ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾನ ಜಿಲ್ಲೆಯಲ್ಲಿ ವರುಣನ ಆರ್ಭಟ

Last Updated 20 ಸೆಪ್ಟೆಂಬರ್ 2020, 14:47 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯ ವಿವಿಧೆಡೆ ಭಾನುವಾರ ಧಾರಾಕಾರ ಮಳೆ ಸುರಿದಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಸಕಲೇಶಪುರ, ಹೆತ್ತೂರು, ಬೇಲೂರು, ಅರಕಲಗೂಡು ಭಾಗದಲ್ಲಿ ಬಿರುಸಿನ ಗಾಳಿ, ಮಳೆಯಾದರೆ,
ಹೊಳೆನರಸೀಪುರ, ಚನ್ನರಾಯಪಟ್ಟಣ, ನುಗ್ಗೇಹಳ್ಳಿಯಲ್ಲಿ ಜಿಟಿಜಿಟಿ ಮಳೆಯಾಗಿದೆ.

ಹಾಸನ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಜೋರು ಮಳೆಯಿಂದಾಗಿ ಚರಂಡಿ ಮತ್ತು ತಗ್ಗು ಪ್ರದೇಶಗಳಲ್ಲಿ
ನೀರು ತುಂಬಿದೆ. ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಆಗಿದೆ.

ಜಲಾನಯನ ಪ್ರದೇಶಗಳಾದ ಸಕಲೇಶಪುರ ಮತ್ತು ಮೂಡಿಗೆರೆಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಹೇಮಾವತಿ ಜಲಾಶಯಕ್ಕೆ 3888 ಕ್ಯುಸೆಕ್‌ ನೀರು ಹರಿದು ಬರುತ್ತಿದೆ.

ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸೆ.21ರಂದು ರೆಡ್‌ ಅಲರ್ಟ್‌ ಘೋಷಿಸಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT