<p>ಹೊಳೆನರಸೀಪುರ: ಪಟ್ಟಣದ ಕೈಗಾರಿಕಾ ಪ್ರದೇಶದ ಗೋದಾಮಿನಲ್ಲಿ ಸಂಗ್ರಹಿಸಿದ್ದ ₹27 ಲಕ್ಷ ಮೌಲ್ಯದ 30 ಟನ್ ‘ಅಕೇಶಿಯಾ ಕಟೇಚು’ ಮರದ ತುಂಡುಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.</p>.<p>ರಕ್ತಚಂದನ ಮಾದರಿಯ ಮರದ ತುಂಡುಗಳು ಇವಾಗಿವೆ. ಇವುಗಳನ್ನು ಅಕ್ರಮವಾಗಿ ತರಲಾಗಿದೆ ಎಂದು ಬಡಾವಣೆಯ ಕೆಲವರು ಮಾಹಿತಿ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಆರ್ಎಫ್ಒ ದಿಲೀಪ್, ‘ಇದು ಬೀದರ್ನಿಂದ ಬಂದಿದೆ. ಪರವಾನಗಿ ಇದೆ’ ಎಂದು ತಿಳಿಸಿದ್ದರು.</p>.<p>ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಸ್ಥಳೀಯರು, ‘ಇಲ್ಲಿಂದ ಬೇರೆಡೆಗೆ ಸಾಗಿಸಲಾಗುತ್ತಿದೆ’ ಎಂದು ತಿಳಿಸಿದ್ದರು. ಈ ಬಗ್ಗೆ ಮಾಧ್ಯಮದಲ್ಲಿ ಪ್ರಕಟವಾಗಿದ್ದ ವರದಿ ಆಧರಿಸಿ, ಹಿರಿಯ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದರು.</p>.<p>‘30 ಟನ್ ಮರದ ತುಂಡುಗಳನ್ನು ವಶಕ್ಕೆ ಪಡೆದಿದ್ದೇವೆ. ಇದಕ್ಕೆ ಬೀದರ್ನಲ್ಲಿ ನೀಡಿದ್ದ ಪರವಾನಗಿ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ. ಎಫ್ಐಆರ್ ದಾಖಲಿಸುತ್ತೇವೆ’ ಎಂದು ಆರ್ಎಫ್ಒ ದಿಲೀಪ್ ತಿಳಿಸಿದ್ದಾರೆ.</p>.<p>ವಶಕ್ಕೆ ಪಡೆದ ಮರದ ತುಂಡುಗಳನ್ನು ಹಾಸನದ ಗೋದಾಮಿಗೆ ಸಾಗಿಸಲಾಗಿದೆ.</p>.<p>‘ಶ್ರೀಗಂಧ, ರಕ್ತಚಂದನ ನಂತರ ಹೆಚ್ಚಿನ ಮೌಲ್ಯ ಅಕೇಷಿಯಾ ಕಟೇಚು ಮರಕ್ಕಿದೆ. ಅದರ ತುಂಡುಗಳಿಂದ ತಯಾರಾದ ವಸ್ತುಗಳು ಲಕ್ಷಾಂತರ ರೂಪಾಯಿ ಬೆಲೆ ಬಾಳುತ್ತವೆ’ ಎಂದು ಇಲಾಖೆಯ ನಿವೃತ್ತ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದರು.</p>.<p>‘ಅಕ್ರಮ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸಾಗಾಟಕ್ಕೆ ಬಳಸಿದ್ದ ಲಾರಿಯ ಪರವಾನಗಿಯನ್ನೂ ಪರಿಶೀಲಿಸಬೇಕು’ ಎನ್ನುವುದು ಸ್ಥಳೀಯರ ಒತ್ತಾಯವಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-36-620561477</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಳೆನರಸೀಪುರ: ಪಟ್ಟಣದ ಕೈಗಾರಿಕಾ ಪ್ರದೇಶದ ಗೋದಾಮಿನಲ್ಲಿ ಸಂಗ್ರಹಿಸಿದ್ದ ₹27 ಲಕ್ಷ ಮೌಲ್ಯದ 30 ಟನ್ ‘ಅಕೇಶಿಯಾ ಕಟೇಚು’ ಮರದ ತುಂಡುಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.</p>.<p>ರಕ್ತಚಂದನ ಮಾದರಿಯ ಮರದ ತುಂಡುಗಳು ಇವಾಗಿವೆ. ಇವುಗಳನ್ನು ಅಕ್ರಮವಾಗಿ ತರಲಾಗಿದೆ ಎಂದು ಬಡಾವಣೆಯ ಕೆಲವರು ಮಾಹಿತಿ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಆರ್ಎಫ್ಒ ದಿಲೀಪ್, ‘ಇದು ಬೀದರ್ನಿಂದ ಬಂದಿದೆ. ಪರವಾನಗಿ ಇದೆ’ ಎಂದು ತಿಳಿಸಿದ್ದರು.</p>.<p>ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಸ್ಥಳೀಯರು, ‘ಇಲ್ಲಿಂದ ಬೇರೆಡೆಗೆ ಸಾಗಿಸಲಾಗುತ್ತಿದೆ’ ಎಂದು ತಿಳಿಸಿದ್ದರು. ಈ ಬಗ್ಗೆ ಮಾಧ್ಯಮದಲ್ಲಿ ಪ್ರಕಟವಾಗಿದ್ದ ವರದಿ ಆಧರಿಸಿ, ಹಿರಿಯ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದರು.</p>.<p>‘30 ಟನ್ ಮರದ ತುಂಡುಗಳನ್ನು ವಶಕ್ಕೆ ಪಡೆದಿದ್ದೇವೆ. ಇದಕ್ಕೆ ಬೀದರ್ನಲ್ಲಿ ನೀಡಿದ್ದ ಪರವಾನಗಿ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ. ಎಫ್ಐಆರ್ ದಾಖಲಿಸುತ್ತೇವೆ’ ಎಂದು ಆರ್ಎಫ್ಒ ದಿಲೀಪ್ ತಿಳಿಸಿದ್ದಾರೆ.</p>.<p>ವಶಕ್ಕೆ ಪಡೆದ ಮರದ ತುಂಡುಗಳನ್ನು ಹಾಸನದ ಗೋದಾಮಿಗೆ ಸಾಗಿಸಲಾಗಿದೆ.</p>.<p>‘ಶ್ರೀಗಂಧ, ರಕ್ತಚಂದನ ನಂತರ ಹೆಚ್ಚಿನ ಮೌಲ್ಯ ಅಕೇಷಿಯಾ ಕಟೇಚು ಮರಕ್ಕಿದೆ. ಅದರ ತುಂಡುಗಳಿಂದ ತಯಾರಾದ ವಸ್ತುಗಳು ಲಕ್ಷಾಂತರ ರೂಪಾಯಿ ಬೆಲೆ ಬಾಳುತ್ತವೆ’ ಎಂದು ಇಲಾಖೆಯ ನಿವೃತ್ತ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದರು.</p>.<p>‘ಅಕ್ರಮ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸಾಗಾಟಕ್ಕೆ ಬಳಸಿದ್ದ ಲಾರಿಯ ಪರವಾನಗಿಯನ್ನೂ ಪರಿಶೀಲಿಸಬೇಕು’ ಎನ್ನುವುದು ಸ್ಥಳೀಯರ ಒತ್ತಾಯವಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-36-620561477</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>