<p>ಹಾಸನ: ಎಸ್ಎಸ್ಎಲ್ಸಿ ಫಲಿತಾಂಶ ದಲ್ಲಿ ಹಾಸನ ಜಿಲ್ಲೆ ನಾಲ್ಕನೇ ಸ್ಥಾನ ಪಡೆದಿದೆ. ಇದನ್ನು ಉಳಿಸಿಕೊಳ್ಳುವುದರ ಜೊತೆಗೆ ಮುಂದಿನ ವರ್ಷ ಇನ್ನೂ ಉತ್ತಮ ಸ್ಥಾನ ಮಾಡಲು ಈ ವರ್ಷದ ಆರಂಭದಿಂದಲೇ ಪ್ರಯತ್ನಿಸಿ, ಮಕ್ಕಳನ್ನು ಅಣಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಕರ್ನಾಟಕ ಪಬ್ಲಿಕ್ ಶಾಲೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಈ ಬಾರಿಯ ಫಲಿತಾಂಶ ತಮ್ಮ ಜವಾಬ್ದಾರಿ ಹೆಚ್ಚಿಸಿದೆ. ಈ ನಿಟ್ಟಿನಲ್ಲಿ ಮುಂದಿನ ವರ್ಷದಲ್ಲಿ ಜಿಲ್ಲೆಯು ಉನ್ನತ ಸ್ಥಾನ ಪಡೆಯಲು ಆರಂಭದಿಂದಲೇ ಪರಿಶ್ರಮ ಹಾಕಿ ಎಂದು ತಿಳಿಸಿದರು.</p>.<p>ಪ್ರತಿ ವರ್ಷ ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಕಡಿಮೆ ಆಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಗಾಗಿ ಹೆಚ್ಚಿನ ಪ್ರಯತ್ನ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆಯಿಲ್ಲ. ಶೇಕಡವಾರು ಫಲಿತಾಂಶದಲ್ಲಿ ಬಹಳ ಅಂತರವಿಲ್ಲ ಎಂದ ಅವರು, ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳಿಗೆ ಕೊರತೆ ಇಲ್ಲ. ಅಧಿಕಾರಿಗಳು ಆಸಕ್ತಿ ವಹಿಸುವ ಮೂಲಕ ಪಿಯುಸಿ ದಾಖಲಾತಿಯನ್ನು ಹೆಚ್ಚಿಸುವಂತೆ ಸೂಚಿಸಿದರು.</p>.<p>ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ಬಡಮಕ್ಕಳ ವಿದ್ಯಾಭ್ಯಾಸಕ್ಕೆ ಈ ಶಾಲೆಗಳು ಸಹಕಾರಿಯಾಗಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ತಿಳಿಸಿದರು.</p>.<p>ಸಂಸದ ಶ್ರೇಯಸ್ ಪಟೇಲ್, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-36-1574630357</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ಎಸ್ಎಸ್ಎಲ್ಸಿ ಫಲಿತಾಂಶ ದಲ್ಲಿ ಹಾಸನ ಜಿಲ್ಲೆ ನಾಲ್ಕನೇ ಸ್ಥಾನ ಪಡೆದಿದೆ. ಇದನ್ನು ಉಳಿಸಿಕೊಳ್ಳುವುದರ ಜೊತೆಗೆ ಮುಂದಿನ ವರ್ಷ ಇನ್ನೂ ಉತ್ತಮ ಸ್ಥಾನ ಮಾಡಲು ಈ ವರ್ಷದ ಆರಂಭದಿಂದಲೇ ಪ್ರಯತ್ನಿಸಿ, ಮಕ್ಕಳನ್ನು ಅಣಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಕರ್ನಾಟಕ ಪಬ್ಲಿಕ್ ಶಾಲೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಈ ಬಾರಿಯ ಫಲಿತಾಂಶ ತಮ್ಮ ಜವಾಬ್ದಾರಿ ಹೆಚ್ಚಿಸಿದೆ. ಈ ನಿಟ್ಟಿನಲ್ಲಿ ಮುಂದಿನ ವರ್ಷದಲ್ಲಿ ಜಿಲ್ಲೆಯು ಉನ್ನತ ಸ್ಥಾನ ಪಡೆಯಲು ಆರಂಭದಿಂದಲೇ ಪರಿಶ್ರಮ ಹಾಕಿ ಎಂದು ತಿಳಿಸಿದರು.</p>.<p>ಪ್ರತಿ ವರ್ಷ ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಕಡಿಮೆ ಆಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಗಾಗಿ ಹೆಚ್ಚಿನ ಪ್ರಯತ್ನ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆಯಿಲ್ಲ. ಶೇಕಡವಾರು ಫಲಿತಾಂಶದಲ್ಲಿ ಬಹಳ ಅಂತರವಿಲ್ಲ ಎಂದ ಅವರು, ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳಿಗೆ ಕೊರತೆ ಇಲ್ಲ. ಅಧಿಕಾರಿಗಳು ಆಸಕ್ತಿ ವಹಿಸುವ ಮೂಲಕ ಪಿಯುಸಿ ದಾಖಲಾತಿಯನ್ನು ಹೆಚ್ಚಿಸುವಂತೆ ಸೂಚಿಸಿದರು.</p>.<p>ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ಬಡಮಕ್ಕಳ ವಿದ್ಯಾಭ್ಯಾಸಕ್ಕೆ ಈ ಶಾಲೆಗಳು ಸಹಕಾರಿಯಾಗಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ತಿಳಿಸಿದರು.</p>.<p>ಸಂಸದ ಶ್ರೇಯಸ್ ಪಟೇಲ್, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-36-1574630357</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>