<p><strong>ಹಾಸನ</strong>: ‘ನಾನು ರಾಜಕೀಯದಿಂದ ನಿವೃತ್ತಿ ಆಗಲ್ಲ. ಈಗ ವೀಲ್ಚೇರ್ನಲ್ಲಿ ಬಂದಿದ್ದೇನೆ. ಸಂಸತ್ತಿಗೂ ವೀಲ್ಚೇರ್ನಲ್ಲಿ ಹೋಗುತ್ತೇನೆ. ನನಗೆ ಶಕ್ತಿ, ಅರ್ಹತೆ ಇದೆ. 65 ವರ್ಷಗಳ ರಾಜಕೀಯ ಜೀವನದಲ್ಲಿ ಹೋರಾಟ ಮಾಡಿದ್ದು, ಮುಂದುವರಿಸುತ್ತೇನೆ’ ಎಂದು ರಾಜ್ಯಸಭೆ ಸದಸ್ಯ ಎಚ್.ಡಿ. ದೇವೇಗೌಡ ಹೇಳಿದರು.</p>.<p>ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊನ್ನೆ ಸಂಭವಿಸಿದ ಮೊಸಳೆಹೊಸಳ್ಳಿ ದುರಂತ, ಕಾವೇರಿ, ಕೃಷ್ಣ ನದಿ ನೀರು ಹಂಚಿಕೆ ವಿಚಾರ, ರಸ್ತೆ ಕಾಮಗಾರಿಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತನಾಡಿದರು.</p>.<p>ಕಾವೇರಿ ವಿಚಾರದಲ್ಲಿ ಪ್ರಧಾನಮಂತ್ರಿಗೆ ಮನವರಿಕೆ ಮಾಡುತ್ತೇನೆ. ಕರ್ನಾಟಕಕ್ಕೆ ಏನು ನಷ್ಟವಾಗಿದೆ ಹೇಳುತ್ತೇನೆ. ಆರು ದಶಕದ ರಾಜಕೀಯ ಅನುಭವದಲ್ಲಿ ಈ ವಿಚಾರದಲ್ಲಿ ಹಲವು ಮಾಹಿತಿ ನನಗೆ ಇದೆ. ಗೋದಾವರಿ ನೀರನ್ನು ಅಂಧ್ರಪ್ರದೇಶ-ತೆಲಂಗಾಣಕ್ಕೆ ಬಿಡುವ ನಿರ್ಣಯದ ವಿರುದ್ಧ ತಮ್ಮ ಧ್ವನಿ ಎತ್ತಿದ್ದೇನೆ. ಸರ್ಕಾರ ಸಲಹೆ ಕೊಟ್ಟರೆ ನಾನು ಸ್ವೀಕರಿಸುತ್ತೇನೆ ಎಂದರು.</p>.<p>ಪ್ರಧಾನಿ ನರೇಂದ್ರ ಮೋದಿ ವಿಶ್ವದ ಮಹಾನಾಯಕರು. ಮಣಿಪುರದಲ್ಲಿ ಶಾಂತಿ ನೆಲೆಸಲು ಅವರು ಪ್ರಯತ್ನಿಸಿದ್ದಾರೆ. ವಿರೋಧ ಪಕ್ಷ ಟೀಕೆ ಮಾಡಿದ್ದರೂ, ನಾನು ಅವರನ್ನು ಗೌರವಿಸುತ್ತೇನೆ ಎಂದರು.</p>.<p>ಚೆನ್ನೈ-ಬೆಂಗಳೂರು ರಸ್ತೆಯ ಬಾಕಿ ಕಾಮಗಾರಿ ತ್ವರಿತ ಪೂರ್ಣಗೊಳಿಸಬೇಕಿದೆ. ಶಿರಾಡಿಘಾಟ್ನಲ್ಲಿ 10 ಕಿ.ಮೀ. ಸುರಂಗ ನಿರ್ಮಿಸಬೇಕೆಂದು ಒತ್ತಾಯಿಸಿದ್ದು, ಮೋದಿ, ನಿತಿನ್ ಗಡ್ಕರಿ ಅವರೊಂದಿಗೆ ಮಾತನಾಡಿದ್ದೇನೆ. ಹೈದರಾಬಾದ್-ಬೆಂಗಳೂರು ರಸ್ತೆ ಕಾಮಗಾರಿ ಕೂಡ ತ್ವರಿತಗೊಳಿಸುವಂತೆ ಬೇಡಿಕೆ ಇಟ್ಟಿರುವುದಾಗಿ ಹೇಳಿದರು.</p>.<p>ರಾಜ್ಯಸಭಾ ಸದಸ್ಯರ ಅವಧಿ ಇನ್ನೂ 11 ತಿಂಗಳು ಇದೆ. ಅವಧಿ ಮುಗಿದ ಮೇಲೂ ಶಕ್ತಿಮೀರಿ ಹೋರಾಡುತ್ತೇನೆ. ನನ್ನ ಜೀವನದಲ್ಲಿ ಅನೇಕ ನೋವು-ಕಷ್ಟಗಳಿದ್ದರೂ, ಅಭಿವೃದ್ಧಿ ವಿಚಾರದಲ್ಲಿ ಹೋರಾಟ ಬಿಡುವುದಿಲ್ಲ ಎಂದು ತಿಳಿಸಿದರು.</p>.<p>ಮೊಸಳೆಹೊಸಹಳ್ಳಿ ಗಣೇಶ ಮೆರವಣಿಗೆಯ ವೇಳೆ ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಜೆಡಿಎಸ್ ಪಕ್ಷದ ವತಿಯಿಂದ ಮೃತರಿಗೆ ತಲಾ ₹1 ಲಕ್ಷ, ತೀವ್ರ ಗಾಯಾಳುಗಳಿಗೆ ₹ 25ಸಾವಿರದಿಂದ ₹15ಸಾವಿರದವರೆಗೆ ಪರಿಹಾರ ನೀಡಲಾಗುವುದು. ಪಕ್ಷದಲ್ಲಿ ಹಣ ಇರಲಿ, ಇಲ್ಲದೇ ಇರಲಿ ಜವಾಬ್ದಾರಿ ಹೊತ್ತುಕೊಂಡಿದ್ದೇನೆ ಎಂದರು.</p>.<p>ಜಿಲ್ಲಾಧಿಕಾರಿಯಿಂದ ಮೃತರ ಮಾಹಿತಿ ಪಡೆದು ಅವರ ಕುಟುಂಬದವರಿಗೆ ಪರಿಹಾರ ಹಣವನ್ನು ಹಸ್ತಾಂತರಿಸಲಾಗುವುದು. ಇಲ್ಲವಾದರೆ ಜಿಲ್ಲಾಧಿಕಾರಿ ಮೂಲಕವೇ ಅರ್ಹರಿಗೆ ಪರಿಹಾರ ಹಣ ತಲುಪಿಸಲಾಗುವುದು ಎಂದರು.</p>.<p>ಶಾಸಕ ಸ್ವರೂಪ್ ಪ್ರಕಾಶ್, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್. ಲಿಂಗೇಶ್, ತಾಲ್ಲೂಕು ಘಟಕದ ಅಧ್ಯಕ್ಷ ದ್ಯಾವೇಗೌಡ, ಎಚ್ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಸತೀಶ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ‘ನಾನು ರಾಜಕೀಯದಿಂದ ನಿವೃತ್ತಿ ಆಗಲ್ಲ. ಈಗ ವೀಲ್ಚೇರ್ನಲ್ಲಿ ಬಂದಿದ್ದೇನೆ. ಸಂಸತ್ತಿಗೂ ವೀಲ್ಚೇರ್ನಲ್ಲಿ ಹೋಗುತ್ತೇನೆ. ನನಗೆ ಶಕ್ತಿ, ಅರ್ಹತೆ ಇದೆ. 65 ವರ್ಷಗಳ ರಾಜಕೀಯ ಜೀವನದಲ್ಲಿ ಹೋರಾಟ ಮಾಡಿದ್ದು, ಮುಂದುವರಿಸುತ್ತೇನೆ’ ಎಂದು ರಾಜ್ಯಸಭೆ ಸದಸ್ಯ ಎಚ್.ಡಿ. ದೇವೇಗೌಡ ಹೇಳಿದರು.</p>.<p>ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊನ್ನೆ ಸಂಭವಿಸಿದ ಮೊಸಳೆಹೊಸಳ್ಳಿ ದುರಂತ, ಕಾವೇರಿ, ಕೃಷ್ಣ ನದಿ ನೀರು ಹಂಚಿಕೆ ವಿಚಾರ, ರಸ್ತೆ ಕಾಮಗಾರಿಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತನಾಡಿದರು.</p>.<p>ಕಾವೇರಿ ವಿಚಾರದಲ್ಲಿ ಪ್ರಧಾನಮಂತ್ರಿಗೆ ಮನವರಿಕೆ ಮಾಡುತ್ತೇನೆ. ಕರ್ನಾಟಕಕ್ಕೆ ಏನು ನಷ್ಟವಾಗಿದೆ ಹೇಳುತ್ತೇನೆ. ಆರು ದಶಕದ ರಾಜಕೀಯ ಅನುಭವದಲ್ಲಿ ಈ ವಿಚಾರದಲ್ಲಿ ಹಲವು ಮಾಹಿತಿ ನನಗೆ ಇದೆ. ಗೋದಾವರಿ ನೀರನ್ನು ಅಂಧ್ರಪ್ರದೇಶ-ತೆಲಂಗಾಣಕ್ಕೆ ಬಿಡುವ ನಿರ್ಣಯದ ವಿರುದ್ಧ ತಮ್ಮ ಧ್ವನಿ ಎತ್ತಿದ್ದೇನೆ. ಸರ್ಕಾರ ಸಲಹೆ ಕೊಟ್ಟರೆ ನಾನು ಸ್ವೀಕರಿಸುತ್ತೇನೆ ಎಂದರು.