<p>ಹಾಸನ: ‘ಪೊಲೀಸ್ ಧ್ವಜ ಮಾರಾಟದಿಂದ ಸಂಗ್ರಹವಾಗುವ ನಿಧಿ, ನಿವೃತ್ತ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಆಧಾರವಾಗುತ್ತಿದ್ದು, ಪ್ರತಿ ಸಮಸ್ಯೆಯನ್ನು ಪೊಲೀಸ್ ಇಲಾಖೆಯ ಮೇಲೆ ಹಾಕುವುದು ಸರಿಯಲ್ಲ’ ಎಂದು ನಿವೃತ್ತ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಎಸ್. ವೆಂಕಟೇಶ್ ನಾಯ್ಡು ಹೇಳಿದರು.</p>.<p>ನಗರದ ಡಿ.ಎ.ಆರ್. ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಗುರುವಾರ ನಡೆದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.</p>.<p>‘ಪೊಲೀಸ್ ಇಲಾಖೆ ಕೇವಲ ಕಾನೂನು, ಸುವ್ಯವಸ್ಥೆ ಕಾಯುವ ವ್ಯವಸ್ಥೆಯಷ್ಟೇ ಅಲ್ಲ. ಸಮಾಜದ ಭದ್ರತೆ ಮತ್ತು ನೆಮ್ಮದಿಗೆ ಬೆನ್ನೆಲುಬಾಗಿದೆ. ಆದರೆ ಸೇವೆಯಿಂದ ನಿವೃತ್ತಿಯಾದ ನಂತರ ಅನೇಕ ಪೊಲೀಸ್ ಸಿಬ್ಬಂದಿ ಆರ್ಥಿಕ ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿರುವುದು ವಾಸ್ತವ’ ಎಂದು ಹೇಳಿದರು.</p>.<p>‘ಧ್ವಜ ದಿನಾಚರಣೆ ಕೇವಲ ಆಚರಣೆಗಷ್ಟೇ ಸೀಮಿತವಾಗದೇ, ಮಾನವೀಯ ಮೌಲ್ಯಗಳನ್ನು ನೆನಪಿಸುವ ಕಾರ್ಯಕ್ರಮವಾಗಿದೆ. ಧ್ವಜ ಮಾರಾಟದಿಂದ ಸಂಗ್ರಹವಾಗುವ ನಿಧಿ ನಿವೃತ್ತ ಸಿಬ್ಬಂದಿ ಮತ್ತು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಾಗುತ್ತದೆ’ ಎಂದು ತಿಳಿಸಿದರು.</p>.<p>‘ಸೇವೆಯಲ್ಲಿರುವಾಗ ಆರೋಗ್ಯದ ಕಡೆ ಗಮನ ಹರಿಸದ ಸಿಬ್ಬಂದಿ, ನಿವೃತ್ತಿಯ ನಂತರ ಸಂಕಷ್ಟಕ್ಕೆ ಸಿಲುಕುತ್ತಾರೆ. ಬಹುತೇಕರು ಆರೋಗ್ಯ ವಿಮೆ ಮಾಡಿಸಿಕೊಳ್ಳದಿರುವುದು ಸಮಸ್ಯೆಗೆ ಕಾರಣವಾಗುತ್ತಿದೆ. ಪ್ರತಿಯೊಬ್ಬರೂ ತಮ್ಮ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ವೈಯಕ್ತಿಕ ಆರೋಗ್ಯ ವಿಮೆ ಮಾಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಆರೋಗ್ಯ ಭಾಗ್ಯ ಯೋಜನೆಯ ವ್ಯಾಪ್ತಿ ವಿಸ್ತರಿಸಿದರೂ, ಎಲ್ಲರಿಗೂ ಸಮರ್ಪಕವಾಗಿ ತಲುಪುತ್ತಿಲ್ಲ ಎಂದ ಅವರು, ಪೊಲೀಸ್ ಇಲಾಖೆಯ ಮೇಲೆ ಅನವಶ್ಯಕ ಆರೋಪಗಳು ಬರುವುದು ದುರದೃಷ್ಟಕರ. ಪ್ರತಿ ಸಮಸ್ಯೆಗೂ ಪೊಲೀಸ್ ಇಲಾಖೆಯನ್ನೇ ಹೊಣೆ ಮಾಡುವುದಕ್ಕಿಂತ, ಸಂಬಂಧಿತ ಇಲಾಖೆಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>ಮುಖ್ಯ ಅತಿಥಿ ಕೆ.