ಶುಕ್ರವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಭೂ ಕಬಳಿಕೆ ಆಗಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿವೆ. ಲಭ್ಯ ಮಾಹಿತಿ ಪ್ರಕಾರ ಸಾವಿರಾರು ಕೋಟಿ ರೂಪಾಯಿ ಅಕ್ರಮ ನಡೆದಿದ್ದು, 3ರಿಂದ 4 ಸಾವಿರ ಎಕರೆ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಲಾಗಿದೆ. ಒಂದೇ ಪ್ರಮಾಣಪತ್ರಕ್ಕೆ ಒಬ್ಬರೇ ವ್ಯಕ್ತಿಗೆ ಎರಡರಿಂದ ಮೂರು ಬಾರಿ ಭೂಮಿ ಮಂಜೂರು ಮಾಡಲಾಗಿದೆ’ ಎಂದರು.