<p>ಹೊಳೆನರಸೀಪುರ: ‘ಶಿಕ್ಷಣ ಕಲಿಸಿದ ಗುರುಗಳಿಂದ ಬದುಕು ಕಟ್ಟಿಕೊಂಡ ನಾವೆಲ್ಲರೂ ನಮ್ಮ ಜೀವನದಲ್ಲಿ ಶಿಕ್ಷಕರನ್ನು ಮರೆಯಲು ಸಾಧ್ಯವೇ ಇಲ್ಲ’ ಎಂದು ತಹಶೀಲ್ದಾರ್ ವೈ.ಎಂ. ರೇಣುಕುಮಾರ್ ಬಣ್ಣಿಸಿದರು.</p>.<p>ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ನಗರದ ಎಂ.ಎ.ಎ.ಕೆ. ಸರ್ಕಾರಿ ಶಾಲೆ ಶತಮಾನ ಪೂರೈಸಿದ್ದು ಈ ಶಾಲೆಯಲ್ಲಿ 50 ವರ್ಷಗಳ ಹಿಂದೆ 1ನೇ ತರಗತಿಗೆ ಸೇರಿದ್ದ ವಿದ್ಯಾರ್ಥಿಗಳು ನಿವೃತ್ತರಾಗಿರುವ ಅಂದಿನ ಶಿಕ್ಷಕರನ್ನು ಹಾಗೂ ಈ ಶಾಲೆಯಲ್ಲಿ ಸೇವೆ ಸಲ್ಲಿಸಿ ಬೇರೆಡೆಗೆ ವರ್ಗವಾದ ಎಲ್ಲಾ ಶಿಕ್ಷಕರಿಗಾಗಿ ಏರ್ಪಡಿಸಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಎಲ್ಲ ಶಿಕ್ಷಕ, ಶಿಕ್ಷಕಿಯರಿಗೆ ಗುರುವಂದನೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯ. ಈ ಗೌರವ ಶಿಕ್ಷಕರಿಗೆ ಮಾತ್ರ ಸಿಗುತ್ತದೆ. ಇಂತಹ ಕಾರ್ಯಕ್ರಮ ಏರ್ಪಡಿಸಿ ನಿಮ್ಮ ಶಿಕ್ಷಕರನ್ನೆಲ್ಲ ಗುರುಗಳ ಸ್ಥಾನದಲ್ಲಿಟ್ಟು ಗೌರವಿಸಿರುವುದು ಶ್ಲಾಘನೀಯ ಕಾರ್ಯ. ನಿಮ್ಮ ಈ ಕಾರ್ಯಕ್ರಮ ನೋಡಿದ ನಂತರ ನಾನೂ ನನ್ನ ಜೊತೆ ಓದುತ್ತಿದ್ದ ಗೆಳೆಯರನ್ನೆಲ್ಲ ಸೇರಿಸಿ ನನಗೆ ವಿದ್ಯೆ ಕಲಿಸಿದ ಗುರುಗಳಿಗೆ ಇಂತಹದೇ ಗುರುವಂದನೆ ಸಲ್ಲಿಸಲು ನಿರ್ಧರಿಸಿದ್ದೇನೆ. ನಿಮ್ಮ ಈ ಕಾರ್ಯಕ್ರಮ ನನಗೆ ಪ್ರೇರಣೆ ನೀಡಿದೆ’ ಎಂದರು.</p>.<p>ಶಿಕ್ಷಕರು ತಮ್ಮ ಸೇವಾ ಅವಧಿಯಲ್ಲಿ ವಿದ್ಯೆ ಕಲಿಸಿದ ವಿದ್ಯಾರ್ಥಿಗಳೆಲರನ್ನೂ ನೆನಪಿನಲ್ಲಿ ಇಟ್ಟುಕೊಳ್ಳಲು ಸಾಧ್ಯ ಇಲ್ಲ. ಆದರೆ ವಿದ್ಯೆ ಕಲಿತ ಪ್ರತಿಯೊಬ್ಬ ವಿದ್ಯಾರ್ಥಿಯೂ ವಿದ್ಯೆ ಕಲಿಸಿದ, ನೀತಿ ಹೇಳಿದ ಶಿಕ್ಷಕರನ್ನು ಜೀವಿತಾವಧಿವರೆಗೆ ನೆನಪಿನಲ್ಲಿ ಇಟ್ಟುಕೊಳ್ಳುವಂತಹ ನೊಬಲ್ ವೃತ್ತಿ ಶಿಕ್ಷಕ ವೃತ್ತಿ ಎಂದರು.</p>.<p>ಶಾಲೆಯ ಮುಖ್ಯಶಿಕ್ಷಕ ಮಹೇಶಪ್ಪ ಮಾತನಾಡಿದರು.</p>.<p>ಶಿಕ್ಷಕರಾದ ಎಂ.ಕೆ. ಗುರುವಯ್ಯ, ಸುಶೀಲಮ್ಮ, ಎಚ್.ಟಿ. ನಾಗರತ್ನ, ಬೋಜರಾಜ್, ಪದ್ಮಜಾ, ಪ್ರೇಮಾ ಸೇರಿ ಹಲವರನ್ನು ಸನ್ಮಾನಿಸಲಾಯಿತು. ಚಂದನಾ ಕಾರ್ಯಕ್ರಮ ನಿರೂಪಿಸಿ, ರಾಮಚಂದ್ರ ಬಂಡೆ ಸ್ವಾಗತಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-36-1386873140</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಳೆನರಸೀಪುರ: ‘ಶಿಕ್ಷಣ ಕಲಿಸಿದ ಗುರುಗಳಿಂದ ಬದುಕು ಕಟ್ಟಿಕೊಂಡ ನಾವೆಲ್ಲರೂ ನಮ್ಮ ಜೀವನದಲ್ಲಿ ಶಿಕ್ಷಕರನ್ನು ಮರೆಯಲು ಸಾಧ್ಯವೇ ಇಲ್ಲ’ ಎಂದು ತಹಶೀಲ್ದಾರ್ ವೈ.ಎಂ. ರೇಣುಕುಮಾರ್ ಬಣ್ಣಿಸಿದರು.</p>.<p>ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ನಗರದ ಎಂ.ಎ.ಎ.ಕೆ. ಸರ್ಕಾರಿ ಶಾಲೆ ಶತಮಾನ ಪೂರೈಸಿದ್ದು ಈ ಶಾಲೆಯಲ್ಲಿ 50 ವರ್ಷಗಳ ಹಿಂದೆ 1ನೇ ತರಗತಿಗೆ ಸೇರಿದ್ದ ವಿದ್ಯಾರ್ಥಿಗಳು ನಿವೃತ್ತರಾಗಿರುವ ಅಂದಿನ ಶಿಕ್ಷಕರನ್ನು ಹಾಗೂ ಈ ಶಾಲೆಯಲ್ಲಿ ಸೇವೆ ಸಲ್ಲಿಸಿ ಬೇರೆಡೆಗೆ ವರ್ಗವಾದ ಎಲ್ಲಾ ಶಿಕ್ಷಕರಿಗಾಗಿ ಏರ್ಪಡಿಸಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಎಲ್ಲ ಶಿಕ್ಷಕ, ಶಿಕ್ಷಕಿಯರಿಗೆ ಗುರುವಂದನೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯ. ಈ ಗೌರವ ಶಿಕ್ಷಕರಿಗೆ ಮಾತ್ರ ಸಿಗುತ್ತದೆ. ಇಂತಹ ಕಾರ್ಯಕ್ರಮ ಏರ್ಪಡಿಸಿ ನಿಮ್ಮ ಶಿಕ್ಷಕರನ್ನೆಲ್ಲ ಗುರುಗಳ ಸ್ಥಾನದಲ್ಲಿಟ್ಟು ಗೌರವಿಸಿರುವುದು ಶ್ಲಾಘನೀಯ ಕಾರ್ಯ. ನಿಮ್ಮ ಈ ಕಾರ್ಯಕ್ರಮ ನೋಡಿದ ನಂತರ ನಾನೂ ನನ್ನ ಜೊತೆ ಓದುತ್ತಿದ್ದ ಗೆಳೆಯರನ್ನೆಲ್ಲ ಸೇರಿಸಿ ನನಗೆ ವಿದ್ಯೆ ಕಲಿಸಿದ ಗುರುಗಳಿಗೆ ಇಂತಹದೇ ಗುರುವಂದನೆ ಸಲ್ಲಿಸಲು ನಿರ್ಧರಿಸಿದ್ದೇನೆ. ನಿಮ್ಮ ಈ ಕಾರ್ಯಕ್ರಮ ನನಗೆ ಪ್ರೇರಣೆ ನೀಡಿದೆ’ ಎಂದರು.</p>.<p>ಶಿಕ್ಷಕರು ತಮ್ಮ ಸೇವಾ ಅವಧಿಯಲ್ಲಿ ವಿದ್ಯೆ ಕಲಿಸಿದ ವಿದ್ಯಾರ್ಥಿಗಳೆಲರನ್ನೂ ನೆನಪಿನಲ್ಲಿ ಇಟ್ಟುಕೊಳ್ಳಲು ಸಾಧ್ಯ ಇಲ್ಲ. ಆದರೆ ವಿದ್ಯೆ ಕಲಿತ ಪ್ರತಿಯೊಬ್ಬ ವಿದ್ಯಾರ್ಥಿಯೂ ವಿದ್ಯೆ ಕಲಿಸಿದ, ನೀತಿ ಹೇಳಿದ ಶಿಕ್ಷಕರನ್ನು ಜೀವಿತಾವಧಿವರೆಗೆ ನೆನಪಿನಲ್ಲಿ ಇಟ್ಟುಕೊಳ್ಳುವಂತಹ ನೊಬಲ್ ವೃತ್ತಿ ಶಿಕ್ಷಕ ವೃತ್ತಿ ಎಂದರು.</p>.<p>ಶಾಲೆಯ ಮುಖ್ಯಶಿಕ್ಷಕ ಮಹೇಶಪ್ಪ ಮಾತನಾಡಿದರು.</p>.<p>ಶಿಕ್ಷಕರಾದ ಎಂ.ಕೆ. ಗುರುವಯ್ಯ, ಸುಶೀಲಮ್ಮ, ಎಚ್.ಟಿ. ನಾಗರತ್ನ, ಬೋಜರಾಜ್, ಪದ್ಮಜಾ, ಪ್ರೇಮಾ ಸೇರಿ ಹಲವರನ್ನು ಸನ್ಮಾನಿಸಲಾಯಿತು. ಚಂದನಾ ಕಾರ್ಯಕ್ರಮ ನಿರೂಪಿಸಿ, ರಾಮಚಂದ್ರ ಬಂಡೆ ಸ್ವಾಗತಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-36-1386873140</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>