಭೀತಿ ಮೂಡಿಸಿದ್ದು, ವೃತ್ತಿಪರರಿಗೆ ಸುರಕ್ಷಿತ ವಾತಾವರಣದ ಅಗತ್ಯ ಎತ್ತಿ ಹಿಡಿದಿದೆ’ ಎಂದು ಹೇಳಿದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ನಿಂಗರಾಜು ಮಾತನಾಡಿ, ಪ್ರಕರಣ ಸಂಬಂಧ ಅಧಿಕಾರಿಗಳು ತ್ವರಿತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಟಿ.ಸಿ. ನಾಗರಾಜು, ಪ್ರಧಾನ ಕಾರ್ಯದರ್ಶಿ ಬಿ.ಕೆ. ಧರ್ಮಶೆಟ್ಟಿ, ಎಸ್.ಜಿ. ನಾಗರಾಜು, ತುಮಕೂರು ಘಟಕದ ಅಧ್ಯಕ್ಷ ಕೆ.ಎಚ್. ಅನಿಲ್ ಕುಮಾರ್, ಸುನಿಲ್, ಶಿವಕುಮಾರ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-36-829881177</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>