ನಗರದ ಗೋಮತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ನೆರವೇರಿದ ವಿವಾಹ ಸಮಾರಂಭ ರಾಷ್ಟ್ರಭಕ್ತಿಯ ಪ್ರತೀಕವಾಗಿತ್ತು.
ಭಾರತೀಯ ವಾಯುಪಡೆಯಲ್ಲಿ ಕೆಲಸ ಮಾಡುತ್ತಿರುವ ಬೇಲೂರಿನ ರಾಜೀವ್, ಆಲೂರು ತಾಲ್ಲೂಕು ಕುದುರುವಳ್ಳಿ ಗ್ರಾಮದ ಈಶ್ವರಿ ಅವರನ್ನು ವಿವಾಹವಾದರು. ರಾಜೀವ್ ಪ್ರಸ್ತುತ ಅಹಮದಾಬಾದ್ನಲ್ಲಿ ಸೈನಿಕನಾಗಿ ಕಾರ್ಯ ನಿರ್ವಹಿಸುತ್ತಿದ್ದು, ಮದುವೆ ಸಮಾರಂಭದಲ್ಲಿ ಭಾರತ ಮಾತೆಯನ್ನು ಸ್ಮರಿಸಲು ನಿರ್ಧರಿಸಿದ್ದರು.