<p><strong>ಹೆತ್ತೂರು:</strong> ಸರ್ಕಾರದಿಂದ ಆಶ್ರಯ ಯೋಜನೆಯಡಿ ಮಂಜೂರಾದ ಮನೆಯನ್ನು ಜೆಸಿಬಿ ಬಳಸಿ ನಾಶ ಮಾಡಿರುವ ಅರಣ್ಯ ಇಲಾಖೆಯ ಕ್ರಮಕ್ಕೆ ಮರಡಿಕೆರೆ ಗ್ರಾಮದ ಸಂತ್ರಸ್ತ ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ.</p>.<p>‘ಮರಡಿಕೆರೆಯ ಸರ್ವೆ ನಂ.361ರಲ್ಲಿ ಸರ್ಕಾರದ ಆಶ್ರಯ ಯೋಜನೆಯಡಿ ಪ್ರಿಯಾ ಡಿ.ಕೆ. ಅವರು ಮನೆ ನಿರ್ಮಾಣ ಮಾಡುತ್ತಿದ್ದರು. ಜುಲೈ 4ರಂದು ಅರಣ್ಯ ಇಲಾಖೆ ಅಧಿಕಾರಿಗಳು ಜೆಸಿಬಿ ಮೂಲಕ ನೆಲಸಮ ಮಾಡಿದ್ದಾರೆ. ಈ ಮನೆಯು 2021–22ನೇ ಸಾಲಿನಲ್ಲಿ ಅಶ್ರಯ ಯೋಜನೆಯಡಿ ಮಂಜೂರಾಗಿತ್ತು. ಹಂತ ಹಂತವಾಗಿ ನಾಲ್ಕು ಬಾರಿಗೆ ಅನುದಾನ ಬಿಡುಗಡೆಯಾಗಿದ್ದು, ಮನೆ ನಿರ್ಮಾಣ ಪೂರ್ಣ ಹಂತದಲ್ಲಿತ್ತು. ಕುಟುಂಬ ವಾಸಕ್ಕೆ ತೆರಳಬೇಕು ಎನ್ನುತ್ತಿದ್ದ ಸಂದರ್ಭದಲ್ಲಿ ಈ ದೌರ್ಜನ್ಯ ನಡೆಸಲಾಗಿದೆ’ ಎಂದು ಸ್ಥಳೀಯರು ದೂರಿದ್ದಾರೆ.</p>.<p>‘ಮನೆಯು ಅರಣ್ಯ ಭೂಮಿಯೊಳಗೆ ನಿರ್ಮಾಣವಾಗಿದೆ ಎಂಬ ಕಾರಣ ನೀಡಿರುವ ಅರಣ್ಯ ಇಲಾಖೆ, ಯಾವುದೇ ನೋಟಿಸ್ ನೀಡದೆ ಏಕಾಏಕಿ ಮನೆ ನೆಲಸಮ ಮಾಡಿದೆ. ಯಸಳೂರು ವಲಯದ ಆರ್ಎಫ್ಒ ಕೃಷ್ಣಾ ಅವರ ವಿರುದ್ಧ ದಬ್ಬಾಳಿಕೆಯ ಆರೋಪ ಕೇಳಿ ಬಂದಿದ್ದು, ಈ ಪ್ರದೇಶದಲ್ಲಿಯೇ ಇನ್ನು ಕೆಲವರು ಮನೆ ಕಟ್ಟಿಕೊಂಡಿದ್ದರೂ, ಪ್ರಿಯಾ ಮತ್ತು ಶೋಭರಾಜ್ ದಂಪತಿಯ ಮನೆ ಮಾತ್ರ ಏಕೆ ನೆಲಸಮ ಮಾಡಲಾಗಿದೆ’ ಎಂದು ಪ್ರಶ್ನಿಸಿದ್ದಾರೆ.</p>.<p>ಈ ಸಂಬಂಧ ಪರಿಶೀಲನೆ ನಡೆಸಿ ನ್ಯಾಯ ಒದಗಿಸಬೇಕೆಂದು ಸಂತ್ರಸ್ತ ಕುಟುಂಬ ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<p>ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆತ್ತೂರು:</strong> ಸರ್ಕಾರದಿಂದ ಆಶ್ರಯ ಯೋಜನೆಯಡಿ ಮಂಜೂರಾದ ಮನೆಯನ್ನು ಜೆಸಿಬಿ ಬಳಸಿ ನಾಶ ಮಾಡಿರುವ ಅರಣ್ಯ ಇಲಾಖೆಯ ಕ್ರಮಕ್ಕೆ ಮರಡಿಕೆರೆ ಗ್ರಾಮದ ಸಂತ್ರಸ್ತ ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ.</p>.<p>‘ಮರಡಿಕೆರೆಯ ಸರ್ವೆ ನಂ.361ರಲ್ಲಿ ಸರ್ಕಾರದ ಆಶ್ರಯ ಯೋಜನೆಯಡಿ ಪ್ರಿಯಾ ಡಿ.ಕೆ. ಅವರು ಮನೆ ನಿರ್ಮಾಣ ಮಾಡುತ್ತಿದ್ದರು. ಜುಲೈ 4ರಂದು ಅರಣ್ಯ ಇಲಾಖೆ ಅಧಿಕಾರಿಗಳು ಜೆಸಿಬಿ ಮೂಲಕ ನೆಲಸಮ ಮಾಡಿದ್ದಾರೆ. ಈ ಮನೆಯು 2021–22ನೇ ಸಾಲಿನಲ್ಲಿ ಅಶ್ರಯ ಯೋಜನೆಯಡಿ ಮಂಜೂರಾಗಿತ್ತು. ಹಂತ ಹಂತವಾಗಿ ನಾಲ್ಕು ಬಾರಿಗೆ ಅನುದಾನ ಬಿಡುಗಡೆಯಾಗಿದ್ದು, ಮನೆ ನಿರ್ಮಾಣ ಪೂರ್ಣ ಹಂತದಲ್ಲಿತ್ತು. ಕುಟುಂಬ ವಾಸಕ್ಕೆ ತೆರಳಬೇಕು ಎನ್ನುತ್ತಿದ್ದ ಸಂದರ್ಭದಲ್ಲಿ ಈ ದೌರ್ಜನ್ಯ ನಡೆಸಲಾಗಿದೆ’ ಎಂದು ಸ್ಥಳೀಯರು ದೂರಿದ್ದಾರೆ.</p>.<p>‘ಮನೆಯು ಅರಣ್ಯ ಭೂಮಿಯೊಳಗೆ ನಿರ್ಮಾಣವಾಗಿದೆ ಎಂಬ ಕಾರಣ ನೀಡಿರುವ ಅರಣ್ಯ ಇಲಾಖೆ, ಯಾವುದೇ ನೋಟಿಸ್ ನೀಡದೆ ಏಕಾಏಕಿ ಮನೆ ನೆಲಸಮ ಮಾಡಿದೆ. ಯಸಳೂರು ವಲಯದ ಆರ್ಎಫ್ಒ ಕೃಷ್ಣಾ ಅವರ ವಿರುದ್ಧ ದಬ್ಬಾಳಿಕೆಯ ಆರೋಪ ಕೇಳಿ ಬಂದಿದ್ದು, ಈ ಪ್ರದೇಶದಲ್ಲಿಯೇ ಇನ್ನು ಕೆಲವರು ಮನೆ ಕಟ್ಟಿಕೊಂಡಿದ್ದರೂ, ಪ್ರಿಯಾ ಮತ್ತು ಶೋಭರಾಜ್ ದಂಪತಿಯ ಮನೆ ಮಾತ್ರ ಏಕೆ ನೆಲಸಮ ಮಾಡಲಾಗಿದೆ’ ಎಂದು ಪ್ರಶ್ನಿಸಿದ್ದಾರೆ.</p>.<p>ಈ ಸಂಬಂಧ ಪರಿಶೀಲನೆ ನಡೆಸಿ ನ್ಯಾಯ ಒದಗಿಸಬೇಕೆಂದು ಸಂತ್ರಸ್ತ ಕುಟುಂಬ ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<p>ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>