ಎಸ್. ವೆಂಕಟೇಶ್ ನಾಯ್ಡು ಅವರನ್ನು ಸನ್ಮಾನಿಸಲಾಯಿತು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎನ್. ಶ್ರೀನಿಧಿ, ಅಧಿಕಾರಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-36-578312528</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ‘ಪೊಲೀಸ್ ಧ್ವಜ ಮಾರಾಟದಿಂದ ಸಂಗ್ರಹವಾಗುವ ನಿಧಿ, ನಿವೃತ್ತ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಆಧಾರವಾಗುತ್ತಿದ್ದು, ಪ್ರತಿ ಸಮಸ್ಯೆಯನ್ನು ಪೊಲೀಸ್ ಇಲಾಖೆಯ ಮೇಲೆ ಹಾಕುವುದು ಸರಿಯಲ್ಲ’ ಎಂದು ನಿವೃತ್ತ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಎಸ್. ವೆಂಕಟೇಶ್ ನಾಯ್ಡು ಹೇಳಿದರು.</p>.<p>ನಗರದ ಡಿ.ಎ.ಆರ್. ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಗುರುವಾರ ನಡೆದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.</p>.<p>‘ಪೊಲೀಸ್ ಇಲಾಖೆ ಕೇವಲ ಕಾನೂನು, ಸುವ್ಯವಸ್ಥೆ ಕಾಯುವ ವ್ಯವಸ್ಥೆಯಷ್ಟೇ ಅಲ್ಲ. ಸಮಾಜದ ಭದ್ರತೆ ಮತ್ತು ನೆಮ್ಮದಿಗೆ ಬೆನ್ನೆಲುಬಾಗಿದೆ. ಆದರೆ ಸೇವೆಯಿಂದ ನಿವೃತ್ತಿಯಾದ ನಂತರ ಅನೇಕ ಪೊಲೀಸ್ ಸಿಬ್ಬಂದಿ ಆರ್ಥಿಕ ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿರುವುದು ವಾಸ್ತವ’ ಎಂದು ಹೇಳಿದರು.</p>.<p>‘ಧ್ವಜ ದಿನಾಚರಣೆ ಕೇವಲ ಆಚರಣೆಗಷ್ಟೇ ಸೀಮಿತವಾಗದೇ, ಮಾನವೀಯ ಮೌಲ್ಯಗಳನ್ನು ನೆನಪಿಸುವ ಕಾರ್ಯಕ್ರಮವಾಗಿದೆ. ಧ್ವಜ ಮಾರಾಟದಿಂದ ಸಂಗ್ರಹವಾಗುವ ನಿಧಿ ನಿವೃತ್ತ ಸಿಬ್ಬಂದಿ ಮತ್ತು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಾಗುತ್ತದೆ’ ಎಂದು ತಿಳಿಸಿದರು.</p>.<p>‘ಸೇವೆಯಲ್ಲಿರುವಾಗ ಆರೋಗ್ಯದ ಕಡೆ ಗಮನ ಹರಿಸದ ಸಿಬ್ಬಂದಿ, ನಿವೃತ್ತಿಯ ನಂತರ ಸಂಕಷ್ಟಕ್ಕೆ ಸಿಲುಕುತ್ತಾರೆ. ಬಹುತೇಕರು ಆರೋಗ್ಯ ವಿಮೆ ಮಾಡಿಸಿಕೊಳ್ಳದಿರುವುದು ಸಮಸ್ಯೆಗೆ ಕಾರಣವಾಗುತ್ತಿದೆ. ಪ್ರತಿಯೊಬ್ಬರೂ ತಮ್ಮ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ವೈಯಕ್ತಿಕ ಆರೋಗ್ಯ ವಿಮೆ ಮಾಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಆರೋಗ್ಯ ಭಾಗ್ಯ ಯೋಜನೆಯ ವ್ಯಾಪ್ತಿ ವಿಸ್ತರಿಸಿದರೂ, ಎಲ್ಲರಿಗೂ ಸಮರ್ಪಕವಾಗಿ ತಲುಪುತ್ತಿಲ್ಲ ಎಂದ ಅವರು, ಪೊಲೀಸ್ ಇಲಾಖೆಯ ಮೇಲೆ ಅನವಶ್ಯಕ ಆರೋಪಗಳು ಬರುವುದು ದುರದೃಷ್ಟಕರ. ಪ್ರತಿ ಸಮಸ್ಯೆಗೂ ಪೊಲೀಸ್ ಇಲಾಖೆಯನ್ನೇ ಹೊಣೆ ಮಾಡುವುದಕ್ಕಿಂತ, ಸಂಬಂಧಿತ ಇಲಾಖೆಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>ಮುಖ್ಯ ಅತಿಥಿ ಕೆ.ಎಸ್. ವೆಂಕಟೇಶ್ ನಾಯ್ಡು ಅವರನ್ನು ಸನ್ಮಾನಿಸಲಾಯಿತು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎನ್. ಶ್ರೀನಿಧಿ, ಅಧಿಕಾರಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-36-578312528</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>