<p><strong>ಹಾಸನ: </strong>ಕಾಂಗ್ರೆಸ್ ಇರುವವರೆಗೂ ದೇಶ ಉದ್ಧಾರವಾಗುವುದಿಲ್ಲ. ದೇಶಕ್ಕೆ ಕಂಟಕವಾಗಿದೆ ಎಂದು<br />ಶಾಸಕ ಎಚ್.ಡಿ.ರೇವಣ್ಣ ವಾಗ್ದಾಳಿ ನಡೆಸಿದರು.</p>.<p>ಹಿಂದಿನ ವಾತಾವರಣ ಇಂದು ಕಾಂಗ್ರೆಸ್ ನಲ್ಲಿ ಇಲ್ಲ. ದೇವೇಗೌಡರನ್ನು ಪ್ರಧಾನಿಹುದ್ದೆಯಿಂದ ಕೆಳಗಿಳಿಸಿದವರು ಯಾರು? ಮಾಜಿ ಪ್ರಧಾನಿ ಚಂದ್ರಶೇಖರ್ ಅವರಿಗೆ ಟೋಪಿಹಾಕಿದವರು ಯಾರು? ಲೋಕಸಭೆ ಚುನಾವಣೆಯಲ್ಲಿ ದೇವೇಗೌಡರನ್ನು ತುಮಕೂರಿನಲ್ಲಿಸೋಲಿಸಿದವರು ಯಾರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.</p>.<p>‘ಜೆಡಿಎಸ್ ಕುಟುಂಬ ರಾಜಕಾರಣ’ ಎಂಬ ಸಂಸದ ಡಿ.ಕೆ. ಸುರೇಶ್ ಟೀಕೆಗೆ ಪ್ರತಿಕ್ರಿಯಿಸಿದ<br />ರೇವಣ್ಣ, ಕಾಂಗ್ರೆಸ್ ಹಿಂದಿನಿಂದಲೂ ಕುಟುಂಬ ರಾಜಕಾರಣ ಮಾಡಿಕೊಂಡೇ ಬಂದಿದೆ. ಯಾವ<br />ಪಕ್ಷದಲ್ಲಿ ಕುಟುಂಬ ರಾಜಕಾರಣ ಇಲ್ಲ ತಿಳಿಸಲಿ. ಹಾಗೇ ನೋಡಿದರೆ ಜೆಡಿಎಸ್ ನಲ್ಲಿಯೇ ಕಡಿಮೆ.<br />ದೇಶದಲ್ಲಿ ಕುಟುಂಬ ರಾಜಕಾರಣ ಬೇಡ ಎಂಬುದಾದರೆ ಎರಡೂ ರಾಷ್ಟ್ರೀಯ ಪಕ್ಷಗಳು ಸೇರಿ<br />ಕಾನೂನು ತರಲಿ ಎಂದು ಹೇಳಿದರು.</p>.<p>ಎಚ್.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಏನೇನು ಕೆಲಸ ಮಾಡಿದ್ದಾರೆ. ಜಿಲ್ಲೆಗೆ ದೇವೇಗೌಡರ ಕೊಡುಗೆ ಏನು? ನನ್ನ ಅವಧಿಯಲ್ಲಿ ಏನೇನು ಕೆಲಸಗಳಾಗಿವೆ ಎಂಬುದು ಜನರಿಗೆ ಗೊತ್ತಿದೆ.ರಾಷ್ಟ್ರೀಯ ಪಕ್ಷಗಳ ಕೊಡುಗೆ ಏನು ಎಂಬುದು ಅವರೇ ಹೇಳಬೇಕು ಎಂದರು.</p>.<p>‘ನೀರಾವರಿ, ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆಗಳಲ್ಲಿ ಹೆಚ್ಚುಭ್ರಷ್ಟಾಚಾರ ನಡೆಯುತ್ತಿದ್ದು, ಸಮಗ್ರ ತನಿಖೆ ನಡೆಸಬೇಕು. ಜಿಲ್ಲೆಯ ನೀರಾವರಿ ಹಾಗೂಲೋಕೋಪಯೋಗಿ ಇಲಾಖೆಯಲ್ಲಿ ಎಂಜಿನಿಯರ್ ಗಳೇ ಮತ್ತೊಬ್ಬರ ಹೆಸರಲ್ಲಿ ಗುತ್ತಿಗೆಪಡೆಯುತ್ತಿದ್ದಾರೆ. ಎರಡು ವರ್ಷಗಳಿಂದ ಸುಮಾರು ₹ 250 ಕೋಟಿ ಬಿಲ್ ಬಿಡುಗಡೆ ಮಾಡಿಲ್ಲ.