<p><strong>ಹೊಳೆನರಸೀಪುರ (ಹಾಸನ ಜಿಲ್ಲೆ):</strong> ಇಲ್ಲಿನ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ ಮಂಗಳವಾರ (ಮಾರ್ಚ್ 3) ನಡೆಯಲಿದ್ದು, ರಥಕ್ಕೆ ಬಟ್ಟೆ ಹಾಕುವ ವಿಚಾರವು ಕಾಂಗ್ರೆಸ್–ಜೆಡಿಎಸ್ಗೆ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಣಮಿಸಿದೆ. ಇದರಿಂದಾಗಿ ರಥೋತ್ಸವ ನಡೆಸಲು ತಾಲ್ಲೂಕು ಆಡಳಿತಕ್ಕೆ ಸಂಕಷ್ಟ ಎದುರಾಗಿದೆ.</p>.<p>ಈ ಬಾರಿ ಮಂಗಳವಾರ ಗ್ರಹಣ ಇರುವುದರಿಂದ ಹೊಸಬಟ್ಟೆ ಹಾಕುವುದು ಬೇಡ ಎಂದು ಶಾಸಕ ಎಚ್.ಡಿ. ರೇವಣ್ಣ ನೇತೃತ್ವದ ಸಭೆಯಲ್ಲಿ ನಿರ್ಧಾರವಾಗಿತ್ತು.</p>.<p>ಆದರೆ, ಸೋಮವಾರ ರಥಕ್ಕೆ ಕಾಂಗ್ರೆಸ್ ಮುಖಂಡರು ಹೊಸಬಟ್ಟೆ ಹಾಕಲು ಯತ್ನಿಸಿದರು. ಜೆಡಿಎಸ್ ಅದನ್ನು ತಡೆದು, ಹಳೆಯ ಬಟ್ಟೆ ಹಾಕಿದರು. ಮಧ್ಯಪ್ರವೇಶಿಸಿದ ಉಪ ವಿಭಾಗಾಧಿಕಾರಿ ಜಗದೀಶ್ ಗಂಗಣ್ಣವರ, ‘ಜಿಲ್ಲಾಧಿಕಾರಿ ಸೂಚನೆಯಂತೆ ಈ ಬಾರಿ ರಥಕ್ಕೆ ಕೇವಲ ಹೂವಿನ ಅಲಂಕಾರ ಮಾಡಲಾಗುವುದು’ ಎಂದರು.</p>.<p>ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಉಭಯ ಬಣಗಳು, ತಮ್ಮ ವಾದಕ್ಕೆ ಅಂಟಿಕೊಂಡಿವೆ. ಇತ್ತ ದೇಗುಲಕ್ಕೆ ಬಂದಿದ್ದ ಶಾಸಕ ಎಚ್.ಡಿ. ರೇವಣ್ಣ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ‘ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶೀಲ್ದಾರ್ ವಿರುದ್ಧ ಹಕ್ಕುಚ್ಯುತಿ ಮಂಡಿಸುವೆ’ ಎಂದು ಎಚ್ಚರಿಕೆ ನೀಡಿದರು.</p>.<p>ನಂತರ ಸ್ಥಳಕ್ಕೆ ಬಂದ ಸಂಸದ ಶ್ರೇಯಸ್ ಪಟೇಲ್, ‘ಜಿಲ್ಲಾಧಿಕಾರಿ ಸೂಚನೆಯಂತೆ ಹೂವಿನ ಅಲಂಕಾರದಲ್ಲಿ ರಥೋತ್ಸವ ನಡೆಸಬೇಕು’ ಎಂದು ಉಪ ವಿಭಾಗಾಧಿಕಾರಿಗೆ ಸೂಚಿಸಿದರು.</p>.<p>‘ಶಾಸಕರು–ಸಂಸದರು ಒಮ್ಮತದ ತೀರ್ಮಾನಕ್ಕೆ ಬಂದು, ರಥೋತ್ಸವ ನಡೆಸಲು ಅವಕಾಶ ಮಾಡಿಕೊಡಬೇಕು’ ಎಂದು ಉಪವಿಭಾಗಾಧಿಕಾರಿ ಕೋರಿದರು. ಸಂಜೆಯ ವೇಳೆಗೆ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ರಥಕ್ಕೆ ಹಾಕಿದ್ದ ಹಳೆಯ ಬಟ್ಟೆಗಳನ್ನು ತೆಗೆಯಲಾಗಿದ್ದು, ಹೂವಿನ ಅಲಂಕಾರ ಮಾಡಲಾಯಿತು. </p>.<p>‘ಹೂವಿನ ಅಲಂಕಾರದಲ್ಲೇ ಬಿಗಿ ಭದ್ರತೆಯಲ್ಲಿ ರಥೋತ್ಸವ ನಡೆಯಲಿದೆ’ ಎಂದು ಅಧಿಕಾರಿಗಳು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆನರಸೀಪುರ (ಹಾಸನ ಜಿಲ್ಲೆ):</strong> ಇಲ್ಲಿನ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ ಮಂಗಳವಾರ (ಮಾರ್ಚ್ 3) ನಡೆಯಲಿದ್ದು, ರಥಕ್ಕೆ ಬಟ್ಟೆ ಹಾಕುವ ವಿಚಾರವು ಕಾಂಗ್ರೆಸ್–ಜೆಡಿಎಸ್ಗೆ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಣಮಿಸಿದೆ. ಇದರಿಂದಾಗಿ ರಥೋತ್ಸವ ನಡೆಸಲು ತಾಲ್ಲೂಕು ಆಡಳಿತಕ್ಕೆ ಸಂಕಷ್ಟ ಎದುರಾಗಿದೆ.</p>.<p>ಈ ಬಾರಿ ಮಂಗಳವಾರ ಗ್ರಹಣ ಇರುವುದರಿಂದ ಹೊಸಬಟ್ಟೆ ಹಾಕುವುದು ಬೇಡ ಎಂದು ಶಾಸಕ ಎಚ್.ಡಿ. ರೇವಣ್ಣ ನೇತೃತ್ವದ ಸಭೆಯಲ್ಲಿ ನಿರ್ಧಾರವಾಗಿತ್ತು.</p>.<p>ಆದರೆ, ಸೋಮವಾರ ರಥಕ್ಕೆ ಕಾಂಗ್ರೆಸ್ ಮುಖಂಡರು ಹೊಸಬಟ್ಟೆ ಹಾಕಲು ಯತ್ನಿಸಿದರು. ಜೆಡಿಎಸ್ ಅದನ್ನು ತಡೆದು, ಹಳೆಯ ಬಟ್ಟೆ ಹಾಕಿದರು. ಮಧ್ಯಪ್ರವೇಶಿಸಿದ ಉಪ ವಿಭಾಗಾಧಿಕಾರಿ ಜಗದೀಶ್ ಗಂಗಣ್ಣವರ, ‘ಜಿಲ್ಲಾಧಿಕಾರಿ ಸೂಚನೆಯಂತೆ ಈ ಬಾರಿ ರಥಕ್ಕೆ ಕೇವಲ ಹೂವಿನ ಅಲಂಕಾರ ಮಾಡಲಾಗುವುದು’ ಎಂದರು.</p>.<p>ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಉಭಯ ಬಣಗಳು, ತಮ್ಮ ವಾದಕ್ಕೆ ಅಂಟಿಕೊಂಡಿವೆ. ಇತ್ತ ದೇಗುಲಕ್ಕೆ ಬಂದಿದ್ದ ಶಾಸಕ ಎಚ್.ಡಿ. ರೇವಣ್ಣ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ‘ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶೀಲ್ದಾರ್ ವಿರುದ್ಧ ಹಕ್ಕುಚ್ಯುತಿ ಮಂಡಿಸುವೆ’ ಎಂದು ಎಚ್ಚರಿಕೆ ನೀಡಿದರು.</p>.<p>ನಂತರ ಸ್ಥಳಕ್ಕೆ ಬಂದ ಸಂಸದ ಶ್ರೇಯಸ್ ಪಟೇಲ್, ‘ಜಿಲ್ಲಾಧಿಕಾರಿ ಸೂಚನೆಯಂತೆ ಹೂವಿನ ಅಲಂಕಾರದಲ್ಲಿ ರಥೋತ್ಸವ ನಡೆಸಬೇಕು’ ಎಂದು ಉಪ ವಿಭಾಗಾಧಿಕಾರಿಗೆ ಸೂಚಿಸಿದರು.</p>.<p>‘ಶಾಸಕರು–ಸಂಸದರು ಒಮ್ಮತದ ತೀರ್ಮಾನಕ್ಕೆ ಬಂದು, ರಥೋತ್ಸವ ನಡೆಸಲು ಅವಕಾಶ ಮಾಡಿಕೊಡಬೇಕು’ ಎಂದು ಉಪವಿಭಾಗಾಧಿಕಾರಿ ಕೋರಿದರು. ಸಂಜೆಯ ವೇಳೆಗೆ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ರಥಕ್ಕೆ ಹಾಕಿದ್ದ ಹಳೆಯ ಬಟ್ಟೆಗಳನ್ನು ತೆಗೆಯಲಾಗಿದ್ದು, ಹೂವಿನ ಅಲಂಕಾರ ಮಾಡಲಾಯಿತು. </p>.<p>‘ಹೂವಿನ ಅಲಂಕಾರದಲ್ಲೇ ಬಿಗಿ ಭದ್ರತೆಯಲ್ಲಿ ರಥೋತ್ಸವ ನಡೆಯಲಿದೆ’ ಎಂದು ಅಧಿಕಾರಿಗಳು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>