<p>ಹಾಸನ: ಶ್ರವಣಬೆಳಗೊಳದಲ್ಲಿ ಮದುವೆ ಮಾಡಿಸಲಿಲ್ಲ ಎಂಬ ಕಾರಣಕ್ಕೆ ಪುತ್ರನೇ ತಾಯಿಯನ್ನು ಕೊಲೆ ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಗಂಗಮ್ಮ (65) ಮೃತಪಟ್ಟಿ, ಪುತ್ರ ಉಮಾಶಂಕರ ಆರೋಪಿ. ವರ್ಷದ ಹಿಂದೆ ಕುಂಭಮೇಳಕ್ಕೆ ತೆರಳಿ ವಾಪಸ್ಸಾಗುವ ವೇಳೆ ಸಂಭವಿಸಿದ ಅಪಘಾತದಲ್ಲಿ ಉಮಾಶಂಕರ ತಲೆಗೆ ಗಾಯವಾಗಿತ್ತು. ಆ ಬಳಿಕ ಆತ ಕೆಲವೊಮ್ಮೆ ಮಾನಸಿಕ ಅಸ್ಥಿರತೆಯಿಂದ ವರ್ತಿಸುತ್ತಿದ್ದ ಎಂದು ತಿಳಿದುಬಂದಿದೆ.</p>.<p>ಮದುವೆ ಮಾಡಿಸುವಂತೆ ಉಮಾಶಂಕರ, ತಾಯಿಯೊಂದಿಗೆ ಪದೇಪದೇ ಜಗಳವಾಡುತ್ತಿದ್ದ. ಇದೇ ವಿಚಾರಕ್ಕೆ ಮಾ.26ರಂದು ಮನೆಯಲ್ಲಿ ತಾಯಿ-ಮಗನ ನಡುವೆ ವಾಗ್ವಾದ ಸಂಭವಿಸಿದೆ. ಆಕ್ರೋಶಗೊಂಡ ಉಮಾಶಂಕರ, ತಾಯಿಯ ತಲೆಗೆ ಕೈಯಿಂದ ಹೊಡೆದಿದ್ದಾನೆ. ಇದರಿಂದ ಗಂಗಮ್ಮ ನೆಲಕ್ಕುರುಳಿದ್ದು, ನಂತರ ಕಲ್ಲಿನಿಂದ ಹೊಡೆದು ಗಾಯಗೊಳಿಸಿದ್ದ ಎಂದು ಹೇಳಲಾಗಿದೆ.</p>.<p>ಗಂಭೀರವಾಗಿ ಗಾಯಗೊಂಡಿದ್ದ ಗಂಗಮ್ಮ ಅವರನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಾ.30ರಂದು ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.</p>.<p>ಈ ಕುರಿತು ಶ್ರವಣಬೆಳಗೊಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.</p>.<p>ಹಾಸನ: ಇಲ್ಲಿನ ಹೇಮಾವತಿ ನಗರದ ಮನೆಯಲ್ಲಿದ್ದ 330 ಗ್ರಾಂ ಚಿನ್ನಾಭರಣ ಕಳವಾಗಿವೆ.</p>.<p>ಸಂಬಂಧಿಕರ ಮದುವೆ ಇದ್ದುದರಿಂದ ಧರಿಸಿಕೊಳ್ಳಲು ಶ್ವೇತಾ ಅವರು ಮಾ.15 ರಂದು ಅಡುಗೆ ಮನೆಯ ಕಾರ್ನರ್ ಹತ್ತಿರ ಇಟ್ಟಿದ್ದ ಒಡವೆಗಳನ್ನು ನೋಡಿದಾಗ, ಚಿನ್ನದ ಆಭರಣಗಳನ್ನಿಟ್ಟಿದ್ದ ಡಬ್ಬಿಯು ಕಾಣೆಯಾಗಿತ್ತು. ಒಟ್ಟು ₹33 ಲಕ್ಷ ಮೌಲ್ಯದ 330 ಗ್ರಾಂ ಚಿನ್ನಾಭರಣ ಕಳವಾಗಿದ್ದು, ನಗರದ ಪೆನ್ಷನ್ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-36-15828199</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ಶ್ರವಣಬೆಳಗೊಳದಲ್ಲಿ ಮದುವೆ ಮಾಡಿಸಲಿಲ್ಲ ಎಂಬ ಕಾರಣಕ್ಕೆ ಪುತ್ರನೇ ತಾಯಿಯನ್ನು ಕೊಲೆ ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಗಂಗಮ್ಮ (65) ಮೃತಪಟ್ಟಿ, ಪುತ್ರ ಉಮಾಶಂಕರ ಆರೋಪಿ. ವರ್ಷದ ಹಿಂದೆ ಕುಂಭಮೇಳಕ್ಕೆ ತೆರಳಿ ವಾಪಸ್ಸಾಗುವ ವೇಳೆ ಸಂಭವಿಸಿದ ಅಪಘಾತದಲ್ಲಿ ಉಮಾಶಂಕರ ತಲೆಗೆ ಗಾಯವಾಗಿತ್ತು. ಆ ಬಳಿಕ ಆತ ಕೆಲವೊಮ್ಮೆ ಮಾನಸಿಕ ಅಸ್ಥಿರತೆಯಿಂದ ವರ್ತಿಸುತ್ತಿದ್ದ ಎಂದು ತಿಳಿದುಬಂದಿದೆ.</p>.<p>ಮದುವೆ ಮಾಡಿಸುವಂತೆ ಉಮಾಶಂಕರ, ತಾಯಿಯೊಂದಿಗೆ ಪದೇಪದೇ ಜಗಳವಾಡುತ್ತಿದ್ದ. ಇದೇ ವಿಚಾರಕ್ಕೆ ಮಾ.26ರಂದು ಮನೆಯಲ್ಲಿ ತಾಯಿ-ಮಗನ ನಡುವೆ ವಾಗ್ವಾದ ಸಂಭವಿಸಿದೆ. ಆಕ್ರೋಶಗೊಂಡ ಉಮಾಶಂಕರ, ತಾಯಿಯ ತಲೆಗೆ ಕೈಯಿಂದ ಹೊಡೆದಿದ್ದಾನೆ. ಇದರಿಂದ ಗಂಗಮ್ಮ ನೆಲಕ್ಕುರುಳಿದ್ದು, ನಂತರ ಕಲ್ಲಿನಿಂದ ಹೊಡೆದು ಗಾಯಗೊಳಿಸಿದ್ದ ಎಂದು ಹೇಳಲಾಗಿದೆ.</p>.<p>ಗಂಭೀರವಾಗಿ ಗಾಯಗೊಂಡಿದ್ದ ಗಂಗಮ್ಮ ಅವರನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಾ.30ರಂದು ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.</p>.<p>ಈ ಕುರಿತು ಶ್ರವಣಬೆಳಗೊಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.</p>.<p>ಹಾಸನ: ಇಲ್ಲಿನ ಹೇಮಾವತಿ ನಗರದ ಮನೆಯಲ್ಲಿದ್ದ 330 ಗ್ರಾಂ ಚಿನ್ನಾಭರಣ ಕಳವಾಗಿವೆ.</p>.<p>ಸಂಬಂಧಿಕರ ಮದುವೆ ಇದ್ದುದರಿಂದ ಧರಿಸಿಕೊಳ್ಳಲು ಶ್ವೇತಾ ಅವರು ಮಾ.15 ರಂದು ಅಡುಗೆ ಮನೆಯ ಕಾರ್ನರ್ ಹತ್ತಿರ ಇಟ್ಟಿದ್ದ ಒಡವೆಗಳನ್ನು ನೋಡಿದಾಗ, ಚಿನ್ನದ ಆಭರಣಗಳನ್ನಿಟ್ಟಿದ್ದ ಡಬ್ಬಿಯು ಕಾಣೆಯಾಗಿತ್ತು. ಒಟ್ಟು ₹33 ಲಕ್ಷ ಮೌಲ್ಯದ 330 ಗ್ರಾಂ ಚಿನ್ನಾಭರಣ ಕಳವಾಗಿದ್ದು, ನಗರದ ಪೆನ್ಷನ್ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-36-15828199</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>