ಇದರಿಂದ ಕೆಲಸ ಮಾಡಿರುವ ಗುತ್ತಿಗೆದಾರರು ಮನೆ, ಆಭರಣ ಮಾರಾಟ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಗೆ ಬಂದಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಜಿಲ್ಲೆಯಲ್ಲೂ ₹ 25 ಕೋಟಿ ವೆಚ್ಚದ ಕಾಮಗಾರಿಗೆ ಶೇ 20 ರಷ್ಟು ಕಮಿಷನ್ಪಡೆಯಲಾಗುತ್ತಿದೆ. ಎಲ್ಒಸಿ ನೀಡುವಾಗ ಹಿರಿತನವನ್ನು ಪರಿಗಣಿಸುತ್ತಿಲ್ಲ. ಕಾವೇರಿ ನೀರಾವರಿನಿಗಮದಲ್ಲಿ ಎಂಜಿನಿಯರ್ ಗಳೇ ತಮಗೆ ಬೇಕಾದ ಗುತ್ತಿಗೆದಾರರಿಗೆ ಕೆಲಸ ನೀಡುತ್ತಿದ್ದಾರೆ ಎಂದುಆರೋಪಿಸಿದರು.</p>.<p>ಸರ್ಕಾರ ಬೆಳೆ ಹಾನಿಗೆ ಎಕರೆಗೆ ಕನಿಷ್ಟ ಹತ್ತು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಈವರೆಗೂ ಜಿಲ್ಲೆಗೆ ಬಿಡಿಗಾಸು ನೀಡಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಕಾಂಗ್ರೆಸ್ ಇರುವವರೆಗೂ ದೇಶ ಉದ್ಧಾರವಾಗುವುದಿಲ್ಲ. ದೇಶಕ್ಕೆ ಕಂಟಕವಾಗಿದೆ ಎಂದು<br />ಶಾಸಕ ಎಚ್.ಡಿ.ರೇವಣ್ಣ ವಾಗ್ದಾಳಿ ನಡೆಸಿದರು.</p>.<p>ಹಿಂದಿನ ವಾತಾವರಣ ಇಂದು ಕಾಂಗ್ರೆಸ್ ನಲ್ಲಿ ಇಲ್ಲ. ದೇವೇಗೌಡರನ್ನು ಪ್ರಧಾನಿಹುದ್ದೆಯಿಂದ ಕೆಳಗಿಳಿಸಿದವರು ಯಾರು? ಮಾಜಿ ಪ್ರಧಾನಿ ಚಂದ್ರಶೇಖರ್ ಅವರಿಗೆ ಟೋಪಿಹಾಕಿದವರು ಯಾರು? ಲೋಕಸಭೆ ಚುನಾವಣೆಯಲ್ಲಿ ದೇವೇಗೌಡರನ್ನು ತುಮಕೂರಿನಲ್ಲಿಸೋಲಿಸಿದವರು ಯಾರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.</p>.<p>‘ಜೆಡಿಎಸ್ ಕುಟುಂಬ ರಾಜಕಾರಣ’ ಎಂಬ ಸಂಸದ ಡಿ.ಕೆ. ಸುರೇಶ್ ಟೀಕೆಗೆ ಪ್ರತಿಕ್ರಿಯಿಸಿದ<br />ರೇವಣ್ಣ, ಕಾಂಗ್ರೆಸ್ ಹಿಂದಿನಿಂದಲೂ ಕುಟುಂಬ ರಾಜಕಾರಣ ಮಾಡಿಕೊಂಡೇ ಬಂದಿದೆ. ಯಾವ<br />ಪಕ್ಷದಲ್ಲಿ ಕುಟುಂಬ ರಾಜಕಾರಣ ಇಲ್ಲ ತಿಳಿಸಲಿ. ಹಾಗೇ ನೋಡಿದರೆ ಜೆಡಿಎಸ್ ನಲ್ಲಿಯೇ ಕಡಿಮೆ.