ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ಶಿಕ್ಷಕಿ ಸ್ವರ್ಣ ಅವರ ಪತಿ ಮಂಜುನಾಥ್ ದೇವಾಲಯದಲ್ಲಿ ಅರ್ಚಕ ವೃತ್ತಿ ಮಾಡುತ್ತಿದ್ದರು. ಅವರು ಮೃತಪಟ್ಟ ಕೆಲವೇ ದಿನದಲ್ಲಿ ಶಿಕ್ಷಕಿ ಸಹ ಸಾವಿಗೀಡಾಗಿದ್ದಾರೆ. ಆದ್ದರಿಂದ ಸರ್ಕಾರ ಅವರ ಕುಟುಂಬಕ್ಕೆ ಎಲ್ಲಾ ರೀತಿಯ ನೆರವು ನೀಡಲಿದ್ದು, ಅವರ ಒಬ್ಬರೇ ಪುತ್ರನಿಗೆ ಸರ್ಕಾರಿ ಉದ್ಯೋಗ ನೀಡುವ ನಿಟ್ಟಿನಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು ಎಂದರು.