<p>ಹೆತ್ತೂರು: ಮಲೆನಾಡು ಹೆತ್ತೂರು, ಯಸಳೂರು ಭಾಗದಲ್ಲಿ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮುಂಗಾರು ಮಳೆ, ಎರಡು ದಿನದಿಂದ ಜೋರಾಗಿದೆ. ನಸುಕಿನಿಂದಲೂ ಧಾರಾಕಾರವಾಗಿ ಸುರಿದ ಮಳೆ, ಮಧ್ಯಾಹ್ನ ಕೆಲಕಾಲ ಬಿಡುವು ನೀಡಿತ್ತು. ಮಧ್ಯಾಹ್ನದ ಬಳಿಕ ಪ್ರಾರಂಭವಾದ ಮಳೆ ಬಿಡುವಿಲ್ಲದೆ ಸುರಿಯುತ್ತಿದೆ.</p>.<p>ನಿರಂತರ ಮಳೆಯಿಂದ ಹೇಮಾವತಿ ಉಪನದಿಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಹೇಮಾವತಿ ಉಪ ನದಿಯು ಐಗೂರು ಬಳಿ ಗದ್ದೆ ಬಯಲಿಗೆ ವ್ಯಾಪಿಸಿದ್ದು, ಮಳೆ ಹೆಚ್ಚಾದರೆ ಯಡಕೇರಿ- ಹೆತ್ತೂರು ರಸ್ತೆ ಸಂಪರ್ಕಿಸುವ ಸೇತುವೆ ಮೇಲೆ ನೀರು ಹರಿಯುವ ಆತಂಕ ನಿರ್ಮಾಣವಾಗಿದೆ.</p>.<p>ಮಳೆಯೊಂದಿಗೆ ಮಂಜು ಕವಿದ ವಾತಾವರಣ ನಿರ್ಮಾಣವಾಗಿದ್ದು, ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಡಿದರು. ಬಾಣಗೇರಿ ಗ್ರಾಮದ ಬಳಿ ರಸ್ತೆಯಲ್ಲಿ ಮಳೆ ನೀರು ಸಂಗ್ರಹವಾಗಿ ಸಂಚಾರಕ್ಕೆ ಅಡ್ಡಿಯಾಗಿತ್ತು.</p>.<p>ಪಶ್ಚಿಮ ಘಟ್ಟದ ಅಂಚಿನ ಕೆಲವು ಕಡೆಗಳಲ್ಲಿ ಭೀಕರ ಮಳೆ ಭೀತಿ ಹುಟ್ಟಿಸಿದೆ. ಹಳ್ಳ-ಕೊಳ್ಳಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಬಹುತೇಕ ಕಡೆಗಳಲ್ಲಿ ಜನ-ಜಾನುವಾರು ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾತ್ರಿ–ಹಗಲೆನ್ನದೇ ನಿರಂತರವಾಗಿ ಸುರಿಯುತ್ತಿರುವ ಮಳೆ– ಗಾಳಿಗೆ ಹಲವೆಡೆ ಮರ, ವಿದ್ಯುತ್ ಕಂಬಗಳು ಧರೆಗುರುಳಿದ್ದು, ಹಲವು ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾಗಿದೆ.</p>.<p>ಚಳಿ, ಗಾಳಿ ನಡುವೆ ಮೋಡ ಕವಿದ ವಾತಾವರಣ ಮುಂದುವರಿದಿದೆ. 24 ಗಂಟೆಯಲ್ಲಿ ಹೋಬಳಿಯ ಅತ್ತಿಹಳ್ಳಿ ಗ್ರಾಮದಲ್ಲಿ 17.25 ಸೆಂ.ಮೀ. ಮಳೆ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೆತ್ತೂರು: ಮಲೆನಾಡು ಹೆತ್ತೂರು, ಯಸಳೂರು ಭಾಗದಲ್ಲಿ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮುಂಗಾರು ಮಳೆ, ಎರಡು ದಿನದಿಂದ ಜೋರಾಗಿದೆ. ನಸುಕಿನಿಂದಲೂ ಧಾರಾಕಾರವಾಗಿ ಸುರಿದ ಮಳೆ, ಮಧ್ಯಾಹ್ನ ಕೆಲಕಾಲ ಬಿಡುವು ನೀಡಿತ್ತು. ಮಧ್ಯಾಹ್ನದ ಬಳಿಕ ಪ್ರಾರಂಭವಾದ ಮಳೆ ಬಿಡುವಿಲ್ಲದೆ ಸುರಿಯುತ್ತಿದೆ.</p>.<p>ನಿರಂತರ ಮಳೆಯಿಂದ ಹೇಮಾವತಿ ಉಪನದಿಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಹೇಮಾವತಿ ಉಪ ನದಿಯು ಐಗೂರು ಬಳಿ ಗದ್ದೆ ಬಯಲಿಗೆ ವ್ಯಾಪಿಸಿದ್ದು, ಮಳೆ ಹೆಚ್ಚಾದರೆ ಯಡಕೇರಿ- ಹೆತ್ತೂರು ರಸ್ತೆ ಸಂಪರ್ಕಿಸುವ ಸೇತುವೆ ಮೇಲೆ ನೀರು ಹರಿಯುವ ಆತಂಕ ನಿರ್ಮಾಣವಾಗಿದೆ.</p>.<p>ಮಳೆಯೊಂದಿಗೆ ಮಂಜು ಕವಿದ ವಾತಾವರಣ ನಿರ್ಮಾಣವಾಗಿದ್ದು, ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಡಿದರು. ಬಾಣಗೇರಿ ಗ್ರಾಮದ ಬಳಿ ರಸ್ತೆಯಲ್ಲಿ ಮಳೆ ನೀರು ಸಂಗ್ರಹವಾಗಿ ಸಂಚಾರಕ್ಕೆ ಅಡ್ಡಿಯಾಗಿತ್ತು.</p>.<p>ಪಶ್ಚಿಮ ಘಟ್ಟದ ಅಂಚಿನ ಕೆಲವು ಕಡೆಗಳಲ್ಲಿ ಭೀಕರ ಮಳೆ ಭೀತಿ ಹುಟ್ಟಿಸಿದೆ. ಹಳ್ಳ-ಕೊಳ್ಳಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಬಹುತೇಕ ಕಡೆಗಳಲ್ಲಿ ಜನ-ಜಾನುವಾರು ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾತ್ರಿ–ಹಗಲೆನ್ನದೇ ನಿರಂತರವಾಗಿ ಸುರಿಯುತ್ತಿರುವ ಮಳೆ– ಗಾಳಿಗೆ ಹಲವೆಡೆ ಮರ, ವಿದ್ಯುತ್ ಕಂಬಗಳು ಧರೆಗುರುಳಿದ್ದು, ಹಲವು ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾಗಿದೆ.</p>.<p>ಚಳಿ, ಗಾಳಿ ನಡುವೆ ಮೋಡ ಕವಿದ ವಾತಾವರಣ ಮುಂದುವರಿದಿದೆ. 24 ಗಂಟೆಯಲ್ಲಿ ಹೋಬಳಿಯ ಅತ್ತಿಹಳ್ಳಿ ಗ್ರಾಮದಲ್ಲಿ 17.25 ಸೆಂ.ಮೀ. ಮಳೆ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>