<p><strong>ಅರಸಿಕೆರೆ</strong>: ‘ಸನಾತನ ಹಿಂದೂ ಧರ್ಮದ ಪದ್ಧತಿಯನ್ನು ಅನುಸರಿಸದೇ ನಮ್ಮಲ್ಲಿ ಒಳಜಗಳ ಮಾಡಿಕೊಂಡು ಬಂದರೆ ಅಪಾಯ ಕಟ್ಟಿಟ್ಟ ಬುತ್ತಿ. ಆದ್ದರಿಂದ ಹಿಂದೂಗಳು ಒಗ್ಗಟ್ಟಾಗಿರಬೇಕು’ ಎಂದು ವಿದ್ಯಾಭಾರತಿ ಹಾಸನ ಜಿಲ್ಲಾ ಸಂಚಾಲಕ ಹೊ.ಸು.ರಮೇಶ್ ಕಳವಳ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಕಣಕಟ್ಟೆ ಹೋಬಳಿಯ ದೊಡ್ಡ ಮೆಟ್ಟಿ ಕುರ್ಕೆ ಗ್ರಾಮದಲ್ಲಿ ಸಮಾಜದ ಆಯೋಜಿಸಿದ್ದ ಹಿಂದೂ ಸಮಾಜೋತ್ಸವದಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ಮೇಲು–ಕೀಳು ಎನ್ನದೆ ಸ್ಪೃಶ–ಅಸ್ಪೃಶ್ಯ ಎನ್ನದೆ ಎಲ್ಲರನ್ನು ಸಮಾನರಾಗಿ ಕಾಣಬೇಕು ಎಂದರು.</p>.<p>ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಬೂದಿಹಾಳ ವಿರುಕ್ತಮಠದ ಶಶಿಶೇಖರ ಸಿದ್ಧಬಸವ ಸ್ವಾಮೀಜಿ ಮಾತನಾಡಿ, ‘ಇಂದು ನಾವು ಯಾವುದೇ ಭಯ,ಆತಂಕವಿಲ್ಲದೆ ಬದುಕು ಸಾಗುತ್ತಿದ್ದರೆ ಅದು ಈ ದೇಶವನ್ನು ಕಾಯುವ ಸೈನಿಕರಿಂದ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ಮಾತ್ರ. ಹಾಗಾಗಿ ನಾವು ರಾಷ್ಟ್ರೀಯ ಸ್ವಯಂ ಸಂಘವನ್ನು ಗೌರವದಿಂದ ನಡೆಸಿಕೊಂಡು ನಮ್ಮ ಯುವ ಪೀಳಿಗೆಯನ್ನು ಅದರೊಟ್ಟಿಗೆ ಬೆಸೆದಾಗ ಮಾತ್ರ ಈ ದೇಶ ಗಟ್ಟಿ ಆಗುತ್ತದೆ’ ಎಂದು ಹೇಳಿದರು.</p>.<p>ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಕಲ್ಲುಸಾದರಹಳ್ಳಿ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ನಡೆಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸಿಕೆರೆ</strong>: ‘ಸನಾತನ ಹಿಂದೂ ಧರ್ಮದ ಪದ್ಧತಿಯನ್ನು ಅನುಸರಿಸದೇ ನಮ್ಮಲ್ಲಿ ಒಳಜಗಳ ಮಾಡಿಕೊಂಡು ಬಂದರೆ ಅಪಾಯ ಕಟ್ಟಿಟ್ಟ ಬುತ್ತಿ. ಆದ್ದರಿಂದ ಹಿಂದೂಗಳು ಒಗ್ಗಟ್ಟಾಗಿರಬೇಕು’ ಎಂದು ವಿದ್ಯಾಭಾರತಿ ಹಾಸನ ಜಿಲ್ಲಾ ಸಂಚಾಲಕ ಹೊ.ಸು.ರಮೇಶ್ ಕಳವಳ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಕಣಕಟ್ಟೆ ಹೋಬಳಿಯ ದೊಡ್ಡ ಮೆಟ್ಟಿ ಕುರ್ಕೆ ಗ್ರಾಮದಲ್ಲಿ ಸಮಾಜದ ಆಯೋಜಿಸಿದ್ದ ಹಿಂದೂ ಸಮಾಜೋತ್ಸವದಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ಮೇಲು–ಕೀಳು ಎನ್ನದೆ ಸ್ಪೃಶ–ಅಸ್ಪೃಶ್ಯ ಎನ್ನದೆ ಎಲ್ಲರನ್ನು ಸಮಾನರಾಗಿ ಕಾಣಬೇಕು ಎಂದರು.</p>.<p>ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಬೂದಿಹಾಳ ವಿರುಕ್ತಮಠದ ಶಶಿಶೇಖರ ಸಿದ್ಧಬಸವ ಸ್ವಾಮೀಜಿ ಮಾತನಾಡಿ, ‘ಇಂದು ನಾವು ಯಾವುದೇ ಭಯ,ಆತಂಕವಿಲ್ಲದೆ ಬದುಕು ಸಾಗುತ್ತಿದ್ದರೆ ಅದು ಈ ದೇಶವನ್ನು ಕಾಯುವ ಸೈನಿಕರಿಂದ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ಮಾತ್ರ. ಹಾಗಾಗಿ ನಾವು ರಾಷ್ಟ್ರೀಯ ಸ್ವಯಂ ಸಂಘವನ್ನು ಗೌರವದಿಂದ ನಡೆಸಿಕೊಂಡು ನಮ್ಮ ಯುವ ಪೀಳಿಗೆಯನ್ನು ಅದರೊಟ್ಟಿಗೆ ಬೆಸೆದಾಗ ಮಾತ್ರ ಈ ದೇಶ ಗಟ್ಟಿ ಆಗುತ್ತದೆ’ ಎಂದು ಹೇಳಿದರು.</p>.<p>ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಕಲ್ಲುಸಾದರಹಳ್ಳಿ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ನಡೆಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>