<p><strong>ಹಿರೀಸಾವೆ</strong>: ಶಾಲೆಯಿಂದ ಶಿಕ್ಷಣ ಮತ್ತು ದೇವಸ್ಥಾನಗಳಿಂದ ಧರ್ಮ ಸಂಸ್ಕೃತಿ, ಸಂಸ್ಕಾರ ಬೆಳೆಯುತ್ತದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.</p>.<p>ಹೋಬಳಿಯ ಸೋರೆಕಾಯಿಪುರದಲ್ಲಿ ಬುಧವಾರ ಮಲ್ಲಿಗಮ್ಮ, ದುರ್ಗಮ್ಮ, ಮುನೀಶ್ವರ ಹಾಗೂ ಮಾರಿಯಮ್ಮ ನೂತನ ದೇವಾಲಯಗಳಲ್ಲಿ ದೇವರ ಮೂರ್ತಿಗಳಿಗೆ ಪ್ರಾಣ ಪ್ರತಿಷ್ಠಾಪನೆಯ ಎರಡನೇ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಗ್ರಾಮದಲ್ಲಿ ದೇಗುಲ ಹಾಗೂ ಶಾಲೆಯ ಗಂಟೆಯ ಶಬ್ದ ಮೊಳಗಿದಾಗ, ಜನರು ಎಚ್ಚರಿಕೆಯಿಂದ ಇರುತ್ತಾರೆ. ನಮ್ಮ ಸಂಸ್ಕೃತಿ, ಸನಾತನ ಧರ್ಮದ ತಳಹದಿಯ ಮೇಲೆ ದೇಶದ ಅಸ್ತಿತ್ವ ನಿಂತಿದೆ ಎಂದರು.</p>.<p>ದೇವಸ್ಥಾನದಲ್ಲಿ ಬೆಳಿಗ್ಗೆ ದುರ್ಗಾ, ಮೃತ್ಯುಂಜಯ ಹೋಮ ಮತ್ತು ವಿಶೇಷ ಪೂಜೆ ಜರುಗಿದವು. ವೀರಭದ್ರೇಶ್ವರ ಸ್ವಾಮಿ ಉತ್ಸವ ಮೂರ್ತಿ ಮೆರವಣಿಗೆ , ಪೂರ್ಣ ಕುಂಭ , ವೀರಗಾಸೆ ಕುಣಿತದೊಂದಿಗೆ ಗ್ರಾಮದ ಪ್ರಮುಖ ಬೀದಿಯಲ್ಲಿ ನಡೆಯಿತು ಎಂದು ದೇವಸ್ಥಾನದ ಸಮಿತಿಯ ಪ್ರಮುಖರು ತಿಳಿಸಿದರು.</p>.<h2> ಲೋಕಾರ್ಪಣೆ ಇಂದು</h2>.<p> ದೇವಸ್ಥಾನದ ಲೋಕಾರ್ಪಣೆ ಗುರುವಾರ ನಡೆಯಲಿದೆ. ಜನಪ್ರತಿನಿಧಿಗಳು ಮತ್ತು ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ. ಸ್ಪರ್ಧೆ: ರಾತ್ರಿ ಪುರಷರಿಗೆ ವಾಲಿಬಾಲ್ ಹಗ್ಗಜಗ್ಗಾಟ ಗುಂಡು ಕಲ್ಲು ಎತ್ತುವುದು ಗುಂಡು ಎಸೆಯುವ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೀಸಾವೆ</strong>: ಶಾಲೆಯಿಂದ ಶಿಕ್ಷಣ ಮತ್ತು ದೇವಸ್ಥಾನಗಳಿಂದ ಧರ್ಮ ಸಂಸ್ಕೃತಿ, ಸಂಸ್ಕಾರ ಬೆಳೆಯುತ್ತದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.</p>.<p>ಹೋಬಳಿಯ ಸೋರೆಕಾಯಿಪುರದಲ್ಲಿ ಬುಧವಾರ ಮಲ್ಲಿಗಮ್ಮ, ದುರ್ಗಮ್ಮ, ಮುನೀಶ್ವರ ಹಾಗೂ ಮಾರಿಯಮ್ಮ ನೂತನ ದೇವಾಲಯಗಳಲ್ಲಿ ದೇವರ ಮೂರ್ತಿಗಳಿಗೆ ಪ್ರಾಣ ಪ್ರತಿಷ್ಠಾಪನೆಯ ಎರಡನೇ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಗ್ರಾಮದಲ್ಲಿ ದೇಗುಲ ಹಾಗೂ ಶಾಲೆಯ ಗಂಟೆಯ ಶಬ್ದ ಮೊಳಗಿದಾಗ, ಜನರು ಎಚ್ಚರಿಕೆಯಿಂದ ಇರುತ್ತಾರೆ. ನಮ್ಮ ಸಂಸ್ಕೃತಿ, ಸನಾತನ ಧರ್ಮದ ತಳಹದಿಯ ಮೇಲೆ ದೇಶದ ಅಸ್ತಿತ್ವ ನಿಂತಿದೆ ಎಂದರು.</p>.<p>ದೇವಸ್ಥಾನದಲ್ಲಿ ಬೆಳಿಗ್ಗೆ ದುರ್ಗಾ, ಮೃತ್ಯುಂಜಯ ಹೋಮ ಮತ್ತು ವಿಶೇಷ ಪೂಜೆ ಜರುಗಿದವು. ವೀರಭದ್ರೇಶ್ವರ ಸ್ವಾಮಿ ಉತ್ಸವ ಮೂರ್ತಿ ಮೆರವಣಿಗೆ , ಪೂರ್ಣ ಕುಂಭ , ವೀರಗಾಸೆ ಕುಣಿತದೊಂದಿಗೆ ಗ್ರಾಮದ ಪ್ರಮುಖ ಬೀದಿಯಲ್ಲಿ ನಡೆಯಿತು ಎಂದು ದೇವಸ್ಥಾನದ ಸಮಿತಿಯ ಪ್ರಮುಖರು ತಿಳಿಸಿದರು.</p>.<h2> ಲೋಕಾರ್ಪಣೆ ಇಂದು</h2>.<p> ದೇವಸ್ಥಾನದ ಲೋಕಾರ್ಪಣೆ ಗುರುವಾರ ನಡೆಯಲಿದೆ. ಜನಪ್ರತಿನಿಧಿಗಳು ಮತ್ತು ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ. ಸ್ಪರ್ಧೆ: ರಾತ್ರಿ ಪುರಷರಿಗೆ ವಾಲಿಬಾಲ್ ಹಗ್ಗಜಗ್ಗಾಟ ಗುಂಡು ಕಲ್ಲು ಎತ್ತುವುದು ಗುಂಡು ಎಸೆಯುವ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>