ಜಿಲ್ಲಾ ಕೇಂದ್ರ ಹಾಸನ ಸೇರಿದಂತೆ ತಾಲ್ಲೂಕಿನಾದ್ಯಂತ, ಬೇಲೂರು, ಸಕಲೇಶಪುರ, ಅರಕಲಗೂಡು, ಕೊಣನೂರು, ಹಿರೀಸಾವೆ ಭಾಗಗಳಲ್ಲಿ ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿದಿದೆ.ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದೆ. ಚರಂಡಿಗಳುಕಟ್ಟಿಕೊಂಡಿದ್ದರಿಂದ ರಸ್ತೆಗಳಲ್ಲೇ ನೀರು ಹರಿದು ಜನರ ಓಡಾಟಕ್ಕೂತೊಂದರೆಯಾಗಿದೆ. ಕೃಷಿ ಜಮೀನು, ಗದ್ದೆಗಳಲ್ಲೂ ನೀರು ನಿಂತಿದೆ.