ಆರು ಗೇಟ್ ತೆರೆದು ಸುಮಾರು 20 ಸಾವಿರ ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಮೂರು ದಿನಗಳ ಅಂತರದಲ್ಲಿ 13 ಅಡಿ ನೀರು ಸಂಗ್ರಹವಾಗಿದೆ. ಹಾಸನ ಸೇರಿ ನಾಲ್ಕೈದು ಜಿಲ್ಲೆಗಳ ಭತ್ತದ ಬೆಳೆಗಾರರಿಗೆ ಅನುಕೂಲವಾಗುತ್ತದೆ. ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ಜಲಾಶಯಕ್ಕೆ ಹೆಚ್ಚು ನೀರು ಹರಿದು ಬರುತ್ತಿದೆ.