<p><strong>ಹಾಸನ</strong>: ನಗರದ ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ (ಹಿಮ್ಸ್) ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್ ತಮ್ಮ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.</p>.<p>8 ವರ್ಷಗಳಿಂದ ಹಿಮ್ಸ್ ನಿರ್ದೇಶಕ ಹಾಗೂ ಡೀನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ರವಿಕುಮಾರ್, ವೈದ್ಯಕೀಯ ಶಿಕ್ಷಣ ಸಚಿವರು, ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಈ ಹುದ್ದೆಗೆ ಸ್ವಯಂ ಪ್ರೇರಿತನಾಗಿ ರಾಜೀನಾಮೆ ನೀಡುತ್ತಿದ್ದು, ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ.</p>.<p>‘ನಾನು ನಿರ್ದೇಶಕನಾಗಿದ್ದ ಅವಧಿಯಲ್ಲಿ ಅತ್ಯಂತ ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದ್ದೇನೆ. ರೋಗಿಗಳಿಗೆ ಅತ್ಯುತ್ತಮ ಚಿಕಿತ್ಸಾ ಸೌಲಭ್ಯ ಹಾಗೂ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಶೈಕ್ಷಣಿಕ ವಾತಾವರಣ ಒದಗಿಸುವ ನಿಟ್ಟಿನಲ್ಲಿ ಶ್ರಮಿಸಿದ್ದೇನೆ’ ಎಂದು ಹೇಳಿದ್ದಾರೆ.</p>.<p>‘ಸರ್ಕಾರ ಹಾಗೂ ಸಂಸ್ಥೆಯ ಎಲ್ಲರ ಸಹಕಾರದಿಂದ ನಾನು ನಿಗದಿಪಡಿಸಿದ್ದ ಎಲ್ಲ ಗುರಿಗಳು ಈಗ ಈಡೇರಿದಂತಾಗಿದ್ದು, ಸಂಸ್ಥೆಗೆ ಎರಡು ಬಾರಿ ಕಾಯಕಲ್ಪ ಪ್ರಥಮ ಪ್ರಶಸ್ತಿ, 2 ಬಾರಿ ಬೆಸ್ಟ್ ಎನ್ಎಸ್ಎಸ್ ಪ್ರಶಸ್ತಿ, ರಾಷ್ಟ್ರೀಯ ಮಾನ್ಯತೆಗಳಾದ ಎನ್ಎಬಿಎಚ್, ಎನ್ಎಬಿಎಲ್, ಎನ್ಎಕ್ಯುಎಸ್, ಲಕ್ಷ್ಯ, ಮುಸ್ಕಾನ್ ಮುಂತಾದ ಮಾನ್ಯತೆ ಗಳಿಸಲು ಸಫಲವಾಗಿದ್ದು, ಸಂಸ್ಥೆಯು ಪ್ರಸ್ತುತ ರಾಜ್ಯದಲ್ಲಿ ಉಚ್ಛ್ರಾಯ ಸ್ಥಿತಿಯಲ್ಲಿದೆ. ಈ ಸಂದರ್ಭದಲ್ಲಿ ಗುರಿ ಸಾಧಿಸಿದ ಹೆಮ್ಮೆ ಹಾಗೂ ಸಂಪೂರ್ಣ ತೃಪ್ತಿಯೊಂದಿಗೆ ನಿರ್ದೇಶಕರ ಹುದ್ದೆಗೆ ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆ ಅಂಗೀಕರಿಸಿ ಆದಷ್ಟು ಶೀಘ್ರ ನನ್ನನ್ನು ಹುದ್ದೆಯಿಂದ ಬಿಡುಗಡೆ ಮಾಡಬೇಕು’ ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ನಗರದ ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ (ಹಿಮ್ಸ್) ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್ ತಮ್ಮ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.</p>.<p>8 ವರ್ಷಗಳಿಂದ ಹಿಮ್ಸ್ ನಿರ್ದೇಶಕ ಹಾಗೂ ಡೀನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ರವಿಕುಮಾರ್, ವೈದ್ಯಕೀಯ ಶಿಕ್ಷಣ ಸಚಿವರು, ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಈ ಹುದ್ದೆಗೆ ಸ್ವಯಂ ಪ್ರೇರಿತನಾಗಿ ರಾಜೀನಾಮೆ ನೀಡುತ್ತಿದ್ದು, ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ.</p>.<p>‘ನಾನು ನಿರ್ದೇಶಕನಾಗಿದ್ದ ಅವಧಿಯಲ್ಲಿ ಅತ್ಯಂತ ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದ್ದೇನೆ. ರೋಗಿಗಳಿಗೆ ಅತ್ಯುತ್ತಮ ಚಿಕಿತ್ಸಾ ಸೌಲಭ್ಯ ಹಾಗೂ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಶೈಕ್ಷಣಿಕ ವಾತಾವರಣ ಒದಗಿಸುವ ನಿಟ್ಟಿನಲ್ಲಿ ಶ್ರಮಿಸಿದ್ದೇನೆ’ ಎಂದು ಹೇಳಿದ್ದಾರೆ.</p>.<p>‘ಸರ್ಕಾರ ಹಾಗೂ ಸಂಸ್ಥೆಯ ಎಲ್ಲರ ಸಹಕಾರದಿಂದ ನಾನು ನಿಗದಿಪಡಿಸಿದ್ದ ಎಲ್ಲ ಗುರಿಗಳು ಈಗ ಈಡೇರಿದಂತಾಗಿದ್ದು, ಸಂಸ್ಥೆಗೆ ಎರಡು ಬಾರಿ ಕಾಯಕಲ್ಪ ಪ್ರಥಮ ಪ್ರಶಸ್ತಿ, 2 ಬಾರಿ ಬೆಸ್ಟ್ ಎನ್ಎಸ್ಎಸ್ ಪ್ರಶಸ್ತಿ, ರಾಷ್ಟ್ರೀಯ ಮಾನ್ಯತೆಗಳಾದ ಎನ್ಎಬಿಎಚ್, ಎನ್ಎಬಿಎಲ್, ಎನ್ಎಕ್ಯುಎಸ್, ಲಕ್ಷ್ಯ, ಮುಸ್ಕಾನ್ ಮುಂತಾದ ಮಾನ್ಯತೆ ಗಳಿಸಲು ಸಫಲವಾಗಿದ್ದು, ಸಂಸ್ಥೆಯು ಪ್ರಸ್ತುತ ರಾಜ್ಯದಲ್ಲಿ ಉಚ್ಛ್ರಾಯ ಸ್ಥಿತಿಯಲ್ಲಿದೆ. ಈ ಸಂದರ್ಭದಲ್ಲಿ ಗುರಿ ಸಾಧಿಸಿದ ಹೆಮ್ಮೆ ಹಾಗೂ ಸಂಪೂರ್ಣ ತೃಪ್ತಿಯೊಂದಿಗೆ ನಿರ್ದೇಶಕರ ಹುದ್ದೆಗೆ ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆ ಅಂಗೀಕರಿಸಿ ಆದಷ್ಟು ಶೀಘ್ರ ನನ್ನನ್ನು ಹುದ್ದೆಯಿಂದ ಬಿಡುಗಡೆ ಮಾಡಬೇಕು’ ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>