<p><strong>ಹೆತ್ತೂರು:</strong> ಹೋಬಳಿಯ ವನಗೂರು ಗ್ರಾಮದ ಮನೆಯ ಒಳಗೆ ಜೋಕಾಲಿ ಆಡಲು ಸೀರೆ ಕುತ್ತಿಗೆಗೆ ಬಿಗಿದು, ಬಾಲಕಿ ಸಾನಿತಾ (9) ಮೃತಪಟ್ಟಿದ್ದಾಳೆ.</p>.<p>ಬಸವರಾಜು- ಬೇಬಿ ದಂಪತಿಯ ಒಬ್ಬಳೇ ಪುತ್ರಿ ಸಾನಿತಾ ನಾಲ್ಕನೇ ತರಗತಿ ಓದುತ್ತಿದ್ದು, ಶನಿವಾರ ರಜೆಯಿದ್ದ ಕಾರಣ ಮನೆಯೊಳಗೆ ಸೀರೆ ಕಟ್ಟಿಕೊಂಡು ಜೋಕಾಲಿ ಆಡುತ್ತಿದ್ದಳು. ಈ ವೇಳೆ ಆಯತಪ್ಪಿ ಕುತ್ತಿಗಿಗೆ ಸೀರೆ ಬಿಗಿದು ಮೃತಪಟ್ಟಿದ್ದಾಳೆ. ಇದ್ದ ಒಬ್ಬಳೇ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.</p>.<p>ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.</p>.<p><strong>ಹಳ್ಳಕ್ಕೆ ಬಿದ್ದ ಕಾರು</strong></p><p>ಹೆತ್ತೂರು: ಸಮೀಪದ ಅತ್ತಿಹಳ್ಳಿಯಲ್ಲಿ ಸೇತುವೆಯ ಒಂದು ಬದಿ ತಡೆಗೋಡೆ ಇಲ್ಲದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರು ಹಳ್ಳಕ್ಕೆ ಬಿದ್ದಿದೆ.</p>.<p>ಹೋಬಳಿಯ ಬಾಚಿಹಳ್ಳಿ ಮತ್ತು ಅತ್ತಿಹಳ್ಳಿ ರಸ್ತೆ ಇತ್ತೀಚೆಗಷ್ಟೆ ಡಾಂಬರೀಕರಣ ಆಗಿದ್ದು, ಕಿರಿದಾದ ಸೇತುವೆ ವಿಸ್ತರಣೆ ಮಾಡಿಲ್ಲ. ಸೇತುವೆಯ ಒಂದು ಭಾಗದ ತಡೆಗೋಡೆ ಮುರಿದು ಹೋಗಿದ್ದು, ಇದರಿಂದ ಪ್ರವಾಸಿಗರ ಇನ್ನೊವಾ ಕಾರೊಂದು ಪ್ರಪಾತಕ್ಕೆ ಬಿದ್ದಿದೆ.</p>.<p>ಸೇತುವೆ ಕಿರಿದಾಗಿದ್ದರಿಂದ ಅಪಘಾತಗಳು ಹೆಚ್ಚಾಗಿದ್ದು, ಒಂದೇ ವಾರದಲ್ಲಿ 4 ಕಾರುಗಳು ಸೇತುವೆಯಿಂದ ಕೆಳಗೆ ಬಿದ್ದಿವೆ. ಪ್ರಾಣಾಪಾಯ ಸಂಭವಿಸಿಲ್ಲ. ಮಲೆನಾಡು ಭಾಗದಲ್ಲಿ ಮಳೆಯಾಗಿದ್ದು, ಇಲ್ಲಿನ ಪ್ರಕೃತಿ ಸೌಂದರ್ಯ ಸವಿಯಲು ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಅಪಘಾತಗಳು ಹೆಚ್ಚಾಗಿವೆ.</p>.<p>‘ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಈ ಸೇತುವೆಯ ತಡೆಗೋಡೆ ದುರಸ್ತಿ ಮಾಡಬೇಕು. ಇಂತಹ ಅಪಘಾತಗಳು ಸಂಭವಿಸುವುದನ್ನು ತಡೆಗಟ್ಟಬಹುದು’ ಎಂದು ಬಾಚಿಹಳ್ಳಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆತ್ತೂರು:</strong> ಹೋಬಳಿಯ ವನಗೂರು ಗ್ರಾಮದ ಮನೆಯ ಒಳಗೆ ಜೋಕಾಲಿ ಆಡಲು ಸೀರೆ ಕುತ್ತಿಗೆಗೆ ಬಿಗಿದು, ಬಾಲಕಿ ಸಾನಿತಾ (9) ಮೃತಪಟ್ಟಿದ್ದಾಳೆ.</p>.<p>ಬಸವರಾಜು- ಬೇಬಿ ದಂಪತಿಯ ಒಬ್ಬಳೇ ಪುತ್ರಿ ಸಾನಿತಾ ನಾಲ್ಕನೇ ತರಗತಿ ಓದುತ್ತಿದ್ದು, ಶನಿವಾರ ರಜೆಯಿದ್ದ ಕಾರಣ ಮನೆಯೊಳಗೆ ಸೀರೆ ಕಟ್ಟಿಕೊಂಡು ಜೋಕಾಲಿ ಆಡುತ್ತಿದ್ದಳು. ಈ ವೇಳೆ ಆಯತಪ್ಪಿ ಕುತ್ತಿಗಿಗೆ ಸೀರೆ ಬಿಗಿದು ಮೃತಪಟ್ಟಿದ್ದಾಳೆ. ಇದ್ದ ಒಬ್ಬಳೇ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.</p>.<p>ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.</p>.<p><strong>ಹಳ್ಳಕ್ಕೆ ಬಿದ್ದ ಕಾರು</strong></p><p>ಹೆತ್ತೂರು: ಸಮೀಪದ ಅತ್ತಿಹಳ್ಳಿಯಲ್ಲಿ ಸೇತುವೆಯ ಒಂದು ಬದಿ ತಡೆಗೋಡೆ ಇಲ್ಲದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರು ಹಳ್ಳಕ್ಕೆ ಬಿದ್ದಿದೆ.</p>.<p>ಹೋಬಳಿಯ ಬಾಚಿಹಳ್ಳಿ ಮತ್ತು ಅತ್ತಿಹಳ್ಳಿ ರಸ್ತೆ ಇತ್ತೀಚೆಗಷ್ಟೆ ಡಾಂಬರೀಕರಣ ಆಗಿದ್ದು, ಕಿರಿದಾದ ಸೇತುವೆ ವಿಸ್ತರಣೆ ಮಾಡಿಲ್ಲ. ಸೇತುವೆಯ ಒಂದು ಭಾಗದ ತಡೆಗೋಡೆ ಮುರಿದು ಹೋಗಿದ್ದು, ಇದರಿಂದ ಪ್ರವಾಸಿಗರ ಇನ್ನೊವಾ ಕಾರೊಂದು ಪ್ರಪಾತಕ್ಕೆ ಬಿದ್ದಿದೆ.</p>.<p>ಸೇತುವೆ ಕಿರಿದಾಗಿದ್ದರಿಂದ ಅಪಘಾತಗಳು ಹೆಚ್ಚಾಗಿದ್ದು, ಒಂದೇ ವಾರದಲ್ಲಿ 4 ಕಾರುಗಳು ಸೇತುವೆಯಿಂದ ಕೆಳಗೆ ಬಿದ್ದಿವೆ. ಪ್ರಾಣಾಪಾಯ ಸಂಭವಿಸಿಲ್ಲ. ಮಲೆನಾಡು ಭಾಗದಲ್ಲಿ ಮಳೆಯಾಗಿದ್ದು, ಇಲ್ಲಿನ ಪ್ರಕೃತಿ ಸೌಂದರ್ಯ ಸವಿಯಲು ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಅಪಘಾತಗಳು ಹೆಚ್ಚಾಗಿವೆ.</p>.<p>‘ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಈ ಸೇತುವೆಯ ತಡೆಗೋಡೆ ದುರಸ್ತಿ ಮಾಡಬೇಕು. ಇಂತಹ ಅಪಘಾತಗಳು ಸಂಭವಿಸುವುದನ್ನು ತಡೆಗಟ್ಟಬಹುದು’ ಎಂದು ಬಾಚಿಹಳ್ಳಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>