<p><strong>ಹಾಸನ:</strong> ಭೂಮಿ ಸ್ವಾಧೀನ ಮಾಡಿಕೊಂಡು 15 ವರ್ಷವಾದರೂ ಇಬ್ಬರು ರೈತರಿಗೆ ಪರಿಹಾರ ನೀಡದೇ ವಿಳಂಬ ಮಾಡಿದ ಹೇಮಾವತಿ ಜಲಾಶಯ ಯೋಜನೆ ವಿಭಾಗದ ಕಚೇರಿಯ ಪೀಠೋಪಕರಣಗಳನ್ನು ವಕೀಲರ ಸಮ್ಮುಖದಲ್ಲಿ ಬುಧವಾರ ಜಪ್ತಿ ಮಾಡಲಾಯಿತು.</p>.<p>ಕಟ್ಟಾಯ ಹೋಬಳಿ ಬ್ಯಾಡರಹಳ್ಳಿಯ ಬಿ.ಟಿ. ಶಿವಶಂಕರ್ ಅವರ 33 ಗುಂಟೆ ಜಮೀನಿಗೆ ನ್ಯಾಯಾಲಯವು ₹ 1.09 ಕೋಟಿ ಪರಿಹಾರ ನಿಗದಿ ಮಾಡಿತ್ತು. 2009ರಲ್ಲಿ ಯಗಚಿ ನಾಲೆ ನಿರ್ಮಾಣಕ್ಕಾಗಿ ಭೂಮಿ ಸ್ವಾಧೀನಪಡಿಸಿಕೊಂಡು, ಪರಿಹಾರ ನೀಡಿರಲಿಲ್ಲ. ಮತ್ತೊಂದು ಪ್ರಕರಣದಲ್ಲಿ, ದೊಡ್ಡಭೀಕನಹಳ್ಳಿಯ ಕಿತ್ತಾನೆ ಗ್ರಾಮದ ತಿಮ್ಮೇಗೌಡರ ಜಮೀನು ಸ್ವಾಧೀನಗೊಂಡ ಬಳಿಕ ನಿಗದಿಯಾಗಿದ್ದ ₹ 20 ಲಕ್ಷ ಪರಿಹಾರವನ್ನೂ ನೀಡಿರಲಿಲ್ಲ.</p>.<p>‘ಎರಡೂ ಕಡೆ ರೈತರ ಪರ ಅಂತಿಮ ತೀರ್ಪು ಬಂದಿದೆ. ಆದರೂ ಪರಿಹಾರವನ್ನು ನೀಡಿಲ್ಲ. ನಗರದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯ ಜಪ್ತಿ ವಾರಂಟ್ ಹೊರಡಿಸಿದ್ದು, ಕಚೇರಿಯ ಕಂಪ್ಯೂಟರ್ ಲ್ಯಾಪ್ಟಾಪ್, ಮೇಜು, ಕುರ್ಚಿಗಳನ್ನು ಜಪ್ತಿ ಮಾಡಲಾಯಿತು’ ಎಂದು ವಕೀಲ ಶ್ರೀಕಾಂತ್ ಹೇಳಿದರು.</p>.<p>‘ಸುಪ್ರೀಂಕೋರ್ಟ್ ಆದೇಶದ ಪ್ರಕಾರ, ಭೂಸ್ವಾಧೀನ ಪ್ರಕರಣಗಳನ್ನು 6 ತಿಂಗಳಲ್ಲಿ ಮುಗಿಸಬೇಕು. ಆದರೆ, ರೈತರು ವರ್ಷಗಟ್ಟಳೆ ಅಲೆದಾಡಬೇಕಾಗಿರುವುದು ದುರಂತ’ ಎಂದು ವಿಷಾದಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಭೂಮಿ ಸ್ವಾಧೀನ ಮಾಡಿಕೊಂಡು 15 ವರ್ಷವಾದರೂ ಇಬ್ಬರು ರೈತರಿಗೆ ಪರಿಹಾರ ನೀಡದೇ ವಿಳಂಬ ಮಾಡಿದ ಹೇಮಾವತಿ ಜಲಾಶಯ ಯೋಜನೆ ವಿಭಾಗದ ಕಚೇರಿಯ ಪೀಠೋಪಕರಣಗಳನ್ನು ವಕೀಲರ ಸಮ್ಮುಖದಲ್ಲಿ ಬುಧವಾರ ಜಪ್ತಿ ಮಾಡಲಾಯಿತು.</p>.<p>ಕಟ್ಟಾಯ ಹೋಬಳಿ ಬ್ಯಾಡರಹಳ್ಳಿಯ ಬಿ.ಟಿ. ಶಿವಶಂಕರ್ ಅವರ 33 ಗುಂಟೆ ಜಮೀನಿಗೆ ನ್ಯಾಯಾಲಯವು ₹ 1.09 ಕೋಟಿ ಪರಿಹಾರ ನಿಗದಿ ಮಾಡಿತ್ತು. 2009ರಲ್ಲಿ ಯಗಚಿ ನಾಲೆ ನಿರ್ಮಾಣಕ್ಕಾಗಿ ಭೂಮಿ ಸ್ವಾಧೀನಪಡಿಸಿಕೊಂಡು, ಪರಿಹಾರ ನೀಡಿರಲಿಲ್ಲ. ಮತ್ತೊಂದು ಪ್ರಕರಣದಲ್ಲಿ, ದೊಡ್ಡಭೀಕನಹಳ್ಳಿಯ ಕಿತ್ತಾನೆ ಗ್ರಾಮದ ತಿಮ್ಮೇಗೌಡರ ಜಮೀನು ಸ್ವಾಧೀನಗೊಂಡ ಬಳಿಕ ನಿಗದಿಯಾಗಿದ್ದ ₹ 20 ಲಕ್ಷ ಪರಿಹಾರವನ್ನೂ ನೀಡಿರಲಿಲ್ಲ.</p>.<p>‘ಎರಡೂ ಕಡೆ ರೈತರ ಪರ ಅಂತಿಮ ತೀರ್ಪು ಬಂದಿದೆ. ಆದರೂ ಪರಿಹಾರವನ್ನು ನೀಡಿಲ್ಲ. ನಗರದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯ ಜಪ್ತಿ ವಾರಂಟ್ ಹೊರಡಿಸಿದ್ದು, ಕಚೇರಿಯ ಕಂಪ್ಯೂಟರ್ ಲ್ಯಾಪ್ಟಾಪ್, ಮೇಜು, ಕುರ್ಚಿಗಳನ್ನು ಜಪ್ತಿ ಮಾಡಲಾಯಿತು’ ಎಂದು ವಕೀಲ ಶ್ರೀಕಾಂತ್ ಹೇಳಿದರು.</p>.<p>‘ಸುಪ್ರೀಂಕೋರ್ಟ್ ಆದೇಶದ ಪ್ರಕಾರ, ಭೂಸ್ವಾಧೀನ ಪ್ರಕರಣಗಳನ್ನು 6 ತಿಂಗಳಲ್ಲಿ ಮುಗಿಸಬೇಕು. ಆದರೆ, ರೈತರು ವರ್ಷಗಟ್ಟಳೆ ಅಲೆದಾಡಬೇಕಾಗಿರುವುದು ದುರಂತ’ ಎಂದು ವಿಷಾದಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>