ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆಗಳಿಗೆ ರಜೆ

Last Updated 10 ಜುಲೈ 2022, 19:57 IST
ಅಕ್ಷರ ಗಾತ್ರ

ಹಾಸನ: ಭಾರೀ ಮಳೆ‌ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲೆಯ ಅರಕಲಗೂಡು, ಆಲೂರು ಹಾಗೂ ಸಕಲೇಶಪುರ ತಾಲ್ಲೂಕುಗಳ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಅಂಗನವಾಡಿಗಳಿಗೆ ಜಿಲ್ಲಾಧಿಕಾರಿ ‌ಆರ್. ಗಿರೀಶ್ ರಜೆ ಘೋಷಿಸಿದ್ದಾರೆ.

ಸಕಲೇಶಪುರ, ಆಲೂರು ತಾಲ್ಲೂಕಿನಲ್ಲಿ ನಿರಂತರ ಮಳೆಯಾಗುತ್ತಿದೆ. ಮರಗಳು ಬಿದ್ದಿರುವ ಘಟನೆ ನಡೆದಿವೆ. ಇನ್ನೊಂದೆಡೆ ಅರಕಲಗೂಡು ತಾಲ್ಲೂಕಿನಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಹೀಗಾಗಿ ಈ ಮೂರು ತಾಲ್ಲೂಕುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.

ಹಾಸನ, ಬೇಲೂರು, ಚನ್ನರಾಯಪಟ್ಟಣ, ಅರಸೀಕೆರೆ ತಾಲ್ಲೂಕುಗಳಲ್ಲಿ ಎಂದಿನಂತೆ ಶಾಲೆ–ಕಾಲೇಜು ತರಗತಿಗಳು ನಡೆಯಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT