‘ನೀರಾವರಿ, ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆಗಳಲ್ಲಿ ಹೆಚ್ಚುಭ್ರಷ್ಟಾಚಾರ ನಡೆಯುತ್ತಿದ್ದು, ಸಮಗ್ರ ತನಿಖೆ ನಡೆಸಬೇಕು. ಜಿಲ್ಲೆಯ ನೀರಾವರಿ ಹಾಗೂಲೋಕೋಪಯೋಗಿ ಇಲಾಖೆಯಲ್ಲಿ ಎಂಜಿನಿಯರ್ ಗಳೇ ಮತ್ತೊಬ್ಬರ ಹೆಸರಲ್ಲಿ ಗುತ್ತಿಗೆಪಡೆಯುತ್ತಿದ್ದಾರೆ. ಎರಡು ವರ್ಷಗಳಿಂದ ಸುಮಾರು ₹ 250 ಕೋಟಿ ಬಿಲ್ ಬಿಡುಗಡೆ ಮಾಡಿಲ್ಲ.ಇದರಿಂದ ಕೆಲಸ ಮಾಡಿರುವ ಗುತ್ತಿಗೆದಾರರು ಮನೆ, ಆಭರಣ ಮಾರಾಟ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಗೆ ಬಂದಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.