ಹಾಸನ: ಹೇಮಾವತಿ ಜಲಾಶಯ ಯೋಜನೆ (ಎಚ್ಆರ್ಪಿ) ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿ ಸಾವಿರಾರು ಎಕರೆ ಸರ್ಕಾರಿ ಭೂಮಿ ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ತನಿಖಾಧಿಕಾರಿಯ ವರದಿ ಅನ್ವಯ 2,370 ಜನರಿಗೆ ನೋಟಿಸ್ ನೀಡಿದ್ದು, 490 ಮಂದಿ ನೋಟಿಸ್ಗೆ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದರು.
ಕೆಲವರಿಗೆ ನೋಟಿಸ್ ತಲುಪಿಲ್ಲ. ನೋಟಿಸ್ಗೆ ಉತ್ತರಿಸಿರುವವರಿಗೆ ಮತ್ತೊಮ್ಮೆಏಳು ದಿನಗಳ ಕಾಲಾವಕಾಶ ನೀಡಿ, ಅಗತ್ಯ ದಾಖಲೆಗಳೊಂದಿಗೆ ಬಂದು ಉತ್ತರ ನೀಡಲು ಸೂಚಿಸಲಾಗಿದೆ. ವಿಶೇಷ ಭೂ ಸ್ವಾಧೀನಾಧಿಕಾರಿ ದಾಖಲೆಗಳನ್ನು ಪರಿಶೀಲಿಸಿ ಆದೇಶ ಹೊರಡಿಸಲಿದ್ದಾರೆ. ಈ ಸಂಬಂಧ ಶೀಘ್ರ ಪತ್ರಿಕಾ ಪ್ರಕಟಣೆ ಹೊರಡಿಸಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.