<p>ಹಾಸನ: ‘ಹಕ್ಕುಚ್ಯುತಿ ಅಧಿಕಾರ ದುರುಪಯೋಗ ಪಡಿಸಿಕೊಂಡ ಶಾಸಕ ಎಚ್.ಡಿ. ರೇವಣ್ಣ ಅವರು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದ್ದಾರೆ’ ಎಂದು ಸಂಸದ ಶ್ರೇಯಸ್ ಪಟೇಲ್ ಆರೋಪಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರೇವಣ್ಣ ಅವರು ಹಿರಿಯ ಜನಪ್ರತಿನಿಧಿಯಾಗಿ ಜಿಲ್ಲೆಯ ಆಡಳಿತ ವ್ಯವಸ್ಥೆಯಲ್ಲಿ ಅನಾವಶ್ಯಕ ಹಸ್ತಕ್ಷೇಪ ಮಾಡುತ್ತಿದ್ದಾರೆ. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಮೇಲೂ ಒತ್ತಡ ಹೇರುವ ಮೂಲಕ ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದಾರೆ’ ಎಂದು ದೂರಿದರು.</p>.<p>‘ಹಿರಿಯರಾದ ರೇವಣ್ಣ ಅವರು, ತಮ್ಮ ರಾಜಕೀಯ ಅನುಭವದ ಮೂಲಕ ಕಿರಿಯರಿಗೆ ಮಾರ್ಗದರ್ಶನ ನೀಡಬೇಕು. ಆದರೆ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಎಷ್ಟು ಸರಿ’ ಎಂದರು.</p>.<p>‘ಸದನದಲ್ಲಿ ಕ್ಷೇತ್ರದ ಹಾಗೂ ಜಿಲ್ಲೆಯ ಅಭಿವೃದ್ಧಿ ವಿಚಾರಗಳನ್ನು ಪ್ರಸ್ತಾಪಿಸುವ ಬದಲು ಅಧಿಕಾರಿಗಳ ವಿರುದ್ಧವೇ ಟೀಕೆ ಮಾಡುತ್ತಿರುವುದು ಸರಿಯಲ್ಲ’ ಎಂದರು.</p>.<p>ಹೊಳೆನರಸೀಪುರ ಜಾತ್ರೆಯಲ್ಲಿ ನಡೆದ ಗಲಾಟೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಈ ಘಟನೆಗೆ ಸಂಬಂಧಿಸಿದ ಸತ್ಯಾಸತ್ಯತೆ ಜಿಲ್ಲೆಯ ಜನರಿಗೆ ತಿಳಿದಿದೆ. ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತಾರೆ’ ಎಂದು ಹೇಳಿದರು.</p>.<p>‘ಜಿಲ್ಲಾಧಿಕಾರಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದ್ದರೂ ಅವರ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಿರುವುದು ಖಂಡನೀಯ’ ಎಂದರು.</p>.<p>ಪ್ರಜ್ವಲ್ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, ‘ಈ ಪ್ರಕರಣ ಕುರಿತು ಎಸ್ಐಟಿ ತನಿಖೆ ನಡೆಸುತ್ತಿದ್ದು, ತನಿಖೆಯಲ್ಲಿ ಯಾರೂ ಮೂಗು ತೂರಿಸಲು ಸಾಧ್ಯವಿಲ್ಲ. ಯಾರಿಗಾದರೂ ಅನ್ಯಾಯವಾಗಿದೆ ಎನ್ನುವ ಅನುಮಾನ ಇದ್ದರೆ ನ್ಯಾಯಾಲಯದ ಮೊರೆ ಹೋಗಬಹುದು’ ಎಂದು ಹೇಳಿದರು.</p>.<p>‘ಜಿಲ್ಲೆಯಲ್ಲಿ 7,731 ಗೃಹಬಳಕೆ ಸಿಲಿಂಡರ್ಗಳು ದಾಸ್ತಾನು ಲಭ್ಯವಿರುವುದರಿಂದ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಎರಡು ದಿನ ತಡವಾಗಿಯಾದರೂ ಸಿಲಿಂಡರ್ ಸಿಗಲಿದ್ದು, ಯಾರೂ ಆತಂಕಕ್ಕೆ ಒಳಗಾಗಬಾರದು. ಯುದ್ಧದ ಹಿನ್ನೆಲೆಯಲ್ಲಿ ತೊಂದರೆಯಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು’ ಎಂದು ಮನವಿ ಮಾಡಿದರು.</p>.<p>‘ಹೊಳೆನರಸೀಪುರ ಲಕ್ಷ್ಮಿನರಸಿಂಹಸ್ವಾಮಿ ಒಂದು ಕುಟುಂಬದ ಆಸ್ತಿಯಲ್ಲ, ಜಾತ್ರೆಯ ತೆರಿಗೆ, ದೇವರಿಗೆ ಹೊಸ ಬಟ್ಟೆ ತೊಡಿಸುವ ವಿಚಾರದಲ್ಲಿ ರಾಜಕೀಯ ಮಾಡಲಾಗಿದೆ. ತಾಲ್ಲೂಕು ಆಡಳಿತದ ತೀರ್ಮಾನದಂತೆ ನಾನು ರಥಕ್ಕೆ ಹೊಸ ಬಟ್ಟೆ ಖರೀದಿಗೆ ₹ 2 ಲಕ್ಷ ನೀಡಿದ್ದು, ಇದನ್ನು ಸಹಿಸದೇ ಆರೋಪ ಮಾಡುತ್ತಿದ್ದಾರೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-36-898852274</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ‘ಹಕ್ಕುಚ್ಯುತಿ ಅಧಿಕಾರ ದುರುಪಯೋಗ ಪಡಿಸಿಕೊಂಡ ಶಾಸಕ ಎಚ್.