ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವರೂಪ ದರ್ಶನ ನೀಡಿದ ಹಾಸನಾಂಬೆ: ಮೊಳಗಿದ ಭಕ್ತರ ಜಯಘೋಷ

ಮೊಳಗಿದ ಭಕ್ತರ ಜಯಘೋಷ; ಭಕ್ತರ ಮನಸೆಳೆದ ದೇವಾಲಯಗಳಿಗೆ ಪುಷ್ಪಾಲಂಕಾರ
Last Updated 28 ಅಕ್ಟೋಬರ್ 2021, 19:59 IST
ಅಕ್ಷರ ಗಾತ್ರ

ಹಾಸನ: ಭಕ್ತರ ಜಯಘೋಷದ ನಡುವೆ ನಗರದ ಅಧಿದೇವತೆ ಹಾಸನಾಂಬೆ ವರ್ಷದ ನಂತರ ಗುರುವಾರ ವಿಶ್ವರೂಪ ದರ್ಶನ ಕರುಣಿಸಿದಳು. ಸಂಪ್ರದಾಯದಂತೆ ಮೈಸೂರು ಅರಸು ಮನೆತನದ ನರಸಿಂಹರಾಜ ಅರಸ್, ದೇಗುಲದ ಬಾಗಿಲ ಎದುರು ಪೂಜೆ ಸಲ್ಲಿಸಿ ಬಾಳೆ ಕಂದು ಕತ್ತರಿಸಿದರು.

ನಂತರ ಪ್ರಧಾನಅರ್ಚಕರು ಮಧ್ಯಾಹ್ನ 12.19ಕ್ಕೆ ಆದಿಚುಂಚನಗಿರಿ ಕ್ಷೇತ್ರದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಗರ್ಭಗುಡಿ ಬಾಗಿಲಿನ ಬೀಗ ತೆರೆಯುತ್ತಿದ್ದಂತೆ ಭಕ್ತರ ಜಯಘೋಷ ಮೇಳೈಸಿತು.

ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಶಾಸಕ ಪ್ರೀತಂ ಗೌಡ, ಜಿಲ್ಲಾಧಿಕಾರಿ ಆರ್.ಗಿರೀಶ್‌, ಪೊಲೀಸ್‌ ವರಿಷ್ಠಾಧಿಕಾರಿ ಆರ್‌.ಶ್ರೀನಿವಾಸ್ ಗೌಡ, ಶಾಖಾ ಮಠದ ಶಂಭುನಾಥಸ್ವಾಮೀಜಿ ಸೇರಿದಂತೆ ಸಾರ್ವಜನಿಕರು ಆಭರಣಾಲಂಕಾರವಿಲ್ಲದ ದೇವಿಯ ವಿಶ್ವರೂಪ ದರ್ಶನ ಪಡೆದರು. ‌

ಕೋವಿಡ್‌ ಲಸಿಕೆ ಪ್ರಮಾಣ ಪತ್ರ ಹಾಗೂ ಗುರುತಿನ ಕಾರ್ಡ್‌ ಹೊಂದಿರುವವರಿಗೆ ಮಾತ್ರ ದೇವಿ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಅಶ್ವಿಜ ಮಾಸದ ಕೃಷ್ಣಪಕ್ಷದ ಪ್ರಥಮ ಗುರುವಾರ ದೇವಸ್ಥಾನದ ಗರ್ಭಗುಡಿ ಬಾಗಿಲು ತೆರೆದಿದ್ದು, ಬಲಿಪಾಡ್ಯಮಿ ಮರು ದಿನವಾದ ನ.6ರಂದು ಬಾಗಿಲು ಮುಚ್ಚಲಾಗುವುದು. ಮೊದಲ ಮತ್ತು ಕೊನೆ ದಿನ ಹೊರತುಪಡಿಸಿ ಉಳಿದ ದಿನಗಳಲ್ಲಿ ನಿತ್ಯ ಬೆಳಿಗ್ಗೆ 6ರಿಂದ ರಾತ್ರಿ 8ರವರೆಗೆ ದೇವಿ ದರ್ಶನ ಮಾಡಬಹುದು.

ಮೈಸೂರು ಅರಸು ವಂಶದ ನರಸಿಂಹ ರಾಜ ಅರಸ್‌ ಅವರು ಬಾಳೆ ಕಂದು ಕಡಿಯುವ ಮೂಲಕ ಹಾಸನಾಂಬೆ ಬಾಗಿಲುತೆರೆಯಲು ಅನುವು ಮಾಡಿಕೊಟ್ಟರು.
ಮೈಸೂರು ಅರಸು ವಂಶದ ನರಸಿಂಹ ರಾಜ ಅರಸ್‌ ಅವರು ಬಾಳೆ ಕಂದು ಕಡಿಯುವ ಮೂಲಕ ಹಾಸನಾಂಬೆ ಬಾಗಿಲುತೆರೆಯಲು ಅನುವು ಮಾಡಿಕೊಟ್ಟರು.

ಕೋವಿಡ್‌ ಕಾರಣದಿಂದ ವಯೋವೃದ್ಧರು, ಮಕ್ಕಳನ್ನು ಕರೆತರದಂತೆ ಜಿಲ್ಲಾಡಳಿತ ಸಲಹೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT