ಸಕಲೇಶಪುರ ತಾಲ್ಲೂಕಿನ ತೋಟಕ್ಕೆ ನುಗ್ಗುವ ಕಾಡಾನೆ ಕಾಫಿ ಹಾಗೂ ಕಾಳು ಮೆಣಸಿಗೆ ಹಾನಿ ಮಾಡುತ್ತಿವೆ.
ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಅವರಿಗೆ ಮನವಿ ಸಲ್ಲಿಸಲಾಗಿದೆ. ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ತ್ವರಿತವಾಗಿ ಪರಿಹಾರದ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಎಚ್.ಡಿ. ಕುಮಾರಸ್ವಾಮಿ ಕೇಂದ್ರ ಅರಣ್ಯ ಸಚಿವ
ಸಮಸ್ಯೆಗೆ ಪೂರ್ಣ ವಿರಾಮ ಹಾಕುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುವ ಅಗತ್ಯ ಇದೆ. ಆನೆಧಾಮ ನಿರ್ಮಿಸಲು ಸ್ಥಳ ಆಹಾರ ಮತ್ತು ನೀರಿನ ಕೊರತೆ ಇಲ್ಲ. ನಮಗೆ ಇಚ್ಛಾಶಕ್ತಿಯ ಕೊರತೆ ಇದೆ.
ಸಿಮೆಂಟ್ ಮಂಜು ಸಕಲೇಶಪುರ ಶಾಸಕ
ಬಿಕ್ಕೋಡು ಅರಳಿ ಭಾಗದಲ್ಲಿ ಸಂಜೆ ನಂತರ ಮನೆಯಿಂದ ಆಚೆ ಬರಲು ಜನರು ಭಯಪಡುತ್ತಿದ್ದಾರೆ. ವಿಧಾನಸಭೆಯಲ್ಲಿ ಸಮಸ್ಯೆ ಬಗ್ಗೆ ಪ್ರಸ್ತಾಪ ಮಾಡಿದ್ದು ಈಗಲಾದರೂ ಪರಿಹಾರ ಕಂಡುಕೊಳ್ಳಲೇಬೇಕು.
ಎಚ್.ಕೆ. ಸುರೇಶ್ ಬೇಲೂರು ಶಾಸಕ
ಆನೆಗಳ ಪುನರ್ವಸತಿಗೆ ಪ್ರತ್ಯೇಕ ಮಂಡಳಿ ಅಗತ್ಯವಿದೆ. ಮಂಡಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನುದಾನ ನೀಡಬೇಕು. ಸಾಮಾಜಿಕ ಹೊಣೆಗಾರಿಕೆ ನಿಧಿ ಪಡೆಯುವ ಅಧಿಕಾರವೂ ಇರಬೇಕು.