</p>.<p>ಪ್ರಧಾನಿ ನರೇಂದ್ರ ಮೋದಿ ವಿಶ್ವದ ಮಹಾನಾಯಕರು. ಮಣಿಪುರದಲ್ಲಿ ಶಾಂತಿ ನೆಲೆಸಲು ಅವರು ಪ್ರಯತ್ನಿಸಿದ್ದಾರೆ. ವಿರೋಧ ಪಕ್ಷ ಟೀಕೆ ಮಾಡಿದ್ದರೂ, ನಾನು ಅವರನ್ನು ಗೌರವಿಸುತ್ತೇನೆ ಎಂದರು.</p>.<p>ಚೆನ್ನೈ-ಬೆಂಗಳೂರು ರಸ್ತೆಯ ಬಾಕಿ ಕಾಮಗಾರಿ ತ್ವರಿತ ಪೂರ್ಣಗೊಳಿಸಬೇಕಿದೆ. ಶಿರಾಡಿಘಾಟ್ನಲ್ಲಿ 10 ಕಿ.ಮೀ. ಸುರಂಗ ನಿರ್ಮಿಸಬೇಕೆಂದು ಒತ್ತಾಯಿಸಿದ್ದು, ಮೋದಿ, ನಿತಿನ್ ಗಡ್ಕರಿ ಅವರೊಂದಿಗೆ ಮಾತನಾಡಿದ್ದೇನೆ. ಹೈದರಾಬಾದ್-ಬೆಂಗಳೂರು ರಸ್ತೆ ಕಾಮಗಾರಿ ಕೂಡ ತ್ವರಿತಗೊಳಿಸುವಂತೆ ಬೇಡಿಕೆ ಇಟ್ಟಿರುವುದಾಗಿ ಹೇಳಿದರು.</p>.<p>ರಾಜ್ಯಸಭಾ ಸದಸ್ಯರ ಅವಧಿ ಇನ್ನೂ 11 ತಿಂಗಳು ಇದೆ. ಅವಧಿ ಮುಗಿದ ಮೇಲೂ ಶಕ್ತಿಮೀರಿ ಹೋರಾಡುತ್ತೇನೆ. ನನ್ನ ಜೀವನದಲ್ಲಿ ಅನೇಕ ನೋವು-ಕಷ್ಟಗಳಿದ್ದರೂ, ಅಭಿವೃದ್ಧಿ ವಿಚಾರದಲ್ಲಿ ಹೋರಾಟ ಬಿಡುವುದಿಲ್ಲ ಎಂದು ತಿಳಿಸಿದರು.</p>.<p>ಮೊಸಳೆಹೊಸಹಳ್ಳಿ ಗಣೇಶ ಮೆರವಣಿಗೆಯ ವೇಳೆ ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಜೆಡಿಎಸ್ ಪಕ್ಷದ ವತಿಯಿಂದ ಮೃತರಿಗೆ ತಲಾ ₹1 ಲಕ್ಷ, ತೀವ್ರ ಗಾಯಾಳುಗಳಿಗೆ ₹ 25ಸಾವಿರದಿಂದ ₹15ಸಾವಿರದವರೆಗೆ ಪರಿಹಾರ ನೀಡಲಾಗುವುದು. ಪಕ್ಷದಲ್ಲಿ ಹಣ ಇರಲಿ, ಇಲ್ಲದೇ ಇರಲಿ ಜವಾಬ್ದಾರಿ ಹೊತ್ತುಕೊಂಡಿದ್ದೇನೆ ಎಂದರು.</p>.<p>ಜಿಲ್ಲಾಧಿಕಾರಿಯಿಂದ ಮೃತರ ಮಾಹಿತಿ ಪಡೆದು ಅವರ ಕುಟುಂಬದವರಿಗೆ ಪರಿಹಾರ ಹಣವನ್ನು ಹಸ್ತಾಂತರಿಸಲಾಗುವುದು. ಇಲ್ಲವಾದರೆ ಜಿಲ್ಲಾಧಿಕಾರಿ ಮೂಲಕವೇ ಅರ್ಹರಿಗೆ ಪರಿಹಾರ ಹಣ ತಲುಪಿಸಲಾಗುವುದು ಎಂದರು.</p>.<p>ಶಾಸಕ ಸ್ವರೂಪ್ ಪ್ರಕಾಶ್, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್. ಲಿಂಗೇಶ್, ತಾಲ್ಲೂಕು ಘಟಕದ ಅಧ್ಯಕ್ಷ ದ್ಯಾವೇಗೌಡ, ಎಚ್ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಸತೀಶ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>