<p><strong>ಹಾಸನ</strong>: ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವಿನ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್ ಎಚ್. ನೇತೃತ್ವದ ತಂಡ ಪರಿಶೀಲನೆ ಆರಂಭಿಸಿದೆ.</p>.<p>ಮಂಗಳವಾರದಿಂದ ಮೃತರ ಮನೆಗಳಿಗೆ ಭೇಟಿ ನೀಡುತ್ತಿರುವ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಹೃದಯಾಘಾತದಿಂದ ನಿಧನರಾದ ತಾಲ್ಲೂಕಿನ ಚಿಕ್ಕಕೊಂಡಗುಳ ಗ್ರಾಮದ ಸತೀಶ್ ಅವರ ಮನೆಗೆ ಭೇಟಿ ನೀಡಿದ ತಂಡ, ಸತೀಶ್ ಅವರ ಪತ್ನಿ, ತಾಯಿಯಿಂದ ಮಾಹಿತಿ ಪಡೆಯಿತು.</p>.<p>ಆರ್ಸಿಎಚ್ ಅಧಿಕಾರಿ ಡಾ.ಚೇತನ್, ಔಷಧ ವಿಭಾಗದ ಡಾ.ಬಿಂದು ಅವರನ್ನು ಒಳಗೊಂಡ ತಂಡ, ಸತೀಶ್ ಅವರ ಆರೋಗ್ಯ ಸ್ಥಿತಿ ಹೇಗಿತ್ತು, ಆಹಾರ ಪದ್ಧತಿ ಹೇಗಿತ್ತು ಎಂಬಿತ್ಯಾದಿ ವಿವರಗಳನ್ನು ಕಲೆ ಹಾಕಿದೆ.</p>.<p>‘ಇದುವರೆಗೆ ವರದಿಯಾಗಿರುವ ಹೃದಯಾಘಾತದ ಸಾವುಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಎಲ್ಲರ ಮನೆಗೆ ಭೇಟಿ ನೀಡಿ, ಮೃತರಿಗೆ ಸಂಬಂಧಿಸಿದ ವಿವರಗಳನ್ನು ಸಂಗ್ರಹಿಸಲಾಗುವುದು. ನಂತರ ಸಾವಿಗೆ ನಿಖರ ಕಾರಣ ಪತ್ತೆ ಮಾಡಿ, ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ಡಿಎಚ್ಒ ಡಾ.ಅನಿಲ್ ತಿಳಿಸಿದ್ದಾರೆ.</p>.<p><strong>ರೈತ ಸಾವು</strong></p><p>ಹಾಸನ ತಾಲ್ಲೂಕಿನ ಮುಟ್ಟನಹಳ್ಳಿ ಗ್ರಾಮದ ರೈತ ಸಣ್ಣಪ್ಪಶೆಟ್ಟಿ (52) ಬುಧವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.</p>.<p>ಮನೆಯ ಮುಂದೆ ಕುಳಿತಿದ್ದ ಸಣ್ಣಪ್ಪಶೆಟ್ಟಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ 108 ಆಂಬ್ಯುಲೆನ್ಸ್ಗೆ ಕರೆ ಮಾಡಿದ್ದು, ಆಂಬುಲೆನ್ಸ್ ಮನೆಯ ಬಳಿ ಬರುತ್ತಿದ್ದಂತೆ ಸಣ್ಣಪ್ಪ ಶೆಟ್ಟಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವಿನ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್ ಎಚ್. ನೇತೃತ್ವದ ತಂಡ ಪರಿಶೀಲನೆ ಆರಂಭಿಸಿದೆ.</p>.<p>ಮಂಗಳವಾರದಿಂದ ಮೃತರ ಮನೆಗಳಿಗೆ ಭೇಟಿ ನೀಡುತ್ತಿರುವ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಹೃದಯಾಘಾತದಿಂದ ನಿಧನರಾದ ತಾಲ್ಲೂಕಿನ ಚಿಕ್ಕಕೊಂಡಗುಳ ಗ್ರಾಮದ ಸತೀಶ್ ಅವರ ಮನೆಗೆ ಭೇಟಿ ನೀಡಿದ ತಂಡ, ಸತೀಶ್ ಅವರ ಪತ್ನಿ, ತಾಯಿಯಿಂದ ಮಾಹಿತಿ ಪಡೆಯಿತು.</p>.<p>ಆರ್ಸಿಎಚ್ ಅಧಿಕಾರಿ ಡಾ.ಚೇತನ್, ಔಷಧ ವಿಭಾಗದ ಡಾ.ಬಿಂದು ಅವರನ್ನು ಒಳಗೊಂಡ ತಂಡ, ಸತೀಶ್ ಅವರ ಆರೋಗ್ಯ ಸ್ಥಿತಿ ಹೇಗಿತ್ತು, ಆಹಾರ ಪದ್ಧತಿ ಹೇಗಿತ್ತು ಎಂಬಿತ್ಯಾದಿ ವಿವರಗಳನ್ನು ಕಲೆ ಹಾಕಿದೆ.</p>.<p>‘ಇದುವರೆಗೆ ವರದಿಯಾಗಿರುವ ಹೃದಯಾಘಾತದ ಸಾವುಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಎಲ್ಲರ ಮನೆಗೆ ಭೇಟಿ ನೀಡಿ, ಮೃತರಿಗೆ ಸಂಬಂಧಿಸಿದ ವಿವರಗಳನ್ನು ಸಂಗ್ರಹಿಸಲಾಗುವುದು. ನಂತರ ಸಾವಿಗೆ ನಿಖರ ಕಾರಣ ಪತ್ತೆ ಮಾಡಿ, ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ಡಿಎಚ್ಒ ಡಾ.ಅನಿಲ್ ತಿಳಿಸಿದ್ದಾರೆ.</p>.<p><strong>ರೈತ ಸಾವು</strong></p><p>ಹಾಸನ ತಾಲ್ಲೂಕಿನ ಮುಟ್ಟನಹಳ್ಳಿ ಗ್ರಾಮದ ರೈತ ಸಣ್ಣಪ್ಪಶೆಟ್ಟಿ (52) ಬುಧವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.</p>.<p>ಮನೆಯ ಮುಂದೆ ಕುಳಿತಿದ್ದ ಸಣ್ಣಪ್ಪಶೆಟ್ಟಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ 108 ಆಂಬ್ಯುಲೆನ್ಸ್ಗೆ ಕರೆ ಮಾಡಿದ್ದು, ಆಂಬುಲೆನ್ಸ್ ಮನೆಯ ಬಳಿ ಬರುತ್ತಿದ್ದಂತೆ ಸಣ್ಣಪ್ಪ ಶೆಟ್ಟಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>