<p>ಹಾಸನ: ಅರಸೀಕೆರೆ ತಾಲ್ಲೂಕು ದೊಡ್ಡನಹಳ್ಳಿ ಕ್ಷೇತ್ರದಲ್ಲಿ ನೆಲೆಸಿರುವ ಗುರು ಸಿದ್ದರಾಮೇಶ್ವರ ಸ್ವಾಮಿಯ ಪ್ರಥಮ ವರ್ಷದ ಗುರು ಸಿದ್ದರಾಮೋತ್ಸವ ಮೇ 17ರಂದು ಹಾಸನದಲ್ಲಿ ವಿಜೃಂಭಣೆಯಿಂದ ನೆರವೇರಲಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಕಟ್ಟಾಯ ಶಿವಕುಮಾರ್ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಮಿಯವರ ಅಪ್ಪಣೆಯ ಮೇರೆಗೆ ಉತ್ಸವ ಆಯೋಜಿಸಲಾಗಿದೆ. ಬೆಳಿಗ್ಗೆ 11 ಗಂಟೆಗೆ ಹಾಸನಾಂಬ ದೇವಾಲಯಕ್ಕೆ ಸ್ವಾಮಿಯವರ ಆಗಮನವಾಗಲಿದೆ. ಮಧ್ಯಾಹ್ನ 1 ಗಂಟೆಯಿಂದ ಸಿದ್ದೇಶ್ವರ ಸ್ವಾಮಿಯವರ ಸನ್ನಿಧಿಯಲ್ಲಿ ಸ್ವಾಮಿಗೆ ಮಹಾ ರುದ್ರಾಭಿಷೇಕ, ಶಿವಾಷ್ಟೋತ್ತರ, ಬಿಲ್ವಾರ್ಚನೆ ಹಾಗೂ ಮಹಾಮಂಗಳಾರತಿ ನಡೆಯಲಿದೆ ಎಂದರು. ಸಂಜೆ 4.30ಕ್ಕೆ ದೊಡ್ಡನಹಳ್ಳಿ ವೀರಭದ್ರೇಶ್ವರ ಸ್ವಾಮಿಯ ಪೂಜಾ ಕುಣಿತ, ವೀರಗಾಸೆ, ನಂದಿ ಧ್ವಜ, ಮದ್ದು ಗುಂಡಿನ ಪ್ರದರ್ಶನದೊಂದಿಗೆ ಅಡ್ಡಪಲ್ಲಕ್ಕಿ ಉತ್ಸವ ಜರುಗಲಿದೆ. ಮಧ್ಯಾಹ್ನ 2 ಗಂಟೆಗೆ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಎಂದರು.</p>.<p>ಹಾಸನಾಂಬ- ಸಿದ್ದೇಶ್ವರ ದೇವಾಲಯದ ಅರ್ಚಕರು ಹಾಗೂ ಭಕ್ತರ ಸಹಕಾರದೊಂದಿಗೆ ನಡೆಯಲಿರುವ ಉತ್ಸವವು ಹಾಸನಾಂಬ ದೇವಾಲಯದಿಂದ ಪ್ರಾರಂಭವಾಗಿ ಅರಳೇಪೇಟೆ, ಸಹ್ಯಾದ್ರಿ ರಸ್ತೆ ಮಾರ್ಗವಾಗಿ ಮಹಾವೀರ ವೃತ್ತ, ದೇವಿಗೆರೆ ಸರ್ಕಲ್ ತಲುಪಲಿದೆ ಎಂದು ವಿವರಿಸಿದರು. ನಾಗೇಶ್, ತ್ಯಾಗರಾಜು, ಸಚ್ಚಿನ್, ವಿನಯ್, ದಯಾನಂದ, ರೇವಣ್ಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-36-921957158</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ಅರಸೀಕೆರೆ ತಾಲ್ಲೂಕು ದೊಡ್ಡನಹಳ್ಳಿ ಕ್ಷೇತ್ರದಲ್ಲಿ ನೆಲೆಸಿರುವ ಗುರು ಸಿದ್ದರಾಮೇಶ್ವರ ಸ್ವಾಮಿಯ ಪ್ರಥಮ ವರ್ಷದ ಗುರು ಸಿದ್ದರಾಮೋತ್ಸವ ಮೇ 17ರಂದು ಹಾಸನದಲ್ಲಿ ವಿಜೃಂಭಣೆಯಿಂದ ನೆರವೇರಲಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಕಟ್ಟಾಯ ಶಿವಕುಮಾರ್ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಮಿಯವರ ಅಪ್ಪಣೆಯ ಮೇರೆಗೆ ಉತ್ಸವ ಆಯೋಜಿಸಲಾಗಿದೆ. ಬೆಳಿಗ್ಗೆ 11 ಗಂಟೆಗೆ ಹಾಸನಾಂಬ ದೇವಾಲಯಕ್ಕೆ ಸ್ವಾಮಿಯವರ ಆಗಮನವಾಗಲಿದೆ. ಮಧ್ಯಾಹ್ನ 1 ಗಂಟೆಯಿಂದ ಸಿದ್ದೇಶ್ವರ ಸ್ವಾಮಿಯವರ ಸನ್ನಿಧಿಯಲ್ಲಿ ಸ್ವಾಮಿಗೆ ಮಹಾ ರುದ್ರಾಭಿಷೇಕ, ಶಿವಾಷ್ಟೋತ್ತರ, ಬಿಲ್ವಾರ್ಚನೆ ಹಾಗೂ ಮಹಾಮಂಗಳಾರತಿ ನಡೆಯಲಿದೆ ಎಂದರು. ಸಂಜೆ 4.30ಕ್ಕೆ ದೊಡ್ಡನಹಳ್ಳಿ ವೀರಭದ್ರೇಶ್ವರ ಸ್ವಾಮಿಯ ಪೂಜಾ ಕುಣಿತ, ವೀರಗಾಸೆ, ನಂದಿ ಧ್ವಜ, ಮದ್ದು ಗುಂಡಿನ ಪ್ರದರ್ಶನದೊಂದಿಗೆ ಅಡ್ಡಪಲ್ಲಕ್ಕಿ ಉತ್ಸವ ಜರುಗಲಿದೆ. ಮಧ್ಯಾಹ್ನ 2 ಗಂಟೆಗೆ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಎಂದರು.</p>.<p>ಹಾಸನಾಂಬ- ಸಿದ್ದೇಶ್ವರ ದೇವಾಲಯದ ಅರ್ಚಕರು ಹಾಗೂ ಭಕ್ತರ ಸಹಕಾರದೊಂದಿಗೆ ನಡೆಯಲಿರುವ ಉತ್ಸವವು ಹಾಸನಾಂಬ ದೇವಾಲಯದಿಂದ ಪ್ರಾರಂಭವಾಗಿ ಅರಳೇಪೇಟೆ, ಸಹ್ಯಾದ್ರಿ ರಸ್ತೆ ಮಾರ್ಗವಾಗಿ ಮಹಾವೀರ ವೃತ್ತ, ದೇವಿಗೆರೆ ಸರ್ಕಲ್ ತಲುಪಲಿದೆ ಎಂದು ವಿವರಿಸಿದರು. ನಾಗೇಶ್, ತ್ಯಾಗರಾಜು, ಸಚ್ಚಿನ್, ವಿನಯ್, ದಯಾನಂದ, ರೇವಣ್ಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-36-921957158</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>