ಡಿ. ರೇವಣ್ಣ ಅವರು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದ್ದಾರೆ’ ಎಂದು ಸಂಸದ ಶ್ರೇಯಸ್ ಪಟೇಲ್ ಆರೋಪಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರೇವಣ್ಣ ಅವರು ಹಿರಿಯ ಜನಪ್ರತಿನಿಧಿಯಾಗಿ ಜಿಲ್ಲೆಯ ಆಡಳಿತ ವ್ಯವಸ್ಥೆಯಲ್ಲಿ ಅನಾವಶ್ಯಕ ಹಸ್ತಕ್ಷೇಪ ಮಾಡುತ್ತಿದ್ದಾರೆ. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಮೇಲೂ ಒತ್ತಡ ಹೇರುವ ಮೂಲಕ ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದಾರೆ’ ಎಂದು ದೂರಿದರು.</p>.<p>‘ಹಿರಿಯರಾದ ರೇವಣ್ಣ ಅವರು, ತಮ್ಮ ರಾಜಕೀಯ ಅನುಭವದ ಮೂಲಕ ಕಿರಿಯರಿಗೆ ಮಾರ್ಗದರ್ಶನ ನೀಡಬೇಕು. ಆದರೆ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಎಷ್ಟು ಸರಿ’ ಎಂದರು.</p>.<p>‘ಸದನದಲ್ಲಿ ಕ್ಷೇತ್ರದ ಹಾಗೂ ಜಿಲ್ಲೆಯ ಅಭಿವೃದ್ಧಿ ವಿಚಾರಗಳನ್ನು ಪ್ರಸ್ತಾಪಿಸುವ ಬದಲು ಅಧಿಕಾರಿಗಳ ವಿರುದ್ಧವೇ ಟೀಕೆ ಮಾಡುತ್ತಿರುವುದು ಸರಿಯಲ್ಲ’ ಎಂದರು.</p>.<p>ಹೊಳೆನರಸೀಪುರ ಜಾತ್ರೆಯಲ್ಲಿ ನಡೆದ ಗಲಾಟೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಈ ಘಟನೆಗೆ ಸಂಬಂಧಿಸಿದ ಸತ್ಯಾಸತ್ಯತೆ ಜಿಲ್ಲೆಯ ಜನರಿಗೆ ತಿಳಿದಿದೆ. ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತಾರೆ’ ಎಂದು ಹೇಳಿದರು.</p>.<p>‘ಜಿಲ್ಲಾಧಿಕಾರಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದ್ದರೂ ಅವರ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಿರುವುದು ಖಂಡನೀಯ’ ಎಂದರು.</p>.<p>ಪ್ರಜ್ವಲ್ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, ‘ಈ ಪ್ರಕರಣ ಕುರಿತು ಎಸ್ಐಟಿ ತನಿಖೆ ನಡೆಸುತ್ತಿದ್ದು, ತನಿಖೆಯಲ್ಲಿ ಯಾರೂ ಮೂಗು ತೂರಿಸಲು ಸಾಧ್ಯವಿಲ್ಲ. ಯಾರಿಗಾದರೂ ಅನ್ಯಾಯವಾಗಿದೆ ಎನ್ನುವ ಅನುಮಾನ ಇದ್ದರೆ ನ್ಯಾಯಾಲಯದ ಮೊರೆ ಹೋಗಬಹುದು’ ಎಂದು ಹೇಳಿದರು.</p>.<p>‘ಜಿಲ್ಲೆಯಲ್ಲಿ 7,731 ಗೃಹಬಳಕೆ ಸಿಲಿಂಡರ್ಗಳು ದಾಸ್ತಾನು ಲಭ್ಯವಿರುವುದರಿಂದ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಎರಡು ದಿನ ತಡವಾಗಿಯಾದರೂ ಸಿಲಿಂಡರ್ ಸಿಗಲಿದ್ದು, ಯಾರೂ ಆತಂಕಕ್ಕೆ ಒಳಗಾಗಬಾರದು. ಯುದ್ಧದ ಹಿನ್ನೆಲೆಯಲ್ಲಿ ತೊಂದರೆಯಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು’ ಎಂದು ಮನವಿ ಮಾಡಿದರು.</p>.<p>‘ಹೊಳೆನರಸೀಪುರ ಲಕ್ಷ್ಮಿನರಸಿಂಹಸ್ವಾಮಿ ಒಂದು ಕುಟುಂಬದ ಆಸ್ತಿಯಲ್ಲ, ಜಾತ್ರೆಯ ತೆರಿಗೆ, ದೇವರಿಗೆ ಹೊಸ ಬಟ್ಟೆ ತೊಡಿಸುವ ವಿಚಾರದಲ್ಲಿ ರಾಜಕೀಯ ಮಾಡಲಾಗಿದೆ. ತಾಲ್ಲೂಕು ಆಡಳಿತದ ತೀರ್ಮಾನದಂತೆ ನಾನು ರಥಕ್ಕೆ ಹೊಸ ಬಟ್ಟೆ ಖರೀದಿಗೆ ₹ 2 ಲಕ್ಷ ನೀಡಿದ್ದು, ಇದನ್ನು ಸಹಿಸದೇ ಆರೋಪ ಮಾಡುತ್ತಿದ್ದಾರೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-36-898852274</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>