ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಮಿತಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕವಿತ ರಾಜರಾಂ ಅವರು ಮಾತನಾಡಿ, ಕೋವಿಡ್ ಆತಂಕಗಳ ನಡುವೆ ಶಿಷ್ಟಾಚಾರಕ್ಕೆ ತೊಂದರೆ ಆಗದಂತೆ ರಾಜ್ಯೋತ್ಸವ ಆಚರಿಸಬೇಕು. ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಉಸ್ತುವಾರಿ ಸಚಿವರು ಧ್ವಜರೋಹಣ ನೆರವೇರಿಸಿ, ಸಂದೇಶ ನೀಡುವರು ಎಂದು ವಿವರಿಸಿದರು.