ಹಾಸನ: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಝೆಡ್.ಜಮೀರ್ ಅಹಮ್ಮದ್ ಖಾನ್ ಅವರ ಮನೆ ಮತ್ತು ಕಚೇರಿಗಳ ಮೇಲೆ ಜಾರಿನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿರುವ ಬಗ್ಗೆ ಪ್ರತಿಕ್ರಿಯಿಸುವಷ್ಟು ಶಕ್ತಿ ಇಲ್ಲ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದರು.
ಚನ್ನರಾಯಪಟ್ಟಣ ತಾಲ್ಲೂಕಿನ ಆಲಗೊಂಡನಹಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರ ಜತೆಮಾತನಾಡಿದ ಅವರು, ‘ನಾವು ಪಡುವಲಹಿಪ್ಪೆ ಹತ್ತಿರ ಹೊಲ ಉತ್ಕಂಡು ಇರೋರು.ಹಾಗಾಗಿ ಐ.ಟಿ, ಇ.ಡಿ ಗೊತ್ತಿಲ್ಲ. ದೊಡ್ಡವರು, ಸಾಹುಕಾರರಿಗೆ ಅದು ಗೊತ್ತಿರುತ್ತೆ. ಆದ್ದರಿಂದ ಅದರ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ’ ಎಂದರು.