<p><strong>ಹೊಳೆನರಸೀಪುರ:</strong> ತಾಲ್ಲೂಕಿನ ಮಾವಿನಕೆರೆ ಲಕ್ಷ್ಮೀವೆಂಕಟೇಶ್ವರಸ್ವಾಮಿ ರಥೋತ್ಸವ ಭಾನುವಾರ ಬೆಳಿಗ್ಗೆ ಶ್ರದ್ಧಾ–ಭಕ್ತಿಯಿಂದ ನಡೆಯಿತು.</p>.<p>ರಥಾರೋಹಣ ಮೂರ್ತಿಗೆ ಪೂಜೆ ಸಲ್ಲಿಸಿ ರಥದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬಳಿಕ ನಗಾರಿ ಬಾರಿಸಲಾಯಿತು. ನಗಾರಿ ಸದ್ದು ಕೇಳಿದ ಭಕ್ತರು ರಥವನ್ನು ಎಳೆಯಲು ಪ್ರಾರಂಭಿಸಿದರು.</p>.<p>‘ವೆಂಕಟೇಶ್ವರನಿಗೆ ಗೋವಿಂದ..’, ‘ಸಪ್ತಗಿರಿವಾಸ ಗೋವಿಂದ, ಗೋವಿಂದ..’ ಎಂದು ಘೋಷಣೆ ಕೂಗಿದರು. ಭಕ್ತರು ರಥಕ್ಕೆ ಹಣ್ಣು, ಜವನ ಎಸೆದರು.</p>.<p>ಭಕ್ತರಿಗೆ ಪ್ರಸಾದ, ಮಜ್ಜಿಗೆ, ಪಾನಕದ ವ್ಯವಸ್ಥೆ ಮಾಡಲಾಗಿತ್ತು. ಶಾಸಕ ಎಚ್.ಡಿ. ರೇವಣ್ಣ, ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ, ಪ್ರಭಾರ ತಹಶೀಲ್ದಾರ್ ರಮೇಶ್, ಉದ್ಯಮಿಗಳಾದ ಪ್ರಕಾಶ್, ಎನ್.ಆರ್. ಅನಂತ್ಕುಮಾರ್, ವಾಸಣ್ಣ, ಜೈಪ್ರಕಾಶ್ ಭಾಗವಹಿಸಿದ್ದರು.</p>.<p>ಸಿಪಿಐ ಸಂತೋಷ್, ನಗರಠಾಣೆ ಎಸ್ಐ ಅಭಿಜಿತ್, ಗ್ರಾಮಾಂತರ ಠಾಣೆ ಎಸ್ಐ ರಮೇಶ್ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು. ದೇವಾಲಯದ ಪ್ರಧಾನ ಅರ್ಚಕ ಜನಾರ್ಧನ್ ಮತ್ತು ಸಂಗಡಿಗರು ರಥೋತ್ಸವದ ಪೂಜಾ ವಿಧಿವಿಧಾನ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆನರಸೀಪುರ:</strong> ತಾಲ್ಲೂಕಿನ ಮಾವಿನಕೆರೆ ಲಕ್ಷ್ಮೀವೆಂಕಟೇಶ್ವರಸ್ವಾಮಿ ರಥೋತ್ಸವ ಭಾನುವಾರ ಬೆಳಿಗ್ಗೆ ಶ್ರದ್ಧಾ–ಭಕ್ತಿಯಿಂದ ನಡೆಯಿತು.</p>.<p>ರಥಾರೋಹಣ ಮೂರ್ತಿಗೆ ಪೂಜೆ ಸಲ್ಲಿಸಿ ರಥದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬಳಿಕ ನಗಾರಿ ಬಾರಿಸಲಾಯಿತು. ನಗಾರಿ ಸದ್ದು ಕೇಳಿದ ಭಕ್ತರು ರಥವನ್ನು ಎಳೆಯಲು ಪ್ರಾರಂಭಿಸಿದರು.</p>.<p>‘ವೆಂಕಟೇಶ್ವರನಿಗೆ ಗೋವಿಂದ..’, ‘ಸಪ್ತಗಿರಿವಾಸ ಗೋವಿಂದ, ಗೋವಿಂದ..’ ಎಂದು ಘೋಷಣೆ ಕೂಗಿದರು. ಭಕ್ತರು ರಥಕ್ಕೆ ಹಣ್ಣು, ಜವನ ಎಸೆದರು.</p>.<p>ಭಕ್ತರಿಗೆ ಪ್ರಸಾದ, ಮಜ್ಜಿಗೆ, ಪಾನಕದ ವ್ಯವಸ್ಥೆ ಮಾಡಲಾಗಿತ್ತು. ಶಾಸಕ ಎಚ್.ಡಿ. ರೇವಣ್ಣ, ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ, ಪ್ರಭಾರ ತಹಶೀಲ್ದಾರ್ ರಮೇಶ್, ಉದ್ಯಮಿಗಳಾದ ಪ್ರಕಾಶ್, ಎನ್.ಆರ್. ಅನಂತ್ಕುಮಾರ್, ವಾಸಣ್ಣ, ಜೈಪ್ರಕಾಶ್ ಭಾಗವಹಿಸಿದ್ದರು.</p>.<p>ಸಿಪಿಐ ಸಂತೋಷ್, ನಗರಠಾಣೆ ಎಸ್ಐ ಅಭಿಜಿತ್, ಗ್ರಾಮಾಂತರ ಠಾಣೆ ಎಸ್ಐ ರಮೇಶ್ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು. ದೇವಾಲಯದ ಪ್ರಧಾನ ಅರ್ಚಕ ಜನಾರ್ಧನ್ ಮತ್ತು ಸಂಗಡಿಗರು ರಥೋತ್ಸವದ ಪೂಜಾ ವಿಧಿವಿಧಾನ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>