<br />ದೇಶದಲ್ಲಿ ಕುಟುಂಬ ರಾಜಕಾರಣ ಬೇಡ ಎಂಬುದಾದರೆ ಎರಡೂ ರಾಷ್ಟ್ರೀಯ ಪಕ್ಷಗಳು ಸೇರಿ<br />ಕಾನೂನು ತರಲಿ ಎಂದು ಹೇಳಿದರು.</p>.<p>ಎಚ್.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಏನೇನು ಕೆಲಸ ಮಾಡಿದ್ದಾರೆ. ಜಿಲ್ಲೆಗೆ ದೇವೇಗೌಡರ ಕೊಡುಗೆ ಏನು? ನನ್ನ ಅವಧಿಯಲ್ಲಿ ಏನೇನು ಕೆಲಸಗಳಾಗಿವೆ ಎಂಬುದು ಜನರಿಗೆ ಗೊತ್ತಿದೆ.ರಾಷ್ಟ್ರೀಯ ಪಕ್ಷಗಳ ಕೊಡುಗೆ ಏನು ಎಂಬುದು ಅವರೇ ಹೇಳಬೇಕು ಎಂದರು.</p>.<p>‘ನೀರಾವರಿ, ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆಗಳಲ್ಲಿ ಹೆಚ್ಚುಭ್ರಷ್ಟಾಚಾರ ನಡೆಯುತ್ತಿದ್ದು, ಸಮಗ್ರ ತನಿಖೆ ನಡೆಸಬೇಕು. ಜಿಲ್ಲೆಯ ನೀರಾವರಿ ಹಾಗೂಲೋಕೋಪಯೋಗಿ ಇಲಾಖೆಯಲ್ಲಿ ಎಂಜಿನಿಯರ್ ಗಳೇ ಮತ್ತೊಬ್ಬರ ಹೆಸರಲ್ಲಿ ಗುತ್ತಿಗೆಪಡೆಯುತ್ತಿದ್ದಾರೆ. ಎರಡು ವರ್ಷಗಳಿಂದ ಸುಮಾರು ₹ 250 ಕೋಟಿ ಬಿಲ್ ಬಿಡುಗಡೆ ಮಾಡಿಲ್ಲ.ಇದರಿಂದ ಕೆಲಸ ಮಾಡಿರುವ ಗುತ್ತಿಗೆದಾರರು ಮನೆ, ಆಭರಣ ಮಾರಾಟ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಗೆ ಬಂದಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಜಿಲ್ಲೆಯಲ್ಲೂ ₹ 25 ಕೋಟಿ ವೆಚ್ಚದ ಕಾಮಗಾರಿಗೆ ಶೇ 20 ರಷ್ಟು ಕಮಿಷನ್ಪಡೆಯಲಾಗುತ್ತಿದೆ. ಎಲ್ಒಸಿ ನೀಡುವಾಗ ಹಿರಿತನವನ್ನು ಪರಿಗಣಿಸುತ್ತಿಲ್ಲ. ಕಾವೇರಿ ನೀರಾವರಿನಿಗಮದಲ್ಲಿ ಎಂಜಿನಿಯರ್ ಗಳೇ ತಮಗೆ ಬೇಕಾದ ಗುತ್ತಿಗೆದಾರರಿಗೆ ಕೆಲಸ ನೀಡುತ್ತಿದ್ದಾರೆ ಎಂದುಆರೋಪಿಸಿದರು.</p>.<p>ಸರ್ಕಾರ ಬೆಳೆ ಹಾನಿಗೆ ಎಕರೆಗೆ ಕನಿಷ್ಟ ಹತ್ತು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಈವರೆಗೂ ಜಿಲ್ಲೆಗೆ ಬಿಡಿಗಾಸು ನೀಡಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>