<p><strong>ಹೆತ್ತೂರು</strong>: ಹೋಬಳಿಯ ವನಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗೂದ್ದು ಹುಡ್ರೆಮನೆ ಗ್ರಾಮದ ಬಸ್ ಪ್ರಯಾಣಿಕರ ತಂಗುದಾಣ ಶಿಥಿಲಾವಸ್ಥೆ ತಲುಪಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ.</p><p>ಹಲವು ವರ್ಷಗಳ ಹಿಂದೆ ಕಟ್ಟಲಾದ ಈ ತಂಗುದಾಣದ ಗೋಡೆಗಳು ಬಿರುಕು ಬಿಟ್ಟಿದ್ದು, ವಿಪರೀತ ಮಳೆ, ಗಾಳಿಯ ನಡುವೆ ಯಾವಾಗ ಕುಸಿದು ಬೀಳುತ್ತದೆ ಎನ್ನುವ ಆತಂಕ ಮನೆ ಮಾಡಿದೆ.</p><p>ಸುತ್ತಲಿನ ಹಲವು ಗ್ರಾಮಗಳ ವಿದ್ಯಾರ್ಥಿಗಳು, ಉದ್ಯೋಗಿಗಳು, ಸಾರ್ವಜನಿಕರು ನಿತ್ಯ ಇದೇ ತಂಗುದಾಣದಿಂದ ಹಾಸನ, ಸಕಲೇಶಪುರ, ಸೋಮವಾರ ಪೇಟೆ ಮೊದಲಾದ ಪಟ್ಟಣ, ನಗರಗಳಿಗೆ ಬಸ್ ಹಿಡಿದು ಸಾಗಬೇಕಿದೆ. ಈ ಭಾಗದಲ್ಲಿ ವರ್ಷದ ಹಲವು ತಿಂಗಳು ಮಳೆ ಬೀಳುತ್ತಿದ್ದು, ಶಿಥಿಲಾವಸ್ಥೆಯ ತಂಗುದಾಣ ದುರಸ್ತಿ ಮಾಡಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ, ಚುನಾಯಿತ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.</p><p>ಸಂಬಂಧಿಸಿದವರು ಈಗಲಾದರೂ ಇತ್ತ ಗಮನ ಹರಿಸಿ, ಶಿಥಿಲಗೊಂಡ ಈ ಕಟ್ಟಡ ತೆರವುಗೊಳಿಸಿ ಹೊಸ ತಂಗುದಾಣ ನಿರ್ಮಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆತ್ತೂರು</strong>: ಹೋಬಳಿಯ ವನಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗೂದ್ದು ಹುಡ್ರೆಮನೆ ಗ್ರಾಮದ ಬಸ್ ಪ್ರಯಾಣಿಕರ ತಂಗುದಾಣ ಶಿಥಿಲಾವಸ್ಥೆ ತಲುಪಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ.</p><p>ಹಲವು ವರ್ಷಗಳ ಹಿಂದೆ ಕಟ್ಟಲಾದ ಈ ತಂಗುದಾಣದ ಗೋಡೆಗಳು ಬಿರುಕು ಬಿಟ್ಟಿದ್ದು, ವಿಪರೀತ ಮಳೆ, ಗಾಳಿಯ ನಡುವೆ ಯಾವಾಗ ಕುಸಿದು ಬೀಳುತ್ತದೆ ಎನ್ನುವ ಆತಂಕ ಮನೆ ಮಾಡಿದೆ.</p><p>ಸುತ್ತಲಿನ ಹಲವು ಗ್ರಾಮಗಳ ವಿದ್ಯಾರ್ಥಿಗಳು, ಉದ್ಯೋಗಿಗಳು, ಸಾರ್ವಜನಿಕರು ನಿತ್ಯ ಇದೇ ತಂಗುದಾಣದಿಂದ ಹಾಸನ, ಸಕಲೇಶಪುರ, ಸೋಮವಾರ ಪೇಟೆ ಮೊದಲಾದ ಪಟ್ಟಣ, ನಗರಗಳಿಗೆ ಬಸ್ ಹಿಡಿದು ಸಾಗಬೇಕಿದೆ. ಈ ಭಾಗದಲ್ಲಿ ವರ್ಷದ ಹಲವು ತಿಂಗಳು ಮಳೆ ಬೀಳುತ್ತಿದ್ದು, ಶಿಥಿಲಾವಸ್ಥೆಯ ತಂಗುದಾಣ ದುರಸ್ತಿ ಮಾಡಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ, ಚುನಾಯಿತ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.</p><p>ಸಂಬಂಧಿಸಿದವರು ಈಗಲಾದರೂ ಇತ್ತ ಗಮನ ಹರಿಸಿ, ಶಿಥಿಲಗೊಂಡ ಈ ಕಟ್ಟಡ ತೆರವುಗೊಳಿಸಿ ಹೊಸ ತಂಗುದಾಣ ನಿರ್ಮಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>