<p>ಹಾಸನ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ 94ನೇ ಜನ್ಮದಿನವನ್ನು ಮೇ 18ರಂದು ನಗರದಲ್ಲಿ ಅದ್ದೂರಿಯಾಗಿ ಹಾಗೂ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲು ಸಕಲ ಸಿದ್ಧತೆಗಳು ಭರದಿಂದ ಸಾಗಿವೆ ಎಂದು ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ತಿಳಿಸಿದರು.</p>.<p>ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವೇಗೌಡರ ಜನ್ಮದಿನವನ್ನು ಕೇವಲ ರಾಜಕೀಯ ಕಾರ್ಯಕ್ರಮವಾಗಿ ಸೀಮಿತಗೊಳಿಸದೇ, ಸಾಮಾಜಿಕ ಸೇವೆ, ಸರ್ವಧರ್ಮ ಸಾಮರಸ್ಯ ಮತ್ತು ಜನಪರ ಚಟುವಟಿಕೆಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದರು.</p>.<p>‘ಮೇ 18ರಂದು ಬೆಳಿಗ್ಗೆ ನಗರದ ನೀರುಬಾಗಿಲು ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ದೇವೇಗೌಡರ ಆರೋಗ್ಯ, ದೀರ್ಘಾಯುಷ್ಯ ಹಾಗೂ ನಾಡಿನ ಸುಭಿಕ್ಷತೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು. ಬಳಿಕ ನಗರದ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ನೆರವೇರಿಸಲಾಗುವುದು. ಧರ್ಮಗಳ ನಡುವೆ ಸಾಮರಸ್ಯ ಹಾಗೂ ಶಾಂತಿಯ ಸಂದೇಶ ಸಾರುವುದು ಇದರ ಉದ್ದೇಶ. ದೇವೇಗೌಡರು ಸದಾ ಸರ್ವಧರ್ಮ ಸಮಭಾವಕ್ಕೆ ಮಹತ್ವ ನೀಡಿದ ನಾಯಕರು. ಅವರ ಆದರ್ಶದಂತೆ ಕಾರ್ಯಕ್ರಮ ರೂಪಿಸಿದ್ದೇವೆ’ ಎಂದು ಹೇಳಿದರು.</p>.<p>‘ಬೆಳಿಗ್ಗೆ 10 ಗಂಟೆಗೆ ನಗರದ ಎನ್.ಆರ್. ವೃತ್ತದಲ್ಲಿ ದೇವೇಗೌಡರ ಭಾವಚಿತ್ರಕ್ಕೆ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರಿಂದ ಕ್ಷೀರಾಭಿಷೇಕ ನೆರವೇರಲಿದೆ. ಪಕ್ಷದ ಮುಖಂಡರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾವಿರಾರು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ’ ಎಂದರು.</p>.<p>‘ಸಮಾಜಮುಖಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಮಧ್ಯಾಹ್ನ ನಗರದ ಕಾಮಧೇನು ವೃದ್ಧಾಶ್ರಮದಲ್ಲಿ ಹಣ್ಣು-ಹಂಪಲು ಹಾಗೂ ಸಿಹಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವೃದ್ಧಾಶ್ರಮದಲ್ಲಿರುವ ಹಿರಿಯ ನಾಗರಿಕರೊಂದಿಗೆ ಸಮಯ ಕಳೆದು ಅವರ ಯೋಗಕ್ಷೇಮ ವಿಚಾರಿಸುವ ಮೂಲಕ ದೇವೇಗೌಡರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು’ ಎಂದು ತಿಳಿಸಿದರು.</p>.<p>‘ದೇವೇಗೌಡರು ದೇಶದ ರಾಜಕೀಯ ಇತಿಹಾಸದಲ್ಲಿ ವಿಶಿಷ್ಟ ಛಾಪು ಮೂಡಿಸಿದ ನಾಯಕ. ರೈತರ ಸಮಸ್ಯೆ, ಗ್ರಾಮೀಣಾಭಿವೃದ್ಧಿ ಹಾಗೂ ಜನಸಾಮಾನ್ಯರ ಪರ ಹೋರಾಟದ ಮೂಲಕ ಅವರು ಜನಮನ ಗೆದ್ದಿದ್ದಾರೆ. ಅವರ ಸರಳತೆ ಮತ್ತು ಜನಪರ ಆಡಳಿತ ಇಂದಿಗೂ ಅನೇಕರಿಗೆ ಪ್ರೇರಣೆ. ಅವರ ಜನ್ಮದಿನವನ್ನು ಹಬ್ಬದಂತೆ ಆಚರಿಸಲು ಅಭಿಮಾನಿಗಳು ಉತ್ಸಾಹದಿಂದ ಸಿದ್ಧತೆ ನಡೆಸಿದ್ದಾರೆ’ ಎಂದು ಹೇಳಿದರು.</p>.<p>ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ದ್ಯಾವೇಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿದರೆಕೆರೆ ಜಯರಾಂ, ಜಿಲ್ಲಾ ಘಟಕದ ವಕ್ತಾರ ಹೊಂಗೆರೆ ರಘು, ಮುಖಂಡ ಸಮೀರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-36-1888929588</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ 94ನೇ ಜನ್ಮದಿನವನ್ನು ಮೇ 18ರಂದು ನಗರದಲ್ಲಿ ಅದ್ದೂರಿಯಾಗಿ ಹಾಗೂ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲು ಸಕಲ ಸಿದ್ಧತೆಗಳು ಭರದಿಂದ ಸಾಗಿವೆ ಎಂದು ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ತಿಳಿಸಿದರು.</p>.<p>ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವೇಗೌಡರ ಜನ್ಮದಿನವನ್ನು ಕೇವಲ ರಾಜಕೀಯ ಕಾರ್ಯಕ್ರಮವಾಗಿ ಸೀಮಿತಗೊಳಿಸದೇ, ಸಾಮಾಜಿಕ ಸೇವೆ, ಸರ್ವಧರ್ಮ ಸಾಮರಸ್ಯ ಮತ್ತು ಜನಪರ ಚಟುವಟಿಕೆಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದರು.</p>.<p>‘ಮೇ 18ರಂದು ಬೆಳಿಗ್ಗೆ ನಗರದ ನೀರುಬಾಗಿಲು ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ದೇವೇಗೌಡರ ಆರೋಗ್ಯ, ದೀರ್ಘಾಯುಷ್ಯ ಹಾಗೂ ನಾಡಿನ ಸುಭಿಕ್ಷತೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು. ಬಳಿಕ ನಗರದ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ನೆರವೇರಿಸಲಾಗುವುದು. ಧರ್ಮಗಳ ನಡುವೆ ಸಾಮರಸ್ಯ ಹಾಗೂ ಶಾಂತಿಯ ಸಂದೇಶ ಸಾರುವುದು ಇದರ ಉದ್ದೇಶ. ದೇವೇಗೌಡರು ಸದಾ ಸರ್ವಧರ್ಮ ಸಮಭಾವಕ್ಕೆ ಮಹತ್ವ ನೀಡಿದ ನಾಯಕರು. ಅವರ ಆದರ್ಶದಂತೆ ಕಾರ್ಯಕ್ರಮ ರೂಪಿಸಿದ್ದೇವೆ’ ಎಂದು ಹೇಳಿದರು.</p>.<p>‘ಬೆಳಿಗ್ಗೆ 10 ಗಂಟೆಗೆ ನಗರದ ಎನ್.ಆರ್. ವೃತ್ತದಲ್ಲಿ ದೇವೇಗೌಡರ ಭಾವಚಿತ್ರಕ್ಕೆ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರಿಂದ ಕ್ಷೀರಾಭಿಷೇಕ ನೆರವೇರಲಿದೆ. ಪಕ್ಷದ ಮುಖಂಡರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾವಿರಾರು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ’ ಎಂದರು.</p>.<p>‘ಸಮಾಜಮುಖಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಮಧ್ಯಾಹ್ನ ನಗರದ ಕಾಮಧೇನು ವೃದ್ಧಾಶ್ರಮದಲ್ಲಿ ಹಣ್ಣು-ಹಂಪಲು ಹಾಗೂ ಸಿಹಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವೃದ್ಧಾಶ್ರಮದಲ್ಲಿರುವ ಹಿರಿಯ ನಾಗರಿಕರೊಂದಿಗೆ ಸಮಯ ಕಳೆದು ಅವರ ಯೋಗಕ್ಷೇಮ ವಿಚಾರಿಸುವ ಮೂಲಕ ದೇವೇಗೌಡರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು’ ಎಂದು ತಿಳಿಸಿದರು.</p>.<p>‘ದೇವೇಗೌಡರು ದೇಶದ ರಾಜಕೀಯ ಇತಿಹಾಸದಲ್ಲಿ ವಿಶಿಷ್ಟ ಛಾಪು ಮೂಡಿಸಿದ ನಾಯಕ. ರೈತರ ಸಮಸ್ಯೆ, ಗ್ರಾಮೀಣಾಭಿವೃದ್ಧಿ ಹಾಗೂ ಜನಸಾಮಾನ್ಯರ ಪರ ಹೋರಾಟದ ಮೂಲಕ ಅವರು ಜನಮನ ಗೆದ್ದಿದ್ದಾರೆ. ಅವರ ಸರಳತೆ ಮತ್ತು ಜನಪರ ಆಡಳಿತ ಇಂದಿಗೂ ಅನೇಕರಿಗೆ ಪ್ರೇರಣೆ. ಅವರ ಜನ್ಮದಿನವನ್ನು ಹಬ್ಬದಂತೆ ಆಚರಿಸಲು ಅಭಿಮಾನಿಗಳು ಉತ್ಸಾಹದಿಂದ ಸಿದ್ಧತೆ ನಡೆಸಿದ್ದಾರೆ’ ಎಂದು ಹೇಳಿದರು.</p>.<p>ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ದ್ಯಾವೇಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿದರೆಕೆರೆ ಜಯರಾಂ, ಜಿಲ್ಲಾ ಘಟಕದ ವಕ್ತಾರ ಹೊಂಗೆರೆ ರಘು, ಮುಖಂಡ ಸಮೀರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-36-1888929588</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>