ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರಾಕಾರ ಮಳೆ: ಮನೆ ಗೋಡೆ ಕುಸಿತ

ಅರಸೀಕೆರೆಯಲ್ಲಿ ನಾಲ್ಕು ತಾಸು ಮಳೆ, ಮನೆಗಳಿಗೆ ನುಗ್ಗಿದ ನೀರು
Last Updated 12 ಅಕ್ಟೋಬರ್ 2021, 14:50 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯ ವಿವಿಧೆಡೆ ಮಂಗಳವಾರ ಧಾರಾಕಾರ ಮಳೆಯಾಗಿದೆ. ಅರಸೀಕೆರೆ, ಹಿರೀಸಾವೆ, ನುಗ್ಗೇಹಳ್ಳಿಯಲ್ಲಿ ಜೋರು ಮಳೆ ಸುರಿದರೆ, ಹೆತ್ತೂರು, ಶ್ರವಣಬೆಳಗೊಳ, ಚನ್ನರಾಯಪಟ್ಟಣದಲ್ಲಿ ಜಿಟಿಜಿಟಿಯಾಗಿದೆ.

ಅರಕಲಗೂಡು ತಾಲ್ಲೂಕಿನ ಕೊಣನೂರು ಹೋಬಳಿಯ ಕಾಳೇನಹಳ್ಳಿಯ ತೋಟಗಳಿಗೆ ನೀರು ನುಗ್ಗಿ ವೀಳ್ಯೆದೆಲೆ ಬಳ್ಳಿ, ಬಾಳೆಯ ಗಿಡಗಳಿಗೆ ಹಾನಿಯಾಗಿದೆ.

ಅರಸೀಕೆರೆ ವರದಿ:ನಗರ ಮತ್ತು ತಾಲ್ಲೂಕಿನ ವಿವಿಧೆಡೆ ಮಧ್ಯಾಹ್ನ 2 ಗಂಟೆಗೆ ಶುರುವಾದ ಮಳೆನಾಲ್ಕು ತಾಸು ಪರಿಣಾಮ ವಿವಿಧೆಡೆ ಮನೆಗಳ ಗೋಡೆ ಕುಸಿದಿದಿ. ಮುರುಂಡಿ ಬಿ ತಾಂಡ್ಯದ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಹತ್ತಕ್ಕೂ ಹೆಚ್ಚು ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ರಸ್ತೆಗಳಲ್ಲಿ ನೀರು ನಿಂತು ಕೆರೆಯಂತಾಗಿದೆ. ಸಮರ್ಪಕ ಒಳಚರಂಡಿ ವ್ಯವಸ್ಥೆ ಇಲ್ಲದ ಪರಿಣಾಮಗಲೀಜು ನೀರು ರಸ್ತೆ ಮೇಲೆ ಹರಿದು ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು.

ಮುರುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ. ತಾಂಡ್ಯ ಗ್ರಾಮದಲ್ಲಿ ಮಳೆಗೆ ಮನೆಗಳ ಗೋಡೆಗಳು ಕುಸಿದು ಬಿದ್ದಿವೆ. ಸಂಜೆಯಾದರೂ ಸುರಿಯುತ್ತಿರುವ ಮಳೆಯಿಂದಾಗಿ ವಿಜಯದಶಮಿ ಹಬ್ಬದ ವ್ಯಾಪಾರ ವಹಿವಾಟಿಗೆ ತೊಂದರೆ ಉಂಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT