<p>ಹಾಸನ: ಹೇಮಾವತಿ ಜಲಾಶಯ ಮುಳುಗಡೆ ಸಂತ್ರಸ್ತರ (ಎಚ್ಆರ್ಪಿ) ಹೆಸರಿನಲ್ಲಿ ಸಾವಿರಾರು ಎಕರೆ ಸರ್ಕಾರಿ ಭೂಮಿ ಕಬಳಿಸಿರುವ ಹಗರಣದ ತನಿಖೆ ಪ್ರಗತಿಯಲ್ಲಿದ್ದು, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.</p>.<p>ಕಾನೂನು ಪ್ರಕಾರ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುತ್ತಿದೆ. ಎಷ್ಟೇ ಪ್ರಭಾವಿಯಾಗಿದ್ದರೂ ಬಿಡುವುದಿಲ್ಲ ಮತ್ತು ಇದರಲ್ಲಿ ರಾಜಕೀಯ ಒತ್ತಡ ಇಲ್ಲ. ಅಕ್ರಮ ಭೂ ಮಂಜೂರಾತಿಯನ್ನು ರದ್ದುಗೊಳಿಸಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಆರ್.ಆರ್.ನಗರ ಮತ್ತು ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿತ್ತು ಎಂಬ<br />ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿದ ಸಚಿವರು, ಜೆಡಿಎಸ್ ಸ್ವತಂತ್ರ ಪ್ರಾದೇಶಿಕ ಪಕ್ಷ,ಅವರು ಯಾವಾಗ ಯಾರ ಜೊತೆ ಹೋಗ್ತಾರೆ, ಯಾವಾಗ ಬರ್ತಾರೆ ಆ ಬ್ರಹ್ಮನಿಗೂ ಗೊತ್ತಾಗಲ್ಲ ಎಂದರು.</p>.<p>60 ವರ್ಷ ತುಂಬಿದ, ನಾಲ್ಕು ಎಕರೆಗೂ ಕಡಿಮೆ ಜಮೀನು ಇರುವವರೆಲ್ಲರಿಗೂ ಅಧಿಕಾರಿಗಳೆ ಫಲಾನುಭವಿಗಳ ಮನೆ ಬಾಗಿಲಿಗೆ ತೆರಳಿ ಪಿಂಚಣಿ ಮಂಜೂರು ಮಾಡುವ ಸುಧಾರಿತ ಪಿಂಚಣಿ ಯೋಜನೆ 20 ದಿನಗಳಲ್ಲಿ ಜಾರಿಗೆ ಬರಲಿದೆ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ಹೇಮಾವತಿ ಜಲಾಶಯ ಮುಳುಗಡೆ ಸಂತ್ರಸ್ತರ (ಎಚ್ಆರ್ಪಿ) ಹೆಸರಿನಲ್ಲಿ ಸಾವಿರಾರು ಎಕರೆ ಸರ್ಕಾರಿ ಭೂಮಿ ಕಬಳಿಸಿರುವ ಹಗರಣದ ತನಿಖೆ ಪ್ರಗತಿಯಲ್ಲಿದ್ದು, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.</p>.<p>ಕಾನೂನು ಪ್ರಕಾರ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುತ್ತಿದೆ. ಎಷ್ಟೇ ಪ್ರಭಾವಿಯಾಗಿದ್ದರೂ ಬಿಡುವುದಿಲ್ಲ ಮತ್ತು ಇದರಲ್ಲಿ ರಾಜಕೀಯ ಒತ್ತಡ ಇಲ್ಲ. ಅಕ್ರಮ ಭೂ ಮಂಜೂರಾತಿಯನ್ನು ರದ್ದುಗೊಳಿಸಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಆರ್.ಆರ್.ನಗರ ಮತ್ತು ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿತ್ತು ಎಂಬ<br />ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿದ ಸಚಿವರು, ಜೆಡಿಎಸ್ ಸ್ವತಂತ್ರ ಪ್ರಾದೇಶಿಕ ಪಕ್ಷ,ಅವರು ಯಾವಾಗ ಯಾರ ಜೊತೆ ಹೋಗ್ತಾರೆ, ಯಾವಾಗ ಬರ್ತಾರೆ ಆ ಬ್ರಹ್ಮನಿಗೂ ಗೊತ್ತಾಗಲ್ಲ ಎಂದರು.</p>.<p>60 ವರ್ಷ ತುಂಬಿದ, ನಾಲ್ಕು ಎಕರೆಗೂ ಕಡಿಮೆ ಜಮೀನು ಇರುವವರೆಲ್ಲರಿಗೂ ಅಧಿಕಾರಿಗಳೆ ಫಲಾನುಭವಿಗಳ ಮನೆ ಬಾಗಿಲಿಗೆ ತೆರಳಿ ಪಿಂಚಣಿ ಮಂಜೂರು ಮಾಡುವ ಸುಧಾರಿತ ಪಿಂಚಣಿ ಯೋಜನೆ 20 ದಿನಗಳಲ್ಲಿ ಜಾರಿಗೆ ಬರಲಿದೆ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>