ಇದೇ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿಕುಮಾರ್ ಮಾತನಾಡಿ, ‘ಎಲ್ಲದಕ್ಕೂ ಗ್ರಾಮ ಪಂಚಾಯಿತಿಯನ್ನೇ ಹೊಣೆ ಮಾಡಬಾರದು. ಶಾಲೆ, ಆಸ್ಪತ್ರೆ ಮೊದಲಾದ ಸಾರ್ವಜನಿಕ ಉಪಯೋಗಿ ಸ್ಥಳದ ಸುತ್ತಲಿನ ಸ್ಥಳದಲ್ಲಿ ಕಸ ಎಸೆದು ಗಲೀಜು ಮಾಡಬಾರದು. ಮನೆ ಹಾಗೂ ಅಂಗಡಿಯಲ್ಲಿ ಪ್ರತಿನಿತ್ಯ ಸಂಗ್ರಹವಾಗುವ ಕಸವನ್ನು ಪಂಚಾಯಿತಿಯ ಕಸದ ವಾಹನಕ್ಕೆ ಹಾಕಬೇಕು. ಇನ್ನೂ ಮುಂದೆ ಎಲ್ಲೆಂದರಲ್ಲಿ ಕಸ ಸುರಿಯುವವರನ್ನು ಪತ್ತೆ ಹಚ್ಚಿ ದಂಡ ವಿಧಿಸಲಾಗುವುದು’ ಎಂದು ಹೇಳಿದರು.