<p>ಹಾಸನ: ‘ನಮ್ಮ ನಾಡಿನ ಪ್ರಗತಿಗೆ ಪ್ರತಿಯೊಬ್ಬರ ನಿಸ್ವಾರ್ಥವಾದ ಸೇವೆ ಅಗತ್ಯ’ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಡಾ.ವೈ.ಎಸ್. ವೀರಭದ್ರಪ್ಪ ಅಭಿಪ್ರಾಯಪಟ್ಟರು.</p>.<p>ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಏಕಲವ್ಯ ಜೀವ ಜಲ ಫೌಂಡೇಶನ್ ಹಾಗೂ ಏಕಲವ್ಯ ರೋವರ್ ಮುಕ್ತ ದಳದ ದಶಮಾನೋತ್ಸವದ ಅಂಗವಾಗಿ ವಿವಿಧ ಕ್ಷೇತ್ರದ ಸಾಧಕರಿಗೆ ‘ಏಕಲವ್ಯ ಸೇವಾ ರತ್ನ’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.</p>.<p>‘ಸೇವೆ ಮಾಡುವ ಸೌಭಾಗ್ಯ ಎಲ್ಲರಿಗೂ ಸಿಗುವುದಿಲ್ಲ. ದೇವರು ಈ ಕಾರ್ಯಕ್ಕಾಗಿ ಕೆಲವರನ್ನು ಆಯ್ಕೆ ಮಾಡಿಕೊಳ್ಳುತ್ತಾನೆ. ನಮ್ಮ ಬದುಕಿನಲ್ಲಿ ಪ್ರತಿಫಲ ಬಯಸದೆ ಸಲ್ಲಿಸುವ ಸೇವೆ ಭಗವಂತನಿಗೆ ಸಮರ್ಪಿತವಾಗುತ್ತದೆ’ ಎಂದರು.</p>.<p>ಸರಸ್ವತಿ ಮಹಿಳಾ ಕಲಾ ಸಮಾಜದ ವತಿಯಿಂದ ಹಲವು ವರ್ಷಗಳಿಂದ ವಿವಿಧ ರೀತಿಯಲ್ಲಿ ಅವಿಸ್ಮರಣೀಯ ಸೇವೆ ಸಲ್ಲಿಸಿದ ಸುಧಾ ರವಿಕುಮಾರ್ ಅವರ ಸೇವೆಯನ್ನು ಶ್ಲಾಘಿಸಿದರು.</p>.<p>ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವೈ.ಎಂ. ರಾಜೇಂದ್ರ, ವೀರ ಯೋಧ ವೈ.ಎನ್. ಮೋಹನ್ ಹಾಗೂ ರೋವರ್ ಮನು ವರ್ಷಿತ್ ಅವರಿಗೆ ‘ಏಕಲವ್ಯ ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ಗೈಡ್ ಜಿಲ್ಲಾ ಆಯುಕ್ತೆ ಜಯಾ ರಮೇಶ್, ಲೀಡರ್ ಟ್ರೈನರ್ ಬಿ.ಎಲ್. ಮಮತಾ, ನಿಕಟಪೂರ್ವ ಜಿಲ್ಲಾ ಜಂಟಿ ಕಾರ್ಯದರ್ಶಿ ಎಚ್.ಜಿ. ಕಾಂಚನಮಾಲಾ, ಗೈಡ್ ಕ್ಯಾಪ್ಟನ್ ಕೆ.ಸಿ. ಗೀತಾ, ಎಎಸ್ಒಸಿ ಎಚ್.ಎಂ. ಪ್ರಿಯಾಂಕಾ, ಆರ್.ಜೆ.ಗಿರೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-36-1054951213</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ‘ನಮ್ಮ ನಾಡಿನ ಪ್ರಗತಿಗೆ ಪ್ರತಿಯೊಬ್ಬರ ನಿಸ್ವಾರ್ಥವಾದ ಸೇವೆ ಅಗತ್ಯ’ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಡಾ.ವೈ.ಎಸ್. ವೀರಭದ್ರಪ್ಪ ಅಭಿಪ್ರಾಯಪಟ್ಟರು.</p>.<p>ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಏಕಲವ್ಯ ಜೀವ ಜಲ ಫೌಂಡೇಶನ್ ಹಾಗೂ ಏಕಲವ್ಯ ರೋವರ್ ಮುಕ್ತ ದಳದ ದಶಮಾನೋತ್ಸವದ ಅಂಗವಾಗಿ ವಿವಿಧ ಕ್ಷೇತ್ರದ ಸಾಧಕರಿಗೆ ‘ಏಕಲವ್ಯ ಸೇವಾ ರತ್ನ’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.</p>.<p>‘ಸೇವೆ ಮಾಡುವ ಸೌಭಾಗ್ಯ ಎಲ್ಲರಿಗೂ ಸಿಗುವುದಿಲ್ಲ. ದೇವರು ಈ ಕಾರ್ಯಕ್ಕಾಗಿ ಕೆಲವರನ್ನು ಆಯ್ಕೆ ಮಾಡಿಕೊಳ್ಳುತ್ತಾನೆ. ನಮ್ಮ ಬದುಕಿನಲ್ಲಿ ಪ್ರತಿಫಲ ಬಯಸದೆ ಸಲ್ಲಿಸುವ ಸೇವೆ ಭಗವಂತನಿಗೆ ಸಮರ್ಪಿತವಾಗುತ್ತದೆ’ ಎಂದರು.</p>.<p>ಸರಸ್ವತಿ ಮಹಿಳಾ ಕಲಾ ಸಮಾಜದ ವತಿಯಿಂದ ಹಲವು ವರ್ಷಗಳಿಂದ ವಿವಿಧ ರೀತಿಯಲ್ಲಿ ಅವಿಸ್ಮರಣೀಯ ಸೇವೆ ಸಲ್ಲಿಸಿದ ಸುಧಾ ರವಿಕುಮಾರ್ ಅವರ ಸೇವೆಯನ್ನು ಶ್ಲಾಘಿಸಿದರು.</p>.<p>ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವೈ.ಎಂ. ರಾಜೇಂದ್ರ, ವೀರ ಯೋಧ ವೈ.ಎನ್. ಮೋಹನ್ ಹಾಗೂ ರೋವರ್ ಮನು ವರ್ಷಿತ್ ಅವರಿಗೆ ‘ಏಕಲವ್ಯ ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ಗೈಡ್ ಜಿಲ್ಲಾ ಆಯುಕ್ತೆ ಜಯಾ ರಮೇಶ್, ಲೀಡರ್ ಟ್ರೈನರ್ ಬಿ.ಎಲ್. ಮಮತಾ, ನಿಕಟಪೂರ್ವ ಜಿಲ್ಲಾ ಜಂಟಿ ಕಾರ್ಯದರ್ಶಿ ಎಚ್.ಜಿ. ಕಾಂಚನಮಾಲಾ, ಗೈಡ್ ಕ್ಯಾಪ್ಟನ್ ಕೆ.ಸಿ. ಗೀತಾ, ಎಎಸ್ಒಸಿ ಎಚ್.ಎಂ. ಪ್ರಿಯಾಂಕಾ, ಆರ್.ಜೆ.ಗಿರೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-36-1054951213</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>