<p><strong>ಹಾಸನ</strong>: ಪಶ್ಚಿಮ ಘಟ್ಟದ ಚಿಕ್ಕಮಗಳೂರು ಜಿಲ್ಲೆ ಹಾಗೂ ಸಕಲೇಶಪುರ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹೇಮಾವತಿ ನದಿಯ ಒಳಹರಿವು ಹೆಚ್ಚಳವಾಗಿದೆ. ನದಿಗೆ 38 ಸಾವಿರ ಕ್ಯುಸೆಕ್ ಒಳಹರಿವು ದಾಖಲಾಗಿದ್ದು, 46 ಸಾವಿರ ಕ್ಯುಸೆಕ್ ನೀರನ್ನು ನದಿ ಹಾಗೂ ಕಾಲುವೆಗೆ ಹರಿಸಲಾಗಿದೆ.</p>.<p>ಶನಿವಾರ ರಾತ್ರಿ 46,350 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗಿದ್ದು, ಭಾನುವಾರ ಬೆಳಿಗ್ಗೆ 39 ಸಾವಿರ ಕ್ಯುಸೆಕ್ ನೀರು ಹರಿಸಲಾಗಿದೆ.</p>.<p>ಕೆಲ ದಿನಗಳಿಂದ ತುಂತುರು ಸುರಿಯುತ್ತಿದ್ದ ಮಳೆ, ಶನಿವಾರದಿಂದ ಮತ್ತೆ ಬಿರುಸುಗೊಂಡಿದೆ. ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಹೇಮಾವತಿ ಉಪನದಿಗಳು ತುಂಬಿ ಹರಿಯುತ್ತಿವೆ. ಇದರ ಜೊತೆಗೆ ಎತ್ತಿನಹೊಳೆ ಯೋಜನೆಯ ನೀರೂ ಹೇಮಾವತಿ ನದಿಗೆ ಸೇರುತ್ತಿದ್ದು, ಜಲಾಶಯದ ಒಳಹರಿವು ದಿಢೀರ್ ಹೆಚ್ಚಾಗಿದೆ.</p>.<p>ಇದರಿಂದಾಗಿ ಜಲಾಶಯದಲ್ಲಿ ನೀರಿನ ಮಟ್ಟ ಕಾಪಾಡಿಕೊಂಡು, ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಅರಕಲಗೂಡು, ಹೊಳೆನರಸೀಪುರ, ಚನ್ನರಾಯಪಟ್ಟಣ ತಾಲ್ಲೂಕುಗಳು ಹಾಗೂ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನ ನದಿ ತೀರದ ನಿವಾಸಿಗಳು ಎಚ್ಚರದಿಂದ ಇರುವಂತೆ ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಕಾವೇರಿಯಲ್ಲೂ ಪ್ರವಾಹ</strong></p>.<p>ಹಾರಂಗಿ ಜಲಾಶಯದಿಂದ 32 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗಿದ್ದು, ಅರಕಲಗೂಡು ತಾಲ್ಲೂಕಿನ ಕೊಣನೂರು, ರಾಮನಾಥಪುರ ಹೋಬಳಿಗಳಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಪಶ್ಚಿಮ ಘಟ್ಟದ ಚಿಕ್ಕಮಗಳೂರು ಜಿಲ್ಲೆ ಹಾಗೂ ಸಕಲೇಶಪುರ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹೇಮಾವತಿ ನದಿಯ ಒಳಹರಿವು ಹೆಚ್ಚಳವಾಗಿದೆ. ನದಿಗೆ 38 ಸಾವಿರ ಕ್ಯುಸೆಕ್ ಒಳಹರಿವು ದಾಖಲಾಗಿದ್ದು, 46 ಸಾವಿರ ಕ್ಯುಸೆಕ್ ನೀರನ್ನು ನದಿ ಹಾಗೂ ಕಾಲುವೆಗೆ ಹರಿಸಲಾಗಿದೆ.</p>.<p>ಶನಿವಾರ ರಾತ್ರಿ 46,350 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗಿದ್ದು, ಭಾನುವಾರ ಬೆಳಿಗ್ಗೆ 39 ಸಾವಿರ ಕ್ಯುಸೆಕ್ ನೀರು ಹರಿಸಲಾಗಿದೆ.</p>.<p>ಕೆಲ ದಿನಗಳಿಂದ ತುಂತುರು ಸುರಿಯುತ್ತಿದ್ದ ಮಳೆ, ಶನಿವಾರದಿಂದ ಮತ್ತೆ ಬಿರುಸುಗೊಂಡಿದೆ. ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಹೇಮಾವತಿ ಉಪನದಿಗಳು ತುಂಬಿ ಹರಿಯುತ್ತಿವೆ. ಇದರ ಜೊತೆಗೆ ಎತ್ತಿನಹೊಳೆ ಯೋಜನೆಯ ನೀರೂ ಹೇಮಾವತಿ ನದಿಗೆ ಸೇರುತ್ತಿದ್ದು, ಜಲಾಶಯದ ಒಳಹರಿವು ದಿಢೀರ್ ಹೆಚ್ಚಾಗಿದೆ.</p>.<p>ಇದರಿಂದಾಗಿ ಜಲಾಶಯದಲ್ಲಿ ನೀರಿನ ಮಟ್ಟ ಕಾಪಾಡಿಕೊಂಡು, ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಅರಕಲಗೂಡು, ಹೊಳೆನರಸೀಪುರ, ಚನ್ನರಾಯಪಟ್ಟಣ ತಾಲ್ಲೂಕುಗಳು ಹಾಗೂ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನ ನದಿ ತೀರದ ನಿವಾಸಿಗಳು ಎಚ್ಚರದಿಂದ ಇರುವಂತೆ ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಕಾವೇರಿಯಲ್ಲೂ ಪ್ರವಾಹ</strong></p>.<p>ಹಾರಂಗಿ ಜಲಾಶಯದಿಂದ 32 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗಿದ್ದು, ಅರಕಲಗೂಡು ತಾಲ್ಲೂಕಿನ ಕೊಣನೂರು, ರಾಮನಾಥಪುರ ಹೋಬಳಿಗಳಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>