ಮಳೆಯಿಂದಾಗಿ ಹಲವು ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳು ಹಾನಿಯಾಗಿದ್ದರೆ, ಕೆಲವು ಕಡೆ ಮನೆಗಳ
ಗೋಡೆಗಳು ಕುಸಿದು ಬಿದ್ದಿವೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರಸ್ತೆಯಲ್ಲಿ ನೀರುನಿಂತು ವಾಹನಸವಾರರು ಪರದಾಡುವಂತಾಯಿತು. ಸದ್ಯ ಜೋಳ ಕಟಾವು ನಡೆಯುತ್ತಿದ್ದು, ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ರೈತರು ಹೈರಾಣಾಗಿದ್ದಾರೆ.