<p><strong>ಹಾಸನ:</strong> ‘ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಹನಿಟ್ರ್ಯಾಪ್ ಮಾಡಿಸಿದ್ದಾರೆ. ಅವರೇ ಇದರ ನಿರ್ದೇಶಕ. ಅಧಿಕಾರದ ಆಸೆಗಾಗಿ ಹಾಗೂ ಅವರ ವಿರುದ್ಧ ಧ್ವನಿ ಎತ್ತಿದವರ ಸದ್ದಡಗಿಸಲು ಹೀಗೆ ಮಾಡಿದ್ದಾರೆ’ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪಿಸಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಡಿ.ಕೆ. ಶಿವಕುಮಾರ್ ಬಳಿ ಹನಿಟ್ರ್ಯಾಪ್ ಮಾಡುವ ತಂಡವಿದೆ. ಹನಿಟ್ರ್ಯಾಪ್ ಮಾಡಿ ಅದನ್ನು ಒಂದೆಡೆ ಗುಪ್ತವಾಗಿ ಇಡಲಾಗುತ್ತಿದೆ. ಅದನ್ನು ಪರಿಶೀಲಿಸುವವರೂ ಇದ್ದಾರೆ’ ಎಂದರು.</p>.<p>‘ಹನಿಟ್ರ್ಯಾಪ್ಗೆ ಸಂಬಂಧಿಸಿ ಕೆಲವು ಮಹತ್ವದ ದಾಖಲೆಗಳು ನಮ್ಮಲ್ಲಿವೆ. ಅವನ್ನು ತಲುಪಿಸಬೇಕಾದವರಿಗೆ ತಲುಪಿಸಿಯಾಗಿದೆ. ಕೂಡಲೇ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>‘ಒಂದು ವರ್ಷದ ಹಿಂದೆಯೇ ನಾನು ಈ ಬಗ್ಗೆ ಹೇಳಿದ್ದೆ. ಹನಿಟ್ರ್ಯಾಪ್ ಗ್ಯಾಂಗ್ಗೆ ಡಿ.ಕೆ.ಶಿವಕುಮಾರ್ ಅವರೇ ನಾಯಕರು. ಇದೀಗ ಅವರ ಪಕ್ಷದ ಸಚಿವರಿಗೆ ಸತ್ಯ ಗೊತ್ತಾಗಿದೆ. ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯತ್ನಿಸಿದವರ ಹನಿಟ್ರ್ಯಾಪ್ ಮಾಡಿದ್ದಾರೆ. ಅಧಿಕಾರಕ್ಕಾಗಿ ಮುಖ್ಯಮಂತ್ರಿಯನ್ನೇ ಹನಿಟ್ರ್ಯಾಪ್ ಮಾಡುತ್ತಾರೆ’ ಎಂದು ಆಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ‘ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಹನಿಟ್ರ್ಯಾಪ್ ಮಾಡಿಸಿದ್ದಾರೆ. ಅವರೇ ಇದರ ನಿರ್ದೇಶಕ. ಅಧಿಕಾರದ ಆಸೆಗಾಗಿ ಹಾಗೂ ಅವರ ವಿರುದ್ಧ ಧ್ವನಿ ಎತ್ತಿದವರ ಸದ್ದಡಗಿಸಲು ಹೀಗೆ ಮಾಡಿದ್ದಾರೆ’ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪಿಸಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಡಿ.ಕೆ. ಶಿವಕುಮಾರ್ ಬಳಿ ಹನಿಟ್ರ್ಯಾಪ್ ಮಾಡುವ ತಂಡವಿದೆ. ಹನಿಟ್ರ್ಯಾಪ್ ಮಾಡಿ ಅದನ್ನು ಒಂದೆಡೆ ಗುಪ್ತವಾಗಿ ಇಡಲಾಗುತ್ತಿದೆ. ಅದನ್ನು ಪರಿಶೀಲಿಸುವವರೂ ಇದ್ದಾರೆ’ ಎಂದರು.</p>.<p>‘ಹನಿಟ್ರ್ಯಾಪ್ಗೆ ಸಂಬಂಧಿಸಿ ಕೆಲವು ಮಹತ್ವದ ದಾಖಲೆಗಳು ನಮ್ಮಲ್ಲಿವೆ. ಅವನ್ನು ತಲುಪಿಸಬೇಕಾದವರಿಗೆ ತಲುಪಿಸಿಯಾಗಿದೆ. ಕೂಡಲೇ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>‘ಒಂದು ವರ್ಷದ ಹಿಂದೆಯೇ ನಾನು ಈ ಬಗ್ಗೆ ಹೇಳಿದ್ದೆ. ಹನಿಟ್ರ್ಯಾಪ್ ಗ್ಯಾಂಗ್ಗೆ ಡಿ.ಕೆ.ಶಿವಕುಮಾರ್ ಅವರೇ ನಾಯಕರು. ಇದೀಗ ಅವರ ಪಕ್ಷದ ಸಚಿವರಿಗೆ ಸತ್ಯ ಗೊತ್ತಾಗಿದೆ. ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯತ್ನಿಸಿದವರ ಹನಿಟ್ರ್ಯಾಪ್ ಮಾಡಿದ್ದಾರೆ. ಅಧಿಕಾರಕ್ಕಾಗಿ ಮುಖ್ಯಮಂತ್ರಿಯನ್ನೇ ಹನಿಟ್ರ್ಯಾಪ್ ಮಾಡುತ್ತಾರೆ’ ಎಂದು ಆಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>