<p><strong>ಹಾಸನ:</strong> ಪಿತ್ರಾರ್ಜಿತ ಆಸ್ತಿ ಹಂಚಿಕೆ ವಿಚಾರದಲ್ಲಿ ಅನ್ಯಾಯ ಎಸಗಿರುವ ಶಾಂತಿಗ್ರಾಮ ನಾಡಕಚೇರಿ ಅಧಿಕಾರಿಗಳು ಹಾಗೂ ಉಪನೋಂದಣಾಧಿಕಾರಿ ಕಚೇರಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ನಡೆಸುವಂತೆ ದಲಿತ ಸಂಘಟನಾ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಚೇತನ್ ಶಾಂತಿಗ್ರಾಮ ಆಗ್ರಹಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಶಾಂತಿಗ್ರಾಮ ಹೋಬಳಿಯ ಕೊಂತಗೌಡನಹಳ್ಳಿ ಗ್ರಾಮದ ನಿವಾಸಿ ಸ್ವಾಮಿಗೌಡ ಕುಟುಂಬದ ಪಿತ್ರಾರ್ಜಿತ ಆಸ್ತಿ ಹಂಚಿಕೆ ಸಂದರ್ಭದಲ್ಲಿ ಮೋಸ ನಡೆದಿದೆ ಎಂದರು.</p>.<p>ಈ ಕುರಿತು ಹಲವು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮೇಲ್ನೋಟಕ್ಕೆ ಲಂಚ ಪಡೆದು ಖಾತೆ ಬದಲಾವಣೆ ಮಾಡಿರುವ ಅನುಮಾನ ಕುಟುಂಬದವರಿಗೆ ಇದೆ ಎಂದು ಹೇಳಿದರು.</p>.<p>ಹಾಸನ ಉಪನೊಂದಣಾಧಿಕಾರಿ ಕಚೇರಿಗೆ ಭೂಮಿಯ ನೋಂದಣಿ ಮಾಡದಂತೆ ಮನವಿ ಸಲ್ಲಿಸಿದ್ದರೂ, ಸಂಬಂಧಪಟ್ಟ ಭೂಮಿಯನ್ನು ಬೇರೆ ವ್ಯಕ್ತಿಗೆ ನೋಂದಣಿ ಮಾಡಿಕೊಟ್ಟು ವಾಣಿಜ್ಯ ಅಭಿವೃದ್ಧಿಗೆ ಒಪ್ಪಂದ ಮಾಡಿಕೊಡಲಾಗಿದೆ ಎಂದರು.</p>.<p>ಸರ್ಕಾರಕ್ಕೆ ಹಣ ಪಾವತಿಯಾದರೆ ನೋಂದಣಿ ಮಾಡಿಕೊಡುವುದು ನಮ್ಮ ಕೆಲಸ. ಉಳಿದ ವಿಚಾರ ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳಿ ಎಂದು ಉಪನೋಂದಣಾಧಿಕಾರಿ ಹನುಮಂತಗೌಡ ಉಡಾಫೆಯ ಉತ್ತರ ನೀಡಿದ್ದಾರೆ ಎಂದು ಆರೋಪಿಸಿದರು.</p>.<p>ಭೂ ಮಾಲೀಕರಿಗೆ ಅನ್ಯಾಯವಾಗುವ ರೀತಿಯಲ್ಲಿ ನಾಡಕಚೇರಿ ಹಾಗೂ ನೋಂದಣಿ ಕಚೇರಿಯಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ಲೋಕಾಯುಕ್ತ ತನಿಖೆ ನಡೆಸಬೇಕು. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.</p>.<p>ಎಚ್.ಸಿ ಸಂತೋಷ್, ಪೂರ್ಣಿಮಾ, ಸ್ವಾಮೀಗೌಡ, ದಿನೇಶ್, ಚಿಕ್ಕಯ್ಯ, ಕೆ.ಆರ್. ಮಂಜುನಾಥ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-36-2028263958</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಪಿತ್ರಾರ್ಜಿತ ಆಸ್ತಿ ಹಂಚಿಕೆ ವಿಚಾರದಲ್ಲಿ ಅನ್ಯಾಯ ಎಸಗಿರುವ ಶಾಂತಿಗ್ರಾಮ ನಾಡಕಚೇರಿ ಅಧಿಕಾರಿಗಳು ಹಾಗೂ ಉಪನೋಂದಣಾಧಿಕಾರಿ ಕಚೇರಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ನಡೆಸುವಂತೆ ದಲಿತ ಸಂಘಟನಾ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಚೇತನ್ ಶಾಂತಿಗ್ರಾಮ ಆಗ್ರಹಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಶಾಂತಿಗ್ರಾಮ ಹೋಬಳಿಯ ಕೊಂತಗೌಡನಹಳ್ಳಿ ಗ್ರಾಮದ ನಿವಾಸಿ ಸ್ವಾಮಿಗೌಡ ಕುಟುಂಬದ ಪಿತ್ರಾರ್ಜಿತ ಆಸ್ತಿ ಹಂಚಿಕೆ ಸಂದರ್ಭದಲ್ಲಿ ಮೋಸ ನಡೆದಿದೆ ಎಂದರು.</p>.<p>ಈ ಕುರಿತು ಹಲವು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮೇಲ್ನೋಟಕ್ಕೆ ಲಂಚ ಪಡೆದು ಖಾತೆ ಬದಲಾವಣೆ ಮಾಡಿರುವ ಅನುಮಾನ ಕುಟುಂಬದವರಿಗೆ ಇದೆ ಎಂದು ಹೇಳಿದರು.</p>.<p>ಹಾಸನ ಉಪನೊಂದಣಾಧಿಕಾರಿ ಕಚೇರಿಗೆ ಭೂಮಿಯ ನೋಂದಣಿ ಮಾಡದಂತೆ ಮನವಿ ಸಲ್ಲಿಸಿದ್ದರೂ, ಸಂಬಂಧಪಟ್ಟ ಭೂಮಿಯನ್ನು ಬೇರೆ ವ್ಯಕ್ತಿಗೆ ನೋಂದಣಿ ಮಾಡಿಕೊಟ್ಟು ವಾಣಿಜ್ಯ ಅಭಿವೃದ್ಧಿಗೆ ಒಪ್ಪಂದ ಮಾಡಿಕೊಡಲಾಗಿದೆ ಎಂದರು.</p>.<p>ಸರ್ಕಾರಕ್ಕೆ ಹಣ ಪಾವತಿಯಾದರೆ ನೋಂದಣಿ ಮಾಡಿಕೊಡುವುದು ನಮ್ಮ ಕೆಲಸ. ಉಳಿದ ವಿಚಾರ ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳಿ ಎಂದು ಉಪನೋಂದಣಾಧಿಕಾರಿ ಹನುಮಂತಗೌಡ ಉಡಾಫೆಯ ಉತ್ತರ ನೀಡಿದ್ದಾರೆ ಎಂದು ಆರೋಪಿಸಿದರು.</p>.<p>ಭೂ ಮಾಲೀಕರಿಗೆ ಅನ್ಯಾಯವಾಗುವ ರೀತಿಯಲ್ಲಿ ನಾಡಕಚೇರಿ ಹಾಗೂ ನೋಂದಣಿ ಕಚೇರಿಯಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ಲೋಕಾಯುಕ್ತ ತನಿಖೆ ನಡೆಸಬೇಕು. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.</p>.<p>ಎಚ್.ಸಿ ಸಂತೋಷ್, ಪೂರ್ಣಿಮಾ, ಸ್ವಾಮೀಗೌಡ, ದಿನೇಶ್, ಚಿಕ್ಕಯ್ಯ, ಕೆ.ಆರ್. ಮಂಜುನಾಥ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-36-2028263958</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>