<p>ಹೊಳೆನರಸೀಪುರ: ತಾಲ್ಲೂಕಿನ ಎಸ್.ಅಂಕನಹಳ್ಳಿ ಗ್ರಾಮದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಎಚ್.ಡಿ. ರೇವಣ್ಣ ಭಾನುವಾರ ಭೂಮಿಪೂಜೆ ನೆರವೇರಿಸಿದರು.</p>.<p>ನಂತರ ಮಾತನಾಡಿದ ಅವರು, ‘ರಸ್ತೆ ಡಾಂಬರೀಕರಣಕ್ಕೆ 3 ವರ್ಷದ ಹಿಂದೆ ₹ 1 ಕೋಟಿಗೆ ಟೆಂಡರ್ ಕರೆಯಲಾಗಿತ್ತು. ಕಾಂಗ್ರೆಸ್ ಸರ್ಕಾರ ಯಾವುದೇ ಕಾಮಗಾರಿಗೆ ಹಣ ನೀಡುತ್ತಿಲ್ಲ. ಸಾವಿರಾರು ಕೋಟಿ ಬಿಲ್ ಬಾಕಿ ಉಳಿಸಿಕೊಂಡಿದೆ. ಗುತ್ತಿಗೆದಾರರ ಮನವೊಲಿಸಿ ಈ ರಸ್ತೆ ಕೆಲಸ ಮಾಡಿಸುತ್ತಿದ್ದೇನೆ’ ಎಂದರು.</p>.<p>‘ಕಾಂಗ್ರೆಸ್ ಸರ್ಕಾರ ರಸ್ತೆಗಳನ್ನು ಅಭಿವೃದ್ಧಿಪಡಿಸುತ್ತಿಲ್ಲ. ಕನಿಷ್ಠ ಗುಂಡಿ ಮುಚ್ಚಲೂ ಹಣ ನೀಡುತ್ತಿಲ್ಲ. ಚನ್ನರಾಯಪಟ್ಟಣ ರಸ್ತೆ ಗುಂಡಿ ಮುಚ್ಚಲು ₹75 ಲಕ್ಷಕ್ಕೆ ಟೆಂಡರ್ ಆಗಿ ಕೆಲಸವನ್ನು ಪ್ರಾರಂಭಿಸಿದ್ದ ಗುತ್ತಿಗೆದಾರ ಅಪೂರ್ಣ ಕಾಮಗಾರಿ ಮಾಡಿದ್ದಾರೆ. ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಕ್ರಮ ಕೈಗೊಳ್ಳದೇ, ಸುಮ್ಮನಿದ್ದಾರೆ’ ಎಂದು ದೂರಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪುಟ್ಟೇಗೌಡ, ಮುಖಂಡರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-36-161241542</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಳೆನರಸೀಪುರ: ತಾಲ್ಲೂಕಿನ ಎಸ್.ಅಂಕನಹಳ್ಳಿ ಗ್ರಾಮದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಎಚ್.ಡಿ. ರೇವಣ್ಣ ಭಾನುವಾರ ಭೂಮಿಪೂಜೆ ನೆರವೇರಿಸಿದರು.</p>.<p>ನಂತರ ಮಾತನಾಡಿದ ಅವರು, ‘ರಸ್ತೆ ಡಾಂಬರೀಕರಣಕ್ಕೆ 3 ವರ್ಷದ ಹಿಂದೆ ₹ 1 ಕೋಟಿಗೆ ಟೆಂಡರ್ ಕರೆಯಲಾಗಿತ್ತು. ಕಾಂಗ್ರೆಸ್ ಸರ್ಕಾರ ಯಾವುದೇ ಕಾಮಗಾರಿಗೆ ಹಣ ನೀಡುತ್ತಿಲ್ಲ. ಸಾವಿರಾರು ಕೋಟಿ ಬಿಲ್ ಬಾಕಿ ಉಳಿಸಿಕೊಂಡಿದೆ. ಗುತ್ತಿಗೆದಾರರ ಮನವೊಲಿಸಿ ಈ ರಸ್ತೆ ಕೆಲಸ ಮಾಡಿಸುತ್ತಿದ್ದೇನೆ’ ಎಂದರು.</p>.<p>‘ಕಾಂಗ್ರೆಸ್ ಸರ್ಕಾರ ರಸ್ತೆಗಳನ್ನು ಅಭಿವೃದ್ಧಿಪಡಿಸುತ್ತಿಲ್ಲ. ಕನಿಷ್ಠ ಗುಂಡಿ ಮುಚ್ಚಲೂ ಹಣ ನೀಡುತ್ತಿಲ್ಲ. ಚನ್ನರಾಯಪಟ್ಟಣ ರಸ್ತೆ ಗುಂಡಿ ಮುಚ್ಚಲು ₹75 ಲಕ್ಷಕ್ಕೆ ಟೆಂಡರ್ ಆಗಿ ಕೆಲಸವನ್ನು ಪ್ರಾರಂಭಿಸಿದ್ದ ಗುತ್ತಿಗೆದಾರ ಅಪೂರ್ಣ ಕಾಮಗಾರಿ ಮಾಡಿದ್ದಾರೆ. ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಕ್ರಮ ಕೈಗೊಳ್ಳದೇ, ಸುಮ್ಮನಿದ್ದಾರೆ’ ಎಂದು ದೂರಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪುಟ್ಟೇಗೌಡ, ಮುಖಂಡರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-36-161